<p><strong>ಬೆಂಗಳೂರು:</strong> ದೇಶದಲ್ಲಿ ಹೆಚ್ಚುತ್ತಿರುವ ಆದಾಯ ಅಸಮಾನತೆ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರಕ್ಕೆ ಇಳಿದಿದೆ.</p>.<p>ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಬ್ ಚೆಂಗಾಸಿ ಎನ್ನುತ್ತಿದ್ದ ಬಿಜೆಪಿ ನಾಯಕರು ಆರ್ಎಸ್ಎಸ್ ಹೇಳಿಕೆ ಬಗ್ಗೆ ಬಾಯಿ ಬಿಡದಿರುವುದು ಇನ್ನೂ ಆಶ್ಚರ್ಯಕರ ಎಂದಿದೆ.</p>.<p>ಆರಂಭದಲ್ಲಿ ಆರ್ಎಸ್ಎಸ್ ದೇಶದ ಆರ್ಥಿಕತೆಯ ದುಸ್ಥಿತಿ, ಬಡತನ, ನಿರುದ್ಯೋಗದ ಬಗ್ಗೆ ಕಾಳಜಿಯಿಂದ ಮಾತನಾಡಿರುವುದು ಆಶ್ಚರ್ಯಕರ ಎಂದು ಕಾಂಗ್ರೆಸ್ ಹೇಳಿದೆ. ಬಳಿಕ ಹೊಸಬಾಳೆ ಅವರ ಹೇಳಿಕೆಗೆ ಬಿಜೆಪಿ ಪ್ರತಿಕ್ರಿದಿರುವ ಬಗ್ಗೆ ವಾಗ್ದಾಳಿ ನಡೆಸಿದೆ.</p>.<p>ಈ ಬೆಳವಣಿಗೆ 'ಮೋದಿ ಹಠಾವೊ' ಯೋಜನೆಯ ಮುನ್ನುಡಿಯೇ? ಎಂದು ಪ್ರಶ್ನಿಸಿದೆ.</p>.<p>ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಪಾದಯಾತ್ರೆಯ ಪರಿಣಾಮ ಆರ್ಎಸ್ಎಸ್ ರಾಷ್ಟ್ರದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಅಸಮಾನತೆ, ಬಡತನದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಸೋಮವಾರ ಕಾಂಗ್ರೆಸ್ ಹೇಳಿತ್ತು.</p>.<p>ದತ್ತಾತ್ರೇಯ ಹೊಸಬಾಳೆ ವ್ಯಕ್ತಪಡಿಸಿದ ಕಳವಳ ಸತ್ಯ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಸ್ಪಷ್ಟಪಡಿಸಿದ್ದರು. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಸ್ಪರ್ಧೆಯ ನಡುವೆಯೂ ದೇಶಕ್ಕೆ ಒಂದು ಆರ್ಥಿಕ ನೀತಿ ಇರಬೇಕು. ಆದರೆ, ಅದು ನಮ್ಮ ದೇಶದಲ್ಲಿ ಇರಲಿಲ್ಲ. ಬಿಜೆಪಿ ಹಾಗೂ ಸಂಘಕ್ಕೆ ಆ ರೀತಿಯ ಆರ್ಥಿಕ ನೀತಿ ಇದೆ ಎಂದು ಸಮರ್ಥಿಸಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದಲ್ಲಿ ಹೆಚ್ಚುತ್ತಿರುವ ಆದಾಯ ಅಸಮಾನತೆ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರಕ್ಕೆ ಇಳಿದಿದೆ.</p>.<p>ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಬ್ ಚೆಂಗಾಸಿ ಎನ್ನುತ್ತಿದ್ದ ಬಿಜೆಪಿ ನಾಯಕರು ಆರ್ಎಸ್ಎಸ್ ಹೇಳಿಕೆ ಬಗ್ಗೆ ಬಾಯಿ ಬಿಡದಿರುವುದು ಇನ್ನೂ ಆಶ್ಚರ್ಯಕರ ಎಂದಿದೆ.</p>.<p>ಆರಂಭದಲ್ಲಿ ಆರ್ಎಸ್ಎಸ್ ದೇಶದ ಆರ್ಥಿಕತೆಯ ದುಸ್ಥಿತಿ, ಬಡತನ, ನಿರುದ್ಯೋಗದ ಬಗ್ಗೆ ಕಾಳಜಿಯಿಂದ ಮಾತನಾಡಿರುವುದು ಆಶ್ಚರ್ಯಕರ ಎಂದು ಕಾಂಗ್ರೆಸ್ ಹೇಳಿದೆ. ಬಳಿಕ ಹೊಸಬಾಳೆ ಅವರ ಹೇಳಿಕೆಗೆ ಬಿಜೆಪಿ ಪ್ರತಿಕ್ರಿದಿರುವ ಬಗ್ಗೆ ವಾಗ್ದಾಳಿ ನಡೆಸಿದೆ.</p>.<p>ಈ ಬೆಳವಣಿಗೆ 'ಮೋದಿ ಹಠಾವೊ' ಯೋಜನೆಯ ಮುನ್ನುಡಿಯೇ? ಎಂದು ಪ್ರಶ್ನಿಸಿದೆ.</p>.<p>ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಪಾದಯಾತ್ರೆಯ ಪರಿಣಾಮ ಆರ್ಎಸ್ಎಸ್ ರಾಷ್ಟ್ರದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಅಸಮಾನತೆ, ಬಡತನದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಸೋಮವಾರ ಕಾಂಗ್ರೆಸ್ ಹೇಳಿತ್ತು.</p>.<p>ದತ್ತಾತ್ರೇಯ ಹೊಸಬಾಳೆ ವ್ಯಕ್ತಪಡಿಸಿದ ಕಳವಳ ಸತ್ಯ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಸ್ಪಷ್ಟಪಡಿಸಿದ್ದರು. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಸ್ಪರ್ಧೆಯ ನಡುವೆಯೂ ದೇಶಕ್ಕೆ ಒಂದು ಆರ್ಥಿಕ ನೀತಿ ಇರಬೇಕು. ಆದರೆ, ಅದು ನಮ್ಮ ದೇಶದಲ್ಲಿ ಇರಲಿಲ್ಲ. ಬಿಜೆಪಿ ಹಾಗೂ ಸಂಘಕ್ಕೆ ಆ ರೀತಿಯ ಆರ್ಥಿಕ ನೀತಿ ಇದೆ ಎಂದು ಸಮರ್ಥಿಸಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>