ಈ ವರದಿಯಲ್ಲಿ, ‘ಆರ್.ಟಿ.ಇ ಶುಲ್ಕ ಮರುಪಾವತಿ ಹೆಚ್ಚುವರಿಯಾಗಿ ಪಾವತಿ ಮಾಡಿರುವ ಕುರಿತು ಅನುಪಾಲನಾ ವರದಿ ಸಲ್ಲಿಸಲಾಗಿಲ್ಲ. ಸರ್ಕಾರದ ಅನುದಾನ ದುರುಪಯೋಗ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಲೋಪಕ್ಕೆ ಕಾರಣವಾದ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು’ ಎಂದು ತಿಳಿಸಲಾಗಿತ್ತು.