‘ಕಾಂಗ್ರೆಸ್ ಅಥವಾ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿದ್ದರೂ ಜೆಡಿಎಸ್ಗೆ ಮೇಯರ್ ಪಟ್ಟ ಸಿಗುತಿತ್ತು. ಹೀಗಾಗಿ, ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆವು. ಆದರೆ, ನಮ್ಮ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ ಮತದಾನದಿಂದ ದೂರ ಉಳಿದರು. ಈ ವಿಚಾರವಾಗಿ ಚುನಾವಣೆಯ ಹಿಂದಿನ ರಾತ್ರಿ ತನ್ವೀರ್ ಕೂಡ ಸಂದೇಶ ಕಳುಹಿಸಿದ್ದರು. ಇವರಿಬ್ಬರು ಬಿಜೆಪಿ ಜೊತೆ ಹೋಗಬಹುದೆಂಬ ಕಾರಣಕ್ಕೆ ಜೆಡಿಎಸ್ನ ಪಾಲಿಕೆ ಸದಸ್ಯರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿತು’ ಎಂದು ವಿವರಿಸಿದರು.