<p><strong>ಠಾಣೆ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಕುರಿತು ವಿಚಾರಣೆ ನಡೆಸಿದ ಮಹಾರಾಷ್ಟ್ರದ ಠಾಣೆಯ ಭಿವಂಡಿ ನ್ಯಾಯಾಲಯವು ಸಾಕ್ಷಿದಾರರು ಗೈರಾಗಿದ್ದ ಕಾರಣ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಿದೆ.</p>.<p>ಸೋಲಾಪುರದ ಬಾರ್ಶಿ ಠಾಣೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿಕಾರಿಯಾಗಿರುವ ಸಾಕ್ಷಿದಾರ ಅಶೋಕ್ ಸಾಯಕರ್ ಅವರು ವೈಯಕ್ತಿಕ ಕಾರಣಗಳಿಂದ ವಿಚಾರಣೆ ಹಾಜರಾಗಿಲ್ಲ ಎಂದು ರಾಹುಲ್ ಪರ ವಕೀಲ ನಾರಾಯಣ್ ಅಯ್ಯರ್ ಅವರು ದೃಢಪಡಿಸಿದರು.</p>.<p class="title">ಡಿ.29ರಂದು ಅಶೋಕ್ ಅವರ ಸಾಕ್ಷ್ಯ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ. ಅಶೋಕ್ ಅವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದಾಗ ಈ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಸಿದ್ದರು. ಹಾಗಾಗಿ ಇವರನ್ನು ಸಾಕ್ಷಿ ಎಂದು ಪರಿಗಣಿಸಲಾಗಿದೆ. </p>.<p class="title">ಸಾಯಕರ್ ಸಲ್ಲಿಸಿದ್ದ ವರದಿ ಆಧಾರದ ಮೇಲೆ ನ್ಯಾಯಾಲಯವು ಐಪಿಸಿ ಸೆಕ್ಷನ್ 500ರ ಅಡಿ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಸಮನ್ಸ್ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಕುರಿತು ವಿಚಾರಣೆ ನಡೆಸಿದ ಮಹಾರಾಷ್ಟ್ರದ ಠಾಣೆಯ ಭಿವಂಡಿ ನ್ಯಾಯಾಲಯವು ಸಾಕ್ಷಿದಾರರು ಗೈರಾಗಿದ್ದ ಕಾರಣ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಿದೆ.</p>.<p>ಸೋಲಾಪುರದ ಬಾರ್ಶಿ ಠಾಣೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿಕಾರಿಯಾಗಿರುವ ಸಾಕ್ಷಿದಾರ ಅಶೋಕ್ ಸಾಯಕರ್ ಅವರು ವೈಯಕ್ತಿಕ ಕಾರಣಗಳಿಂದ ವಿಚಾರಣೆ ಹಾಜರಾಗಿಲ್ಲ ಎಂದು ರಾಹುಲ್ ಪರ ವಕೀಲ ನಾರಾಯಣ್ ಅಯ್ಯರ್ ಅವರು ದೃಢಪಡಿಸಿದರು.</p>.<p class="title">ಡಿ.29ರಂದು ಅಶೋಕ್ ಅವರ ಸಾಕ್ಷ್ಯ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ. ಅಶೋಕ್ ಅವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದಾಗ ಈ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಸಿದ್ದರು. ಹಾಗಾಗಿ ಇವರನ್ನು ಸಾಕ್ಷಿ ಎಂದು ಪರಿಗಣಿಸಲಾಗಿದೆ. </p>.<p class="title">ಸಾಯಕರ್ ಸಲ್ಲಿಸಿದ್ದ ವರದಿ ಆಧಾರದ ಮೇಲೆ ನ್ಯಾಯಾಲಯವು ಐಪಿಸಿ ಸೆಕ್ಷನ್ 500ರ ಅಡಿ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಸಮನ್ಸ್ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>