<p><strong>ಬೆಂಗಳೂರು:</strong>‘ವಿಧಾನಸಭಾಧ್ಯಕ್ಷರು ನಾಳೆ (ಮಂಗಳವಾರ) ಬೆಳಿಗ್ಗೆ ವಿಧಾನಸಭೆ ಅಧಿವೇಶನ ಕರೆದಿದ್ದಾರೆ. ಆದರೆ, ಆಡಳಿತ ಪಕ್ಷ ಕಾಂಗ್ರೆಸ್ ಅದೇ ಸಮಯಕ್ಕೆ ಸರಿಯಾಗಿ ಲೋಕಭವನ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದು ಎಷ್ಟರ ಮಟ್ಟಿಗೆ ಸಮಂಜಸ’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.</p>.<p>ಒಂದು ಕಡೆ ಸಭಾಧ್ಯಕ್ಷರು ರಾಜ್ಯಪಾಲರ ಭಾಷಣದ ಮೇಲೆ ‘ಗೊಂದಲ’ (ವಂದನಾ) ನಿರ್ಣಯದ ಕುರಿತ ಚರ್ಚೆಯನ್ನು ಕಲಾಪದ ಅಜೆಂಡಾದಲ್ಲಿ ಸೇರಿಸಿದ್ದಾರೆ. ಚರ್ಚೆಯನ್ನು ಆಲಿಸಲು ಆಡಳಿತ ಪಕ್ಷದ ಯಾರೂ ಇರುವುದಿಲ್ಲ ಎಂದು ಹೇಳಿದ್ದಾರೆ.</p>.<h2>ಕಾಂಗ್ರೆಸ್ ಪಕ್ಷಕ್ಕೆ ಅವರು ಕೆಲ ಪ್ರಶ್ನೆಗಳು ಕೇಳಿದ್ದಾರೆ–</h2>.<ul><li><p>ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಆಡಳಿತ ಪಕ್ಷ ಲೋಕಭವನಕ್ಕೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡು ತನ್ನ ಶಾಸಕರು ಅದರಲ್ಲಿ ಭಾಗವಹಿಸುತ್ತಾರೆ ಎಂದು ಪ್ರಕಟಣೆ ಹೊರಡಿಸಿರುವುದು ಎಷ್ಟು ಸಮಂಜಸ?</p></li><li><p>ಬೆಂಗಳೂರಿನ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಮುತ್ತಿಗೆ ಮಾಡುವ ಕಾರ್ಯಕ್ರಮವನ್ನು ಹೈಕೋರ್ಟ್ ನಿರ್ದೇಶನದಂತೆ ನಿಷೇಧಿಸಲಾಗಿದೆ. ಒಂದು ವೇಳೆ ಆಳುವ ಪಕ್ಷಕ್ಕೆ ಈ ರೀತಿ ಮುತ್ತಿಗೆ ಎಂಬ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರೆ ಬೇರೆ ಪಕ್ಷಗಳಿಗೂ ಅವಕಾಶ ನೀಡಲಾಗುತ್ತದೆಯೇ?</p></li><li><p>ಆಡಳಿತ ನಡೆಸುತ್ತಿರುವ ಪಕ್ಷವೇ ಕಾನೂನನ್ನು ಉಲ್ಲಂಘಿಸುವುದು ಎಷ್ಟು ಸಮಂಜಸ? </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ವಿಧಾನಸಭಾಧ್ಯಕ್ಷರು ನಾಳೆ (ಮಂಗಳವಾರ) ಬೆಳಿಗ್ಗೆ ವಿಧಾನಸಭೆ ಅಧಿವೇಶನ ಕರೆದಿದ್ದಾರೆ. ಆದರೆ, ಆಡಳಿತ ಪಕ್ಷ ಕಾಂಗ್ರೆಸ್ ಅದೇ ಸಮಯಕ್ಕೆ ಸರಿಯಾಗಿ ಲೋಕಭವನ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದು ಎಷ್ಟರ ಮಟ್ಟಿಗೆ ಸಮಂಜಸ’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.</p>.<p>ಒಂದು ಕಡೆ ಸಭಾಧ್ಯಕ್ಷರು ರಾಜ್ಯಪಾಲರ ಭಾಷಣದ ಮೇಲೆ ‘ಗೊಂದಲ’ (ವಂದನಾ) ನಿರ್ಣಯದ ಕುರಿತ ಚರ್ಚೆಯನ್ನು ಕಲಾಪದ ಅಜೆಂಡಾದಲ್ಲಿ ಸೇರಿಸಿದ್ದಾರೆ. ಚರ್ಚೆಯನ್ನು ಆಲಿಸಲು ಆಡಳಿತ ಪಕ್ಷದ ಯಾರೂ ಇರುವುದಿಲ್ಲ ಎಂದು ಹೇಳಿದ್ದಾರೆ.</p>.<h2>ಕಾಂಗ್ರೆಸ್ ಪಕ್ಷಕ್ಕೆ ಅವರು ಕೆಲ ಪ್ರಶ್ನೆಗಳು ಕೇಳಿದ್ದಾರೆ–</h2>.<ul><li><p>ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಆಡಳಿತ ಪಕ್ಷ ಲೋಕಭವನಕ್ಕೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡು ತನ್ನ ಶಾಸಕರು ಅದರಲ್ಲಿ ಭಾಗವಹಿಸುತ್ತಾರೆ ಎಂದು ಪ್ರಕಟಣೆ ಹೊರಡಿಸಿರುವುದು ಎಷ್ಟು ಸಮಂಜಸ?</p></li><li><p>ಬೆಂಗಳೂರಿನ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಮುತ್ತಿಗೆ ಮಾಡುವ ಕಾರ್ಯಕ್ರಮವನ್ನು ಹೈಕೋರ್ಟ್ ನಿರ್ದೇಶನದಂತೆ ನಿಷೇಧಿಸಲಾಗಿದೆ. ಒಂದು ವೇಳೆ ಆಳುವ ಪಕ್ಷಕ್ಕೆ ಈ ರೀತಿ ಮುತ್ತಿಗೆ ಎಂಬ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರೆ ಬೇರೆ ಪಕ್ಷಗಳಿಗೂ ಅವಕಾಶ ನೀಡಲಾಗುತ್ತದೆಯೇ?</p></li><li><p>ಆಡಳಿತ ನಡೆಸುತ್ತಿರುವ ಪಕ್ಷವೇ ಕಾನೂನನ್ನು ಉಲ್ಲಂಘಿಸುವುದು ಎಷ್ಟು ಸಮಂಜಸ? </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>