<p><strong>ಬೆಂಗಳೂರು</strong>: ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಉಪಕಾರ್ಯದರ್ಶಿ–1 ಉಮೇಶ್ ಅವರಿಗೆ ರಾಜ್ಯ ಮಾಹಿತಿ ಆಯೋಗ ₹1 ಲಕ್ಷ ದಂಡ ವಿಧಿಸಿದೆ.</p>.<p>ಎಲ್ಲ ಸಾರ್ವಜನಿಕ ಪ್ರಾಧಿಕಾರಗಳೂ ಕಾರ್ಯನಿರ್ವಹಣೆ ಮತ್ತು ಇತರ ದಾಖಲೆ ಪತ್ರಗಳನ್ನು ತಮ್ಮ ಜಾಲತಾಣದಲ್ಲಿ ಪ್ರದರ್ಶಿಸಬೇಕು ಎಂದು ಮಾಹಿತಿ ಹಕ್ಕು ಕಾಯ್ದೆ ಹೇಳುತ್ತದೆ. ಬಿಡಿಎಯ ಉಪಕಾರ್ಯದರ್ಶಿ–1 ಉಮೇಶ್ ಅವರು ಈ ಕಾರ್ಯದ ಹೊಣೆಗಾರರಾಗಿದ್ದು, ಅವರು ಜಾಲತಾಣದಲ್ಲಿ ಮಾಹಿತಿ ಅಪ್ಡೇಟ್ ಮಾಡಿಸದೇ ಇರುವುದರ ಬಗ್ಗೆ ಆಯೋಗಕ್ಕೆ ನಾಲ್ಕು ದೂರುಗಳು ಸಲ್ಲಿಕೆಯಾಗಿದ್ದವು.</p>.<p>ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಆಯೋಗವು, ಉಮೇಶ್ ಅವರಿಗೆ ಪ್ರತಿ ಪ್ರಕರಣದಲ್ಲಿ ತಲಾ ₹25,000ದಂತೆ ಒಟ್ಟು ₹1 ಲಕ್ಷ ದಂಡ ವಿಧಿಸಿದೆ.</p>.<p>ಸಾರ್ವಜನಿಕರೊಬ್ಬರು ಮಾಹಿತಿ ಹಕ್ಕು ಕಾಯ್ದೆ ಅಡಿ ಕೋರಿದ್ದ ಮಾಹಿತಿಯನ್ನು ನೀಡದೇ ಇರುವ ಕಾರಣಕ್ಕೆ ಬಿಡಿಎ ಕಾರ್ಯದರ್ಶಿ ಸಿ.ಎಲ್. ಶಿವಕುಮಾರ್ ಅವರಿಗೆ ಆಯೋಗವು ₹25,000 ದಂಡ ವಿಧಿಸಿದೆ. ದಂಡ ಪಾವತಿಸಬೇಕು ಮತ್ತು ಮಾಹಿತಿಯನ್ನು ಕೂಡಲೇ ಒದಗಿಸಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಉಪಕಾರ್ಯದರ್ಶಿ–1 ಉಮೇಶ್ ಅವರಿಗೆ ರಾಜ್ಯ ಮಾಹಿತಿ ಆಯೋಗ ₹1 ಲಕ್ಷ ದಂಡ ವಿಧಿಸಿದೆ.</p>.<p>ಎಲ್ಲ ಸಾರ್ವಜನಿಕ ಪ್ರಾಧಿಕಾರಗಳೂ ಕಾರ್ಯನಿರ್ವಹಣೆ ಮತ್ತು ಇತರ ದಾಖಲೆ ಪತ್ರಗಳನ್ನು ತಮ್ಮ ಜಾಲತಾಣದಲ್ಲಿ ಪ್ರದರ್ಶಿಸಬೇಕು ಎಂದು ಮಾಹಿತಿ ಹಕ್ಕು ಕಾಯ್ದೆ ಹೇಳುತ್ತದೆ. ಬಿಡಿಎಯ ಉಪಕಾರ್ಯದರ್ಶಿ–1 ಉಮೇಶ್ ಅವರು ಈ ಕಾರ್ಯದ ಹೊಣೆಗಾರರಾಗಿದ್ದು, ಅವರು ಜಾಲತಾಣದಲ್ಲಿ ಮಾಹಿತಿ ಅಪ್ಡೇಟ್ ಮಾಡಿಸದೇ ಇರುವುದರ ಬಗ್ಗೆ ಆಯೋಗಕ್ಕೆ ನಾಲ್ಕು ದೂರುಗಳು ಸಲ್ಲಿಕೆಯಾಗಿದ್ದವು.</p>.<p>ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಆಯೋಗವು, ಉಮೇಶ್ ಅವರಿಗೆ ಪ್ರತಿ ಪ್ರಕರಣದಲ್ಲಿ ತಲಾ ₹25,000ದಂತೆ ಒಟ್ಟು ₹1 ಲಕ್ಷ ದಂಡ ವಿಧಿಸಿದೆ.</p>.<p>ಸಾರ್ವಜನಿಕರೊಬ್ಬರು ಮಾಹಿತಿ ಹಕ್ಕು ಕಾಯ್ದೆ ಅಡಿ ಕೋರಿದ್ದ ಮಾಹಿತಿಯನ್ನು ನೀಡದೇ ಇರುವ ಕಾರಣಕ್ಕೆ ಬಿಡಿಎ ಕಾರ್ಯದರ್ಶಿ ಸಿ.ಎಲ್. ಶಿವಕುಮಾರ್ ಅವರಿಗೆ ಆಯೋಗವು ₹25,000 ದಂಡ ವಿಧಿಸಿದೆ. ದಂಡ ಪಾವತಿಸಬೇಕು ಮತ್ತು ಮಾಹಿತಿಯನ್ನು ಕೂಡಲೇ ಒದಗಿಸಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>