<p><strong>ಬೆಂಗಳೂರು</strong>: ವಿಧಾನಸಭೆಯಲ್ಲಿ ಆರ್ಎಸ್ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಯಾಚಿಸಿರುವುದನ್ನು ಸ್ವಾಗತಿಸಿರುವ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್, ‘ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ರಾಜಿ ಇಲ್ಲ’ ಎಂದರು.</p>.<p>‘ಕೆಪಿಸಿಸಿ ಅಧ್ಯಕ್ಷರು ಆರ್ಎಸ್ಎಸ್ ಗೀತೆ ಹಾಡುವುದು ತಪ್ಪು. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಹಾಡಿದ್ದರೆ ಕ್ಷಮೆ ಯಾಚಿಸಬೇಕುʼ ಎಂದು ಹರಿಪ್ರಸಾದ್ ಅವರು ಸೋಮವಾರ ಒತ್ತಾಯಿಸಿದ್ದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಹರಿಪ್ರಸಾದ್, ‘ಡಿ.ಕೆ. ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಮಹಾತ್ಮ ಗಾಂಧಿಯನ್ನು ಕೊಂದ ಸಂಘಟನೆಯ ಹಾಡು ಹಾಡಿದ್ದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದೆ’ ಎಂದರು.</p>.<p>‘ಉಪ ಮುಖ್ಯಮಂತ್ರಿಯಾಗಿ ಅವರು (ಶಿವಕುಮಾರ್) ಅದನ್ನು ಪಠಿಸಿದರೆ ನನಗೆ ಯಾವುದೇ ಆಕ್ಷೇಪವಿಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್, ಸಂವಿಧಾನ ಮತ್ತು ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್ಎಸ್ಎಸ್ನ ಪ್ರಾರ್ಥನೆಯ ಹಾಡನ್ನು ಹಾಡುವ ಅಗತ್ಯ ಇಲ್ಲ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಪಕ್ಷವನ್ನು ನಾನು ಅಥವಾ ಡಿ.ಕೆ. ಶಿವಕುಮಾರ್ ಕಟ್ಟಿಲ್ಲ. ಭವಿಷ್ಯಕ್ಕಾಗಿ ಅದನ್ನು ಉಳಿಸಲು ಯಾರೋ ನಮಗೆ ನೀಡಿದ್ದಾರೆ, ನಮಗೆ ಶಕ್ತಿ ಇದ್ದರೆ, ನಾವು ಅದನ್ನು ಉಳಿಸಿ ಭವಿಷ್ಯದ ಪೀಳಿಗೆಗೆ ನೀಡಬೇಕಾಗುತ್ತದೆ. ಇಲ್ಲಿ ಯಾರೂ ಶಾಶ್ವತವಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ರಾಹುಲ್ ಗಾಂಧಿಯವರ ಮೇಲೆ 54 ಕೇಸುಗಳಿವೆ. ರಾಹುಲ್ ಗಾಂಧಿಯವರ ವಿರುದ್ಧ ಕೆ.ಎನ್. ರಾಜಣ್ಣ ಮಾತನಾಡಿಲ್ಲ. ಯಾರ್ಯಾರ ನಿಲುವು ಏನು ಎನ್ನುವುದು ನಮಗೆ ಗೊತ್ತಿದೆ. ರಾಜಣ್ಣ, ಶಿವಕುಮಾರ್ ಇಬ್ಬರೂ ಕಾಂಗ್ರೆಸ್ನವರೆ. ನಿಷ್ಠೆ ಬಗ್ಗೆ ಚರ್ಚೆ ಬೇಡ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭೆಯಲ್ಲಿ ಆರ್ಎಸ್ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಯಾಚಿಸಿರುವುದನ್ನು ಸ್ವಾಗತಿಸಿರುವ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್, ‘ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ರಾಜಿ ಇಲ್ಲ’ ಎಂದರು.</p>.<p>‘ಕೆಪಿಸಿಸಿ ಅಧ್ಯಕ್ಷರು ಆರ್ಎಸ್ಎಸ್ ಗೀತೆ ಹಾಡುವುದು ತಪ್ಪು. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಹಾಡಿದ್ದರೆ ಕ್ಷಮೆ ಯಾಚಿಸಬೇಕುʼ ಎಂದು ಹರಿಪ್ರಸಾದ್ ಅವರು ಸೋಮವಾರ ಒತ್ತಾಯಿಸಿದ್ದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಹರಿಪ್ರಸಾದ್, ‘ಡಿ.ಕೆ. ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಮಹಾತ್ಮ ಗಾಂಧಿಯನ್ನು ಕೊಂದ ಸಂಘಟನೆಯ ಹಾಡು ಹಾಡಿದ್ದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದೆ’ ಎಂದರು.</p>.<p>‘ಉಪ ಮುಖ್ಯಮಂತ್ರಿಯಾಗಿ ಅವರು (ಶಿವಕುಮಾರ್) ಅದನ್ನು ಪಠಿಸಿದರೆ ನನಗೆ ಯಾವುದೇ ಆಕ್ಷೇಪವಿಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್, ಸಂವಿಧಾನ ಮತ್ತು ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್ಎಸ್ಎಸ್ನ ಪ್ರಾರ್ಥನೆಯ ಹಾಡನ್ನು ಹಾಡುವ ಅಗತ್ಯ ಇಲ್ಲ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಪಕ್ಷವನ್ನು ನಾನು ಅಥವಾ ಡಿ.ಕೆ. ಶಿವಕುಮಾರ್ ಕಟ್ಟಿಲ್ಲ. ಭವಿಷ್ಯಕ್ಕಾಗಿ ಅದನ್ನು ಉಳಿಸಲು ಯಾರೋ ನಮಗೆ ನೀಡಿದ್ದಾರೆ, ನಮಗೆ ಶಕ್ತಿ ಇದ್ದರೆ, ನಾವು ಅದನ್ನು ಉಳಿಸಿ ಭವಿಷ್ಯದ ಪೀಳಿಗೆಗೆ ನೀಡಬೇಕಾಗುತ್ತದೆ. ಇಲ್ಲಿ ಯಾರೂ ಶಾಶ್ವತವಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ರಾಹುಲ್ ಗಾಂಧಿಯವರ ಮೇಲೆ 54 ಕೇಸುಗಳಿವೆ. ರಾಹುಲ್ ಗಾಂಧಿಯವರ ವಿರುದ್ಧ ಕೆ.ಎನ್. ರಾಜಣ್ಣ ಮಾತನಾಡಿಲ್ಲ. ಯಾರ್ಯಾರ ನಿಲುವು ಏನು ಎನ್ನುವುದು ನಮಗೆ ಗೊತ್ತಿದೆ. ರಾಜಣ್ಣ, ಶಿವಕುಮಾರ್ ಇಬ್ಬರೂ ಕಾಂಗ್ರೆಸ್ನವರೆ. ನಿಷ್ಠೆ ಬಗ್ಗೆ ಚರ್ಚೆ ಬೇಡ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>