<p><strong>ಬೆಳಗಾವಿ: </strong>ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ತರಬೇತಿ ಮತ್ತು ಮಾನ್ಯತೆ ನೀಡುವಂತೆ ಆಗ್ರಹಿಸಿ ರಾಜ್ಯ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದ್ಯರ ಸಂಘದವರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.</p>.<p>‘ಸೌಲಭ್ಯವಂಚಿತ ಹಳ್ಳಿಗಳಲ್ಲಿ ಸಂಚರಿಸುವ ನಾವು, ರೋಗಿಗಳಿಗೆ ಬಳಿಗೇ ಹೋಗಿ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ. ಪ್ರಥಮ ಚಿಕಿತ್ಸೆ ನೀಡುವುದನ್ನು ಸಮಾಜಸೇವೆ ಎಂದು ಪರಿಗಣಿಸಿ ಅಲೆಯುತ್ತಿದ್ದೇವೆ. ಅನುಭವಿ ವೈದ್ಯರ ಬಳಿ 5 ವರ್ಷ ತರಬೇತಿ ಪಡೆದು ಕಾರ್ಯನಿರ್ವಹಿಸುತ್ತಿದ್ದೇವೆ. ಒಂದೂವರೆ ಲಕ್ಷ ಸಂಖ್ಯೆಯಲ್ಲಿರುವ ನಮ್ಮ ಕೆಲಸಕ್ಕೆ ಸರ್ಕಾರವು ತಡೆ ಒಡ್ಡುತ್ತಿದೆ. ಇದೇ ರೀತಿ ತೊಂದರೆ ಮುಂದುವರಿದಲ್ಲಿ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ. ಇದಕ್ಕೆ ಅವಕಾಶ ಕೊಡಬಾರದು’ ಎಂದು ಕೋರಿದರು.</p>.<p>‘ಪ್ರಥಮ ಚಿಕಿತ್ಸಕರ ಸೇವೆ ಪರಿಗಣಿಸಿ ಆಂಧ್ರಪ್ರದೇಶ ಸರ್ಕಾರವು ಒಂದು ವರ್ಷ ತರಬೇತಿ ನೀಡಿ ನಾವು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ನಮ್ಮಲ್ಲೂ ಅದೇ ರೀತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘2007ರ ಕೆಪಿಎಂಇ ಕಾಯ್ದೆ ಪ್ರಕಾರ ನಮ್ಮನ್ನು ನಕಲಿಗಳೆಂದು ಪರಿಗಣಿಸಿ, ಕೆಲಸಕ್ಕೆ ತಡೆ ಒಡ್ಡಲಾಗುತ್ತಿದೆ. ಇದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಹಿಂದಿನ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸಲಹೆಯಂತೆ ಜಿಲ್ಲಾವಾರು ಸಂಘದ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆ ಪಟ್ಟಿಯಲ್ಲಿರುವ ಸದಸ್ಯರಿಗೆ ತರಬೇತಿ ಮತ್ತು ಮಾನ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಅಧ್ಯಕ್ಷ ಎಂ.ಎಸ್. ಕದ್ದಿಮನಿ, ಪ್ರಧಾನ ಕಾರ್ಯದರ್ಶಿ ಆರ್.ಆರ್. ಪಾಟೀಲ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ತರಬೇತಿ ಮತ್ತು ಮಾನ್ಯತೆ ನೀಡುವಂತೆ ಆಗ್ರಹಿಸಿ ರಾಜ್ಯ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದ್ಯರ ಸಂಘದವರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.</p>.<p>‘ಸೌಲಭ್ಯವಂಚಿತ ಹಳ್ಳಿಗಳಲ್ಲಿ ಸಂಚರಿಸುವ ನಾವು, ರೋಗಿಗಳಿಗೆ ಬಳಿಗೇ ಹೋಗಿ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ. ಪ್ರಥಮ ಚಿಕಿತ್ಸೆ ನೀಡುವುದನ್ನು ಸಮಾಜಸೇವೆ ಎಂದು ಪರಿಗಣಿಸಿ ಅಲೆಯುತ್ತಿದ್ದೇವೆ. ಅನುಭವಿ ವೈದ್ಯರ ಬಳಿ 5 ವರ್ಷ ತರಬೇತಿ ಪಡೆದು ಕಾರ್ಯನಿರ್ವಹಿಸುತ್ತಿದ್ದೇವೆ. ಒಂದೂವರೆ ಲಕ್ಷ ಸಂಖ್ಯೆಯಲ್ಲಿರುವ ನಮ್ಮ ಕೆಲಸಕ್ಕೆ ಸರ್ಕಾರವು ತಡೆ ಒಡ್ಡುತ್ತಿದೆ. ಇದೇ ರೀತಿ ತೊಂದರೆ ಮುಂದುವರಿದಲ್ಲಿ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ. ಇದಕ್ಕೆ ಅವಕಾಶ ಕೊಡಬಾರದು’ ಎಂದು ಕೋರಿದರು.</p>.<p>‘ಪ್ರಥಮ ಚಿಕಿತ್ಸಕರ ಸೇವೆ ಪರಿಗಣಿಸಿ ಆಂಧ್ರಪ್ರದೇಶ ಸರ್ಕಾರವು ಒಂದು ವರ್ಷ ತರಬೇತಿ ನೀಡಿ ನಾವು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ನಮ್ಮಲ್ಲೂ ಅದೇ ರೀತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘2007ರ ಕೆಪಿಎಂಇ ಕಾಯ್ದೆ ಪ್ರಕಾರ ನಮ್ಮನ್ನು ನಕಲಿಗಳೆಂದು ಪರಿಗಣಿಸಿ, ಕೆಲಸಕ್ಕೆ ತಡೆ ಒಡ್ಡಲಾಗುತ್ತಿದೆ. ಇದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಹಿಂದಿನ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸಲಹೆಯಂತೆ ಜಿಲ್ಲಾವಾರು ಸಂಘದ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆ ಪಟ್ಟಿಯಲ್ಲಿರುವ ಸದಸ್ಯರಿಗೆ ತರಬೇತಿ ಮತ್ತು ಮಾನ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಅಧ್ಯಕ್ಷ ಎಂ.ಎಸ್. ಕದ್ದಿಮನಿ, ಪ್ರಧಾನ ಕಾರ್ಯದರ್ಶಿ ಆರ್.ಆರ್. ಪಾಟೀಲ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>