<p><strong>ಬೆಂಗಳೂರು</strong>: ‘ಹೆರಿಗೆ ಆಸ್ಪತ್ರೆ ಕಟ್ಟಿಸುವ ಬಗ್ಗೆ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಆರ್.ವಿ.ದೇಶಪಾಂಡೆ ಅವರು, ‘ನಿನಗೆ ಹೆರಿಗೆ ಆಗುವಾಗ ಕಟ್ಟಿಸುತ್ತೇನೆ’ ಎಂದಿರುವುದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಅವರು ಕ್ಷಮೆ ಕೇಳಬೇಕು’ ಎಂದು ಕರ್ನಾಟಕ ಪತ್ರಕರ್ತೆಯರ ಸಂಘವು ಆಗ್ರಹಿಸಿದೆ.</p>.<p>ಪತ್ರಿಕಾ ಪ್ರಕಟಣೆ ನೀಡಿರುವ ಸಂಘವು, ‘ಆರ್.ವಿ.ದೇಶಪಾಂಡೆ ಅವರು ಹಿರಿಯರಾಗಿ, ಮಾಜಿ ಸಚಿವರಾಗಿ, ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಇಂತಹ ಉಡಾಫೆಯ ಹೇಳಿಕೆ ನೀಡಬಾರದಾಗಿತ್ತು. ಸಮಾಜದ ಪರವಾಗಿ ಪ್ರಶ್ನೆಯನ್ನು ಎತ್ತಿದ ಪತ್ರಕರ್ತೆಗೆ ಜವಾಬ್ದಾರಿಯಿಂದ ಉತ್ತರಿಸಬೇಕಿತ್ತು. ಅವರ ಈ ನಡೆಯನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ’ ಎಂದಿದೆ.</p>.<p>‘ಹೆಣ್ಣು ಮಕ್ಕಳ ಮೂಲಭೂತ ಸೌಲಭ್ಯದ ಕೊರತೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ರಾಜಕಾರಣಿಗಳು ಪತ್ರಕರ್ತೆಯರನ್ನು ಹಗುರವಾಗಿ ಪರಿಗಣಿಸಬಾರದು ಮತ್ತು ಹೆಣ್ಣು ಮಕ್ಕಳ ಮೂಲಭೂತ ಸೌಲಭ್ಯದ ಬಗ್ಗೆ ಉಡಾಫೆಯ ಮಾತು ಸಲ್ಲದು’ ಎಂದು ಸಂಘವು ಹೇಳಿದೆ.</p>.<p><strong>ಕ್ಷಮೆಗೆ ಆಗ್ರಹ</strong>: ‘ಹೆರಿಗೆ ಆಸ್ಪತ್ರೆಯ ಸೌಲಭ್ಯ ದೊರಕಿಸಲು ವಿಫಲರಾಗಿರುವ ದೇಶಪಾಂಡೆ ಅವರು ಪತ್ರಕರ್ತರ ಮತ್ತು ಹೆಣ್ಣುಮಕ್ಕಳ ಘನತೆಗೆ ಧಕ್ಕೆ ಆಗುವ ರೀತಿಯ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅವರು ಕ್ಷಮೆ ಕೇಳಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೆರಿಗೆ ಆಸ್ಪತ್ರೆ ಕಟ್ಟಿಸುವ ಬಗ್ಗೆ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಆರ್.ವಿ.ದೇಶಪಾಂಡೆ ಅವರು, ‘ನಿನಗೆ ಹೆರಿಗೆ ಆಗುವಾಗ ಕಟ್ಟಿಸುತ್ತೇನೆ’ ಎಂದಿರುವುದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಅವರು ಕ್ಷಮೆ ಕೇಳಬೇಕು’ ಎಂದು ಕರ್ನಾಟಕ ಪತ್ರಕರ್ತೆಯರ ಸಂಘವು ಆಗ್ರಹಿಸಿದೆ.</p>.<p>ಪತ್ರಿಕಾ ಪ್ರಕಟಣೆ ನೀಡಿರುವ ಸಂಘವು, ‘ಆರ್.ವಿ.ದೇಶಪಾಂಡೆ ಅವರು ಹಿರಿಯರಾಗಿ, ಮಾಜಿ ಸಚಿವರಾಗಿ, ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಇಂತಹ ಉಡಾಫೆಯ ಹೇಳಿಕೆ ನೀಡಬಾರದಾಗಿತ್ತು. ಸಮಾಜದ ಪರವಾಗಿ ಪ್ರಶ್ನೆಯನ್ನು ಎತ್ತಿದ ಪತ್ರಕರ್ತೆಗೆ ಜವಾಬ್ದಾರಿಯಿಂದ ಉತ್ತರಿಸಬೇಕಿತ್ತು. ಅವರ ಈ ನಡೆಯನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ’ ಎಂದಿದೆ.</p>.<p>‘ಹೆಣ್ಣು ಮಕ್ಕಳ ಮೂಲಭೂತ ಸೌಲಭ್ಯದ ಕೊರತೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ರಾಜಕಾರಣಿಗಳು ಪತ್ರಕರ್ತೆಯರನ್ನು ಹಗುರವಾಗಿ ಪರಿಗಣಿಸಬಾರದು ಮತ್ತು ಹೆಣ್ಣು ಮಕ್ಕಳ ಮೂಲಭೂತ ಸೌಲಭ್ಯದ ಬಗ್ಗೆ ಉಡಾಫೆಯ ಮಾತು ಸಲ್ಲದು’ ಎಂದು ಸಂಘವು ಹೇಳಿದೆ.</p>.<p><strong>ಕ್ಷಮೆಗೆ ಆಗ್ರಹ</strong>: ‘ಹೆರಿಗೆ ಆಸ್ಪತ್ರೆಯ ಸೌಲಭ್ಯ ದೊರಕಿಸಲು ವಿಫಲರಾಗಿರುವ ದೇಶಪಾಂಡೆ ಅವರು ಪತ್ರಕರ್ತರ ಮತ್ತು ಹೆಣ್ಣುಮಕ್ಕಳ ಘನತೆಗೆ ಧಕ್ಕೆ ಆಗುವ ರೀತಿಯ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅವರು ಕ್ಷಮೆ ಕೇಳಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>