ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಾವಕಾಶಗಳು, ಉದ್ಯೋಗ ಪಡೆದವರ ದತ್ತಾಂಶ ಸಂಗ್ರಹಕ್ಕೆ ವ್ಯವಸ್ಥೆ ರೂಪಿಸಬೇಕು. ಅಲ್ಲದೆ, ರಾಜ್ಯ ಮಟ್ಟದ ಒಪ್ಪಿಗೆ ಸಮಿತಿಯಲ್ಲಿ ಅನುಮೋದನೆಯಾದ ಯೋಜನೆಗಳು ನಿಗದಿತ ಅವಧಿಯಲ್ಲಿ ಜಾರಿಗೊಂಡಿವೆಯೇ? ಇಂತಹ ಕೈಗಾರಿಕೋದ್ಯಮಗಳು ತಮಗೆ ಹಂಚಿಕೆಯಾಗಿರುವ ಭೂಮಿಯನ್ನು ಬಳಸಿಕೊಂಡಿವೆಯೇ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಮತ್ತು ನಿಗದಿತ ಅವಧಿಯಲ್ಲಿ ಜಾರಿಯಾಗದ ಯೋಜನೆಗಳಿಗೆ ಹಂಚಿಕೆಯಾದ ಭೂಮಿಯನ್ನು ಹಿಂಪಡೆಯಬೇಕು ಎಂದು ಅವರು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.