ಎಸ್ಐಟಿ ಅಧಿಕಾರಿಗಳ ತಂಡ, ಖಾನಾಪುರ–ಬೆಳಗಾವಿ ತಾಲ್ಲೂಕಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ತನಿಖೆ ಮುಂದುವರಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಸಂಬಂಧವಿದೆ ಎನ್ನಲಾಗುತ್ತಿರುವ, ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಶರದ್ ಕಲಸ್ಕರ್ ಹಾಗೂ ಸುಧನ್ವ ಗೋಂದಳಿಕರ್ ಅವರನ್ನು ಇಲ್ಲಿಗೆ ಕರೆತಂದಿದೆ. ಅರಣ್ಯ ಪ್ರದೇಶದಲ್ಲಿ ನಡೆಸಿದ ಬಂದೂಕು ತರಬೇತಿ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿದೆ. ತರಬೇತಿಗೆ ಬಳಸಲಾದ ಐದು ಗುಂಡುಗಳು, ಐದು ಜೀವಂತ ಗುಂಡುಗಳು ಹಾಗೂ ಮಹತ್ವದ ಸಾಕ್ಷ್ಯಾಧಾರಗಳು ಸಿಕ್ಕಿವೆ ಎಂದು ಹೇಳಲಾಗುತ್ತಿದೆ.