<p><strong>ಕಲಬುರಗಿ</strong>: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಕುರಿತ ಕಗ್ಗಂಟು ಪರಿಹಾರಕ್ಕೆ ನ.5ರಂದು ಇನ್ನೊಂದು ಸುತ್ತಿನ ಶಾಂತಿ ಸಭೆ ನಡೆಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ, ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.</p><p>ಈ ಕುರಿತ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರು ಗುರುವಾರ ಮುಂದುವರಿಸಿದರು.</p><p>'ಶಾಂತಿ ಸಭೆಯಲ್ಲಿ ಅರ್ಜಿದಾರರು ಪಾಲ್ಗೊಂಡಿರಲಿಲ್ಲ' ಎಂದು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿದರು.</p><p>'ಶಾಂತಿಸಭೆಯಲ್ಲಿ ಅರ್ಜಿದಾರರು ಯಾಕೆ ಪಾಲ್ಗೊಂಡಿರಲಿಲ್ಲ' ಎಂದು ನ್ಯಾಯಮೂರ್ತಿ ಕಮಲ್ ಪ್ರಶ್ನಿಸಿದರು.</p><p>ಇದಕ್ಕೆ ಅರ್ಜಿದಾರ ಪರ ವಕೀಲ ಅರುಣ ಶಾಮ್, 'ಅರ್ಜಿದಾರರ ಸಂಬಂಧಿಕರು ಅಸುನೀಗಿದ್ದರು. ಹೀಗಾಗಿ ಪಾಲ್ಗೊಂಡಿರಲಿಲ್ಲ' ಎಂದರು.</p><p>'ಶಾಂತಿ ಸಭೆಯ ಗಂಭೀರತೆಯನ್ನು ಅರ್ಜಿದಾರರು ಯಾಕೆ ಅರಿಯಲಿಲ್ಲ? ಅರ್ಜಿದಾರರ ಪರ ವಕೀಲರು ಸಭೆಯಲ್ಲಿ ಯಾಕೆ ಹಾಜರಾಗಿರಲಿಲ್ಲ' ಎಂದು ಹೈಕೋರ್ಟ್ ಕೇಳಿತು.</p>.<p>ಆಗ ಅರ್ಜಿದಾರರ ಪರ ವಕೀಲ ಅರುಣ ಶಾಮ್, 'ಇನ್ನೊಮ್ಮೆ ಸಭೆ ನಡೆಸಿದರೆ, ಅರ್ಜಿದಾರರು ಪಾಲ್ಗೊಳ್ಳುತ್ತಾರೆ' ಎಂದರು.</p><p>ಅದಕ್ಕೆ ಅದಕ್ಕೆ ನ್ಯಾಯಾಲಯ ಇನ್ನೊಂದು ಸುತ್ತಿನ ಸಭೆಗೆ ದಿನಾಂಕ ನಿಗದಿಪಡಿಸಲು ಸಾಧ್ಯವೇ ಎಂದು ನ್ಯಾಯಾಲಯ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಕೇಳಿತು.</p><p>ಅದಕ್ಕೆ ಇನ್ನೊಂದು ಸುತ್ತಿನ ಸಭೆ ನಡೆಸಲು ತಮಗೆ ಏನು ಅಭ್ಯಂತರ ಇಲ್ಲ ಎಂದು ಶಶಿಕಿರಣ ಶೆಟ್ಟಿ ಹೇಳಿದರು.</p><p>ಆಗ ನ್ಯಾಯಾಲಯ ನವೆಂಬರ್ 5 ರಂದು ಸಂಜೆ 5 ಗಂಟೆಗೆ ಇನ್ನೊಂದು ಶಾಂತಿ ಸಭೆ ನಡೆಸಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿತು. ಜೊತೆಗೆ ಅರ್ಜಿದಾರ ಪರ ಹಿರಿಯ ವಕೀಲರು ಸರ್ಕಾರದ ಪರ ವಕೀಲರು ಹಾಗೂ ಜಿಲ್ಲಾಧಿಕಾರಿ ಸಭೆಯಲ್ಲಿ ಪಾಲ್ಗೊಳ್ಳಲಿ ಎಂದು ನಿರ್ದೇಶನ ನೀಡಿತು.</p><p>ಎರಡನೇ ಸುತ್ತಿನ ಸಭೆಯನ್ನು ಬೆಂಗಳೂರಿನಲ್ಲಿ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಅವರ ಕಚೇರಿಯಲ್ಲಿ ನಡೆಸಲು ನ್ಯಾಯಾಲಯ ಒಪ್ಪಿಗೆ ಸೂಚಿಸಿತು. ಬಳಿಕ ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಕುರಿತ ಕಗ್ಗಂಟು ಪರಿಹಾರಕ್ಕೆ ನ.5ರಂದು ಇನ್ನೊಂದು ಸುತ್ತಿನ ಶಾಂತಿ ಸಭೆ ನಡೆಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ, ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.</p><p>ಈ ಕುರಿತ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರು ಗುರುವಾರ ಮುಂದುವರಿಸಿದರು.</p><p>'ಶಾಂತಿ ಸಭೆಯಲ್ಲಿ ಅರ್ಜಿದಾರರು ಪಾಲ್ಗೊಂಡಿರಲಿಲ್ಲ' ಎಂದು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿದರು.</p><p>'ಶಾಂತಿಸಭೆಯಲ್ಲಿ ಅರ್ಜಿದಾರರು ಯಾಕೆ ಪಾಲ್ಗೊಂಡಿರಲಿಲ್ಲ' ಎಂದು ನ್ಯಾಯಮೂರ್ತಿ ಕಮಲ್ ಪ್ರಶ್ನಿಸಿದರು.</p><p>ಇದಕ್ಕೆ ಅರ್ಜಿದಾರ ಪರ ವಕೀಲ ಅರುಣ ಶಾಮ್, 'ಅರ್ಜಿದಾರರ ಸಂಬಂಧಿಕರು ಅಸುನೀಗಿದ್ದರು. ಹೀಗಾಗಿ ಪಾಲ್ಗೊಂಡಿರಲಿಲ್ಲ' ಎಂದರು.</p><p>'ಶಾಂತಿ ಸಭೆಯ ಗಂಭೀರತೆಯನ್ನು ಅರ್ಜಿದಾರರು ಯಾಕೆ ಅರಿಯಲಿಲ್ಲ? ಅರ್ಜಿದಾರರ ಪರ ವಕೀಲರು ಸಭೆಯಲ್ಲಿ ಯಾಕೆ ಹಾಜರಾಗಿರಲಿಲ್ಲ' ಎಂದು ಹೈಕೋರ್ಟ್ ಕೇಳಿತು.</p>.<p>ಆಗ ಅರ್ಜಿದಾರರ ಪರ ವಕೀಲ ಅರುಣ ಶಾಮ್, 'ಇನ್ನೊಮ್ಮೆ ಸಭೆ ನಡೆಸಿದರೆ, ಅರ್ಜಿದಾರರು ಪಾಲ್ಗೊಳ್ಳುತ್ತಾರೆ' ಎಂದರು.</p><p>ಅದಕ್ಕೆ ಅದಕ್ಕೆ ನ್ಯಾಯಾಲಯ ಇನ್ನೊಂದು ಸುತ್ತಿನ ಸಭೆಗೆ ದಿನಾಂಕ ನಿಗದಿಪಡಿಸಲು ಸಾಧ್ಯವೇ ಎಂದು ನ್ಯಾಯಾಲಯ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಕೇಳಿತು.</p><p>ಅದಕ್ಕೆ ಇನ್ನೊಂದು ಸುತ್ತಿನ ಸಭೆ ನಡೆಸಲು ತಮಗೆ ಏನು ಅಭ್ಯಂತರ ಇಲ್ಲ ಎಂದು ಶಶಿಕಿರಣ ಶೆಟ್ಟಿ ಹೇಳಿದರು.</p><p>ಆಗ ನ್ಯಾಯಾಲಯ ನವೆಂಬರ್ 5 ರಂದು ಸಂಜೆ 5 ಗಂಟೆಗೆ ಇನ್ನೊಂದು ಶಾಂತಿ ಸಭೆ ನಡೆಸಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿತು. ಜೊತೆಗೆ ಅರ್ಜಿದಾರ ಪರ ಹಿರಿಯ ವಕೀಲರು ಸರ್ಕಾರದ ಪರ ವಕೀಲರು ಹಾಗೂ ಜಿಲ್ಲಾಧಿಕಾರಿ ಸಭೆಯಲ್ಲಿ ಪಾಲ್ಗೊಳ್ಳಲಿ ಎಂದು ನಿರ್ದೇಶನ ನೀಡಿತು.</p><p>ಎರಡನೇ ಸುತ್ತಿನ ಸಭೆಯನ್ನು ಬೆಂಗಳೂರಿನಲ್ಲಿ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಅವರ ಕಚೇರಿಯಲ್ಲಿ ನಡೆಸಲು ನ್ಯಾಯಾಲಯ ಒಪ್ಪಿಗೆ ಸೂಚಿಸಿತು. ಬಳಿಕ ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>