<p><strong>ಬೆಂಗಳೂರು</strong>: ರಾಜ್ಯದ ಕೆಲವು ದುರ್ಗಮ ಪ್ರದೇಶಗಳಲ್ಲಿ ವೈ–ಫೈ ಸೌಲಭ್ಯ ಕಲ್ಪಿಸುವ ಉದ್ದೇಶದ ಯೋಜನೆಗೆ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಬೆಂಗಳೂರಿನಲ್ಲಿ ಗುರುವಾರ ಚಾಲನೆ ನೀಡಿದರು.</p>.<p>ಇದರ ಭಾಗವಾಗಿ ಉತ್ತರ ಕನ್ನಡ ಜಿಲ್ಲೆಯ ಯಾಣ ಹಾಗೂ ಸಹಸ್ರಲಿಂಗದಲ್ಲಿ ಸಾರ್ವಜನಿಕ ವೈ–ಫೈ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಎನ್ಎ ಇಂಡಿಯಾ ಕಂಪನಿಯ ಸಿಇಒ ನಾಗರಾಜ ಮುನಿದಾಸಪ್ಪ ತಿಳಿಸಿದರು. ಈ ಕಂಪನಿಯು ಯೋಜನೆಯ ಅಡಿಯಲ್ಲಿ ವೈ–ಫೈ ಕೇಂದ್ರಗಳನ್ನು ಆರಂಭಿಸುತ್ತಿದೆ.</p>.<p>‘ಆರಂಭಿಕ ಹೆಜ್ಜೆಯಾಗಿ ನಾವು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಯಾಣ ಹಾಗೂ ಸಹಸ್ರಲಿಂಗದಲ್ಲಿ ಈ ಸೌಲಭ್ಯ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇನ್ನಷ್ಟು ಸ್ಥಳಗಳಿಗೆ ವಿಸ್ತರಿಸಲಿದ್ದೇವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ, ಇಂಟರ್ನೆಟ್ ಇನ್ನೂ ತಲುಪಿಲ್ಲದ ಸ್ಥಳಗಳನ್ನು ಗುರುತಿಸಿ ಅಲ್ಲಿ ವೈ–ಫೈ ಸೌಲಭ್ಯ ಆರಂಭಿಸಲಾಗುವುದು’ ಎಂದು ನಾಗರಾಜ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ವೈ–ಫೈ ಸೌಲಭ್ಯ ಕಲ್ಪಿಸಲು ಜಿಎನ್ಎ ಕಂಪನಿಯು ಬಿಎಸ್ಎನ್ಎಲ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಇಂಟರ್ನೆಟ್ ಸೌಲಭ್ಯ ಇಲ್ಲವೆಂದಾದರೆ ಅಲ್ಲಿ ಯುಪಿಐ ಪಾವತಿಯಿಂದ ಆರಂಭಿಸಿ ಇಂಟರ್ನೆಟ್ ಆಧಾರಿಸಿದ ಯಾವ ಅನುಕೂಲಗಳೂ ಲಭ್ಯವಾಗುವುದಿಲ್ಲ. ಹೀಗಾಗಿ ಈ ಯೋಜನೆ ಆರಂಭಿಸಲಾಗಿದೆ ಎಂದು ನಾಗರಾಜ ಹೇಳಿದರು.</p>.<p>‘ನಮ್ಮ ಭಾಗದ ಗ್ರಾಮಾಂತರ ಪ್ರದೇಶಗಳನ್ನು ಈ ಯೋಜನೆಯು ಇಂಟರ್ನೆಟ್ ಜಾಲದ ಜೊತೆ ಬೆಸೆಯುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ಸೌಲಭ್ಯ ಸಿಗುವ ಪರಿಣಾಮವಾಗಿ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದು ಹೆಗಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಕೆಲವು ದುರ್ಗಮ ಪ್ರದೇಶಗಳಲ್ಲಿ ವೈ–ಫೈ ಸೌಲಭ್ಯ ಕಲ್ಪಿಸುವ ಉದ್ದೇಶದ ಯೋಜನೆಗೆ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಬೆಂಗಳೂರಿನಲ್ಲಿ ಗುರುವಾರ ಚಾಲನೆ ನೀಡಿದರು.</p>.<p>ಇದರ ಭಾಗವಾಗಿ ಉತ್ತರ ಕನ್ನಡ ಜಿಲ್ಲೆಯ ಯಾಣ ಹಾಗೂ ಸಹಸ್ರಲಿಂಗದಲ್ಲಿ ಸಾರ್ವಜನಿಕ ವೈ–ಫೈ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಎನ್ಎ ಇಂಡಿಯಾ ಕಂಪನಿಯ ಸಿಇಒ ನಾಗರಾಜ ಮುನಿದಾಸಪ್ಪ ತಿಳಿಸಿದರು. ಈ ಕಂಪನಿಯು ಯೋಜನೆಯ ಅಡಿಯಲ್ಲಿ ವೈ–ಫೈ ಕೇಂದ್ರಗಳನ್ನು ಆರಂಭಿಸುತ್ತಿದೆ.</p>.<p>‘ಆರಂಭಿಕ ಹೆಜ್ಜೆಯಾಗಿ ನಾವು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಯಾಣ ಹಾಗೂ ಸಹಸ್ರಲಿಂಗದಲ್ಲಿ ಈ ಸೌಲಭ್ಯ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇನ್ನಷ್ಟು ಸ್ಥಳಗಳಿಗೆ ವಿಸ್ತರಿಸಲಿದ್ದೇವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ, ಇಂಟರ್ನೆಟ್ ಇನ್ನೂ ತಲುಪಿಲ್ಲದ ಸ್ಥಳಗಳನ್ನು ಗುರುತಿಸಿ ಅಲ್ಲಿ ವೈ–ಫೈ ಸೌಲಭ್ಯ ಆರಂಭಿಸಲಾಗುವುದು’ ಎಂದು ನಾಗರಾಜ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ವೈ–ಫೈ ಸೌಲಭ್ಯ ಕಲ್ಪಿಸಲು ಜಿಎನ್ಎ ಕಂಪನಿಯು ಬಿಎಸ್ಎನ್ಎಲ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಇಂಟರ್ನೆಟ್ ಸೌಲಭ್ಯ ಇಲ್ಲವೆಂದಾದರೆ ಅಲ್ಲಿ ಯುಪಿಐ ಪಾವತಿಯಿಂದ ಆರಂಭಿಸಿ ಇಂಟರ್ನೆಟ್ ಆಧಾರಿಸಿದ ಯಾವ ಅನುಕೂಲಗಳೂ ಲಭ್ಯವಾಗುವುದಿಲ್ಲ. ಹೀಗಾಗಿ ಈ ಯೋಜನೆ ಆರಂಭಿಸಲಾಗಿದೆ ಎಂದು ನಾಗರಾಜ ಹೇಳಿದರು.</p>.<p>‘ನಮ್ಮ ಭಾಗದ ಗ್ರಾಮಾಂತರ ಪ್ರದೇಶಗಳನ್ನು ಈ ಯೋಜನೆಯು ಇಂಟರ್ನೆಟ್ ಜಾಲದ ಜೊತೆ ಬೆಸೆಯುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ಸೌಲಭ್ಯ ಸಿಗುವ ಪರಿಣಾಮವಾಗಿ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದು ಹೆಗಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>