ಶ್ರೀಧರ್ ಅವರು ಹಲವು ವರ್ಷಗಳಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆದು, ಗಣಿಗಾರಿಕೆ, ಅತಿಕ್ರಮಣ, ಸರ್ಕಾರಿ ಭೂಮಿ ಒತ್ತುವರಿ, ಅನಧಿಕೃತ ಕಲ್ಲು ಗಣಿಗಾರಿಕೆ ಹೀಗೆ ಹಲವು ವಿಷಯಗಳ ಬಗ್ಗೆ ದೂರು ದಾಖಲಿಸಿದ್ದರು. ಕೆಲ ಪ್ರಕರಣಗಳು ಇತ್ಯರ್ಥಗೊಂಡಿದ್ದರೆ, ಇನ್ನೂ ಕೆಲ ಪ್ರಕರಣಗಳು ತನಿಖಾ ಹಂತದಲ್ಲಿದ್ದವು. ಮಾಹಿತಿ ಹಕ್ಕು ಕಾರ್ಯಕರ್ತನ ಹತ್ಯೆ ಪಟ್ಟಣದ ನಾಗರಿಕರಲ್ಲಿ ಆತಂಕ ಮೂಡಿಸಿದೆ.