<p><strong>ಮೈಸೂರು:</strong> ‘ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಷಯಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಆ ವರದಿ ಆಧರಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಬುಧವಾರ ಇಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಕೋರಿದ್ದಾರೆ. ಇದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p><p>‘ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿರುವ ದುಷ್ಟ ಶಕ್ತಿಗಳು ಯಾವಾಗಲೂ ಇಂತಹದ್ದೇ ಕೆಲಸ ಮಾಡುತ್ತಾ ಬಂದಿವೆ. ಅವರ ಬೆದರಿಕೆಗಳಿಗೆ ಹೆದರುವುದಿಲ್ಲ. ಅವರಿಗೆ ಅಗತ್ಯವಾದ ಭದ್ರತೆ ಒದಗಿಸಲಾಗುವುದು’ ಎಂದರು. </p><p>‘ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧಿಸಿ’ ಎಂಬ ಬಿಜೆಪಿ ನಾಯಕರ ಸವಾಲಿಗೆ ಪ್ರತಿಕ್ರಿಯಿಸಿದ ಸಿ.ಎಂ. ‘ಬಿಜೆಪಿಯವರು ಚುನಾವಣೆ ಸಂದರ್ಭ, ತಾಕತ್ತಿದ್ದರೆ ಬನ್ನಿ ಎಂದು ಸವಾಲು ಹಾಕಿದ್ದರು. ಆದರೆ ನಂತರದಲ್ಲಿ ಏನಾಯಿತು? ಸೋಲಲಿಲ್ಲವೇ?’ ಎಂದರು.</p>.<div><div class="bigfact-title">ಹಿನ್ನಡೆ ಆಗಿಲ್ಲ</div><div class="bigfact-description">‘ಜಾತಿವಾರು ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಯು ಬೆಂಗಳೂರು ನಗರ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ವೇಗವಾಗಿ ನಡೆದಿದ್ದು, ಶೇ 90ಕ್ಕಿಂತ ಹೆಚ್ಚು ಗುರಿ ಸಾಧನೆ ಆಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.</div></div>.<p><strong>ತಾರತಮ್ಯವಿಲ್ಲ</strong></p><p>ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಶ್ರೀನಿವಾಸಪುರ ಶಾಸಕರು ನ್ಯಾಯಾಲಯದ ಮೆಟ್ಟಿಲು ಏರಿರುವ ಕುರಿತು ಪ್ರತಿಕ್ರಿಯಿಸಿ ‘ ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ನಮ್ಮ ಶಾಸಕರಿಗೆ ಅನುದಾನ ಕೊಟ್ಟಿದ್ದರ?’ ಎಂದು ಪ್ರಶ್ನಿಸಿದರು. ‘ ಯಾರಿಗೂ ತಾರತಮ್ಯ ಮಾಡುವುದಿಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಷಯಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಆ ವರದಿ ಆಧರಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಬುಧವಾರ ಇಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಕೋರಿದ್ದಾರೆ. ಇದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p><p>‘ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿರುವ ದುಷ್ಟ ಶಕ್ತಿಗಳು ಯಾವಾಗಲೂ ಇಂತಹದ್ದೇ ಕೆಲಸ ಮಾಡುತ್ತಾ ಬಂದಿವೆ. ಅವರ ಬೆದರಿಕೆಗಳಿಗೆ ಹೆದರುವುದಿಲ್ಲ. ಅವರಿಗೆ ಅಗತ್ಯವಾದ ಭದ್ರತೆ ಒದಗಿಸಲಾಗುವುದು’ ಎಂದರು. </p><p>‘ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧಿಸಿ’ ಎಂಬ ಬಿಜೆಪಿ ನಾಯಕರ ಸವಾಲಿಗೆ ಪ್ರತಿಕ್ರಿಯಿಸಿದ ಸಿ.ಎಂ. ‘ಬಿಜೆಪಿಯವರು ಚುನಾವಣೆ ಸಂದರ್ಭ, ತಾಕತ್ತಿದ್ದರೆ ಬನ್ನಿ ಎಂದು ಸವಾಲು ಹಾಕಿದ್ದರು. ಆದರೆ ನಂತರದಲ್ಲಿ ಏನಾಯಿತು? ಸೋಲಲಿಲ್ಲವೇ?’ ಎಂದರು.</p>.<div><div class="bigfact-title">ಹಿನ್ನಡೆ ಆಗಿಲ್ಲ</div><div class="bigfact-description">‘ಜಾತಿವಾರು ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಯು ಬೆಂಗಳೂರು ನಗರ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ವೇಗವಾಗಿ ನಡೆದಿದ್ದು, ಶೇ 90ಕ್ಕಿಂತ ಹೆಚ್ಚು ಗುರಿ ಸಾಧನೆ ಆಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.</div></div>.<p><strong>ತಾರತಮ್ಯವಿಲ್ಲ</strong></p><p>ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಶ್ರೀನಿವಾಸಪುರ ಶಾಸಕರು ನ್ಯಾಯಾಲಯದ ಮೆಟ್ಟಿಲು ಏರಿರುವ ಕುರಿತು ಪ್ರತಿಕ್ರಿಯಿಸಿ ‘ ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ನಮ್ಮ ಶಾಸಕರಿಗೆ ಅನುದಾನ ಕೊಟ್ಟಿದ್ದರ?’ ಎಂದು ಪ್ರಶ್ನಿಸಿದರು. ‘ ಯಾರಿಗೂ ತಾರತಮ್ಯ ಮಾಡುವುದಿಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>