<p><strong>ಬೆಂಗಳೂರು</strong>: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಎಸ್.ವಿದ್ಯಾಶಂಕರ್ ನೇಮಕವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ವಿಟಿಯುಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಪ್ರಾಧ್ಯಾಪಕರಾದ ಹಾಸನದ ಬಿ.ಯೋಗೇಶ್ ಮತ್ತು ಕೆ.ಎ.ವೇಣುಗೋಪಾಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕುಲಪತಿ ವಿದ್ಯಾಶಂಕರ್ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.</p>.<p>‘ವಿಟಿಯು ಅಕಾಡೆಮಿಕ್ ಸೆನೆಟ್ ಮತ್ತು ಬಾಹ್ಯ ಮಂಡಳಿಯ ಸದಸ್ಯರನ್ನೇ ಒಳಗೊಂಡಿದ್ದ ವಿಟಿಯು ಕುಲಪತಿ ಶೋಧನಾ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಈ ನೇಮಕಾತಿ ಮಾಡಲಾಗಿದೆ. ಇದು ಯುಜಿಸಿ ನಿಬಂಧನೆಗಳು–2018 ಮತ್ತು ವಿಟಿಯು ಕಾಯ್ದೆಯ ಉಲ್ಲಂಘನೆಯಾಗಿದ್ದು ಈ ನೇಮಕಾತಿಯನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಎಸ್.ವಿದ್ಯಾಶಂಕರ್ ನೇಮಕವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ವಿಟಿಯುಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಪ್ರಾಧ್ಯಾಪಕರಾದ ಹಾಸನದ ಬಿ.ಯೋಗೇಶ್ ಮತ್ತು ಕೆ.ಎ.ವೇಣುಗೋಪಾಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕುಲಪತಿ ವಿದ್ಯಾಶಂಕರ್ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.</p>.<p>‘ವಿಟಿಯು ಅಕಾಡೆಮಿಕ್ ಸೆನೆಟ್ ಮತ್ತು ಬಾಹ್ಯ ಮಂಡಳಿಯ ಸದಸ್ಯರನ್ನೇ ಒಳಗೊಂಡಿದ್ದ ವಿಟಿಯು ಕುಲಪತಿ ಶೋಧನಾ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಈ ನೇಮಕಾತಿ ಮಾಡಲಾಗಿದೆ. ಇದು ಯುಜಿಸಿ ನಿಬಂಧನೆಗಳು–2018 ಮತ್ತು ವಿಟಿಯು ಕಾಯ್ದೆಯ ಉಲ್ಲಂಘನೆಯಾಗಿದ್ದು ಈ ನೇಮಕಾತಿಯನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>