<p><strong>ಬೆಂಗಳೂರು: </strong>‘ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟ. ಇಂತಹ ತೋಟಕ್ಕೆ ಆರ್ಎಸ್ಎಸ್ ಎಂಬ ವೈರಸ್ ಹರಡುತ್ತಿದೆ. ನಾವೆಲ್ಲರೂ ಒಗ್ಗೂಡಿ ಪ್ರತಿಭಟಿಸುವ ಮೂಲಕ ಈ ವೈರಸ್ ಅನ್ನು ನಿಯಂತ್ರಿಸಬೇಕು’ ಎಂದುಸಿಪಿಐ ಹಿರಿಯ ಮುಖಂಡ ಸಿದ್ದನಗೌಡ ಪಾಟೀಲ ತಿಳಿಸಿದರು.</p>.<p>ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಆರ್ಪಿಐ) ರಾಜ್ಯ ಘಟಕದ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಜ್ಜಾಗಿರುವ ಆರ್ಎಸ್ಎಸ್ ತ್ರಿವರ್ಣ ಧ್ವಜವನ್ನೇ ಒಪ್ಪಿಕೊಂಡಿಲ್ಲ. ಇಡೀ ದೇಶ ಗೌರವಿಸುವ ಕೇಸರಿ, ಬಿಳಿ, ಹಸಿರು ಬಣ್ಣದ ಧ್ವಜಕ್ಕಿಂತ ತಮ್ಮ ಕೇಸರಿಧ್ವಜಕ್ಕೆ ಹೆಚ್ಚು ಗೌರವ ನೀಡುತ್ತಾರೆ’ ಎಂದರು.</p>.<p>‘ಸಂವಿಧಾನ ಅಪಾಯದಲ್ಲಿ ಸಿಲುಕಿದ್ದು, ಅದರ ಮಹತ್ವವೂ ಹೆಚ್ಚಾಗಿದೆ. ದೇಶದಲ್ಲಿ ನಡೆಯುತ್ತಿರುವ ಚಳವಳಿ ಹಾಗೂ ಪ್ರತಿಭಟನೆಗಳಿಂದ ಜನಸಾಮಾನ್ಯರೆಲ್ಲ ಸಂವಿಧಾನದ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವಅಮಿತ್ ಶಾ ಅವರಿಗೆ ಧನ್ಯವಾದಗಳು’ ಎಂದರು.</p>.<p>ಲೇಖಕ ಬಂಜಗೆರೆ ಜಯಪ್ರಕಾಶ್, ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ಮಸೂದೆಗಳ ಪರ್ವನಡೆದಿದೆ. ದೇಶದ ಹಿಂದಿನ ಸ್ಥಿತಿಗತಿಗಳನ್ನು ಅರಿಯದೆ, ಮಸೂದೆಗಳನ್ನು ಜಾರಿ ಮಾಡುವ ಮೂಲಕ ಅದನ್ನೇ ಭಾರತದ ಪ್ರಗತಿ ಎಂದು ಬಿಂಬಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟ. ಇಂತಹ ತೋಟಕ್ಕೆ ಆರ್ಎಸ್ಎಸ್ ಎಂಬ ವೈರಸ್ ಹರಡುತ್ತಿದೆ. ನಾವೆಲ್ಲರೂ ಒಗ್ಗೂಡಿ ಪ್ರತಿಭಟಿಸುವ ಮೂಲಕ ಈ ವೈರಸ್ ಅನ್ನು ನಿಯಂತ್ರಿಸಬೇಕು’ ಎಂದುಸಿಪಿಐ ಹಿರಿಯ ಮುಖಂಡ ಸಿದ್ದನಗೌಡ ಪಾಟೀಲ ತಿಳಿಸಿದರು.</p>.<p>ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಆರ್ಪಿಐ) ರಾಜ್ಯ ಘಟಕದ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಜ್ಜಾಗಿರುವ ಆರ್ಎಸ್ಎಸ್ ತ್ರಿವರ್ಣ ಧ್ವಜವನ್ನೇ ಒಪ್ಪಿಕೊಂಡಿಲ್ಲ. ಇಡೀ ದೇಶ ಗೌರವಿಸುವ ಕೇಸರಿ, ಬಿಳಿ, ಹಸಿರು ಬಣ್ಣದ ಧ್ವಜಕ್ಕಿಂತ ತಮ್ಮ ಕೇಸರಿಧ್ವಜಕ್ಕೆ ಹೆಚ್ಚು ಗೌರವ ನೀಡುತ್ತಾರೆ’ ಎಂದರು.</p>.<p>‘ಸಂವಿಧಾನ ಅಪಾಯದಲ್ಲಿ ಸಿಲುಕಿದ್ದು, ಅದರ ಮಹತ್ವವೂ ಹೆಚ್ಚಾಗಿದೆ. ದೇಶದಲ್ಲಿ ನಡೆಯುತ್ತಿರುವ ಚಳವಳಿ ಹಾಗೂ ಪ್ರತಿಭಟನೆಗಳಿಂದ ಜನಸಾಮಾನ್ಯರೆಲ್ಲ ಸಂವಿಧಾನದ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವಅಮಿತ್ ಶಾ ಅವರಿಗೆ ಧನ್ಯವಾದಗಳು’ ಎಂದರು.</p>.<p>ಲೇಖಕ ಬಂಜಗೆರೆ ಜಯಪ್ರಕಾಶ್, ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ಮಸೂದೆಗಳ ಪರ್ವನಡೆದಿದೆ. ದೇಶದ ಹಿಂದಿನ ಸ್ಥಿತಿಗತಿಗಳನ್ನು ಅರಿಯದೆ, ಮಸೂದೆಗಳನ್ನು ಜಾರಿ ಮಾಡುವ ಮೂಲಕ ಅದನ್ನೇ ಭಾರತದ ಪ್ರಗತಿ ಎಂದು ಬಿಂಬಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>