ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ನಡೆಯುವ ಅಧಿವೇಶನದಲ್ಲಿ ಆರ್ಎಸ್ಎಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ಭಯ್ಯಾಜಿ ಜೋಶಿ, ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಪ್ರಮುಖರಾದ ಡಾ.ಮನಮೋಹನ ವೈದ್ಯ, ಭಾಗಯ್ಯ, ಡಾ. ಕೃಷ್ಣ ಗೋಪಾಲ್, ಸುರೇಶ ಸೋನಿ, ಸಿ.ಆರ್. ಮುಕುಂದ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.