<p><strong>ಮೈಸೂರು:</strong> ಇಲ್ಲಿನ ದಟ್ಟಗಳ್ಳಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಶಾಸಕ ಸಾ.ರಾ.ಮಹೇಶ್ ಅವರು ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ನೇತೃತ್ವದಲ್ಲಿ ಗುರುವಾರ ತಂಡವನ್ನು ರಚಿಸಲಾಗಿದೆ.</p>.<p>ಭೂದಾಖಲೆಗಳ ಉಪನಿರ್ದೇಶಕರಾದ ಜಿ.ಸೀಮಂತಿನಿ, ಸಹಾಯಕ ನಿರ್ದೇಶಕ ಎಚ್.ಮಂಜುನಾಥ್ ಸೇರಿದಂತೆ 7 ಮಂದಿ ತಂಡದಲ್ಲಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ರಾಜಕಾಲುವೆ ಒತ್ತುವರಿ ಆಗಿದೆಯೇ ಇಲ್ಲವೇ ಎಂಬುದರ ಕುರಿತು ಜೂನ್ 13ರ ಒಳಗೆ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ ಆದೇಶಿಸಿದ್ದಾರೆ.</p>.<p><strong>ರೋಹಿಣಿ ತನಿಖಾಧಿಕಾರಿಯಾದರೂ ಅಭ್ಯಂತರ ಇಲ್ಲ- ಸಾ.ರಾ.ಮಹೇಶ್: </strong>ಗುರುವಾರ ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ, ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ ಶಾಸಕ ಸಾ.ರಾ.ಮಹೇಶ್, ಕಲ್ಯಾಣಮಂಟಪ ನಿರ್ಮಾಣದ ವೇಳೆ ರಾಜಕಾಲುವೆ ಒತ್ತುವರಿಯಾಗಿರುವುದು ಸಾಬೀತಾದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯುವುದಾಗಿ ಪುನರುಚ್ಚರಿಸಿದರು.</p>.<p>ಈ ಪ್ರಕರಣ ಕುರಿತು ತನಿಖಾಧಿಕಾರಿಯನ್ನಾಗಿ ರೋಹಿಣಿ ಸಿಂಧೂರಿ ಅವರನ್ನೇ ನೇಮಕ ಮಾಡಿದರೂ ತಮ್ಮ ಅಭ್ಯಂತರ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಈ ಬಗ್ಗೆ ತನಿಖೆ ನಡೆಸಿ, ವರದಿ ನೀಡುವುದಾಗಿ ಭರವಸೆ ನೀಡುವ ಮೂಲಕ ಸಾ.ರಾ.ಮಹೇಶ್ ಅವರ ಮನವೊಲಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/mysore/sa-ra-mahesh-rohini-sindhuri-land-mafia-karmataka-politics-jds-mysore-837358.html" itemprop="url">ರಾಜಕಾಲುವೆ ಮೇಲೆ ಸಾ.ರಾ.ಚೌಲ್ಟ್ರಿ: ರೋಹಿಣಿ ಸಿಂಧೂರಿ ಭೂ ಮಾಫಿಯಾ ಆರೋಪ</a></p>.<p><strong>ಸಮಗ್ರ ತನಿಖೆ ಆಗಬೇಕು: ಸಿಂಧೂರಿ ಒತ್ತಾಯ</strong></p>.<p>ಶಾಸಕ ಸಾ.ರಾ.ಮಹೇಶ್ ಅವರ ಸಾ.ರಾ.ಚೌಲ್ಟ್ರಿ ಕುರಿತ ಕೇವಲ ಒಂದೇ ಒಂದು ಅಂಶವನ್ನಿಟ್ಟುಕೊಂಡು ತನಿಖೆ ನಡೆಸುವುದು ಸೂಕ್ತವಲ್ಲ. ಸಮಗ್ರ ತನಿಖೆ ನಡೆಸಬೇಕು ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಾದೇಶಿಕ ಆಯುಕ್ತರನ್ನು ಒತ್ತಾಯಿಸಿದ್ದಾರೆ.</p>.<p>ಗೋಮಾಳದ ಭೂಮಿ ಹೇಗೆ ಖಾಸಗಿ ಸ್ವತ್ತಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಲಿಂಗಾಂಬುದಿ ಕೆರೆ ಸಮೀಪ ಇರುವ ಭೂಮಿಯ ಕುರಿತೂ ತನಿಖೆ ಕೈಗೊಳ್ಳಬೇಕು ಎಂದು ಅವರು ಇದೇ ವೇಳೆ ಹೇಳಿದ್ದಾರೆ.</p>.<p>‘ಭೂಪರಿವರ್ತನೆಯಾಗಿರುವುದೇ ಸರಿಯಲ್ಲ. ಮಾಸ್ಟರ್ಪ್ಲಾನ್ಗೆ ವಿರುದ್ಧವಾಗಿ ಕಟ್ಟಡವನ್ನು ನಿರ್ಮಿಸಲಾಗಿದೆ. ಆದರೆ, ತನಿಖೆ ಸಾ.ರಾ.ಮಹೇಶ್ ಅವರು ಹೇಳಿದಂತೆ ಕೇವಲ ಒಂದು ಅಂಶಕ್ಕೆ ಮಾತ್ರವೇ ಸೀಮಿತಗೊಂಡಿದೆ’ ಎಂದಿದ್ದಾರೆ.</p>.<p><strong>‘ತನಿಖಾಧಿಕಾರಿಯಾಗಿ ಸಿಂಧೂರಿ ನೇಮಿಸಲಿ’</strong></p>.<p>ಮೈಸೂರು ನಗರ ಹಾಗೂ ಸುತ್ತಮುತ್ತ ಆಗಿರುವ ಭೂ ಹಗರಣಗಳನ್ನು ಬಯಲಿಗೆಳೆಯಲು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವಿಶೇಷ ತನಿಖಾಧಿಕಾರಿಯನ್ನಾಗಿ ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಜಿಲ್ಲೆಯಲ್ಲಿ ಎಲ್ಲೆಲ್ಲಿ ಒತ್ತುವರಿ ಆಗಿದೆ ಎಂಬ ನಿಖರ ಮಾಹಿತಿ ಅವರಲ್ಲಿದೆ. ಆದ್ದರಿಂದ ಆರು ತಿಂಗಳ ಅವಧಿಗೆ ಅವರನ್ನೇ ವಿಶೇಷಾಧಿಕಾರಿಯನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ’ಸಿಂಧೂರಿ ಅವರನ್ನೇ ನೇಮಿಸಲಿ. ಅದು ಸಂತೋಷದ ವಿಚಾರ. ವಿಶ್ವನಾಥ್ ಹಿರಿಯ ನಾಯಕ. ಅವರ ಸಲಹೆ ಸ್ವೀಕಾರವಾಗುವಂಥದ್ದು‘ ಎಂದರು.</p>.<p>* ಜಿಲ್ಲೆಯಲ್ಲಿನ ಭೂ ಮಾಫಿಯಾ ವಿಚಾರವಾಗಿ ಜಿಲ್ಲಾಧಿಕಾರಿ ತನಿಖೆ ನಡೆಸಿ, ಕ್ರಮ ಕೈಗೊಳ್ಳುತ್ತಾರೆ. ತನಿಖೆಗೆ ನಾವು ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ.</p>.<p><em><strong>–ಎಸ್.ಟಿ.ಸೋಮಶೇಖರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ದಟ್ಟಗಳ್ಳಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಶಾಸಕ ಸಾ.ರಾ.ಮಹೇಶ್ ಅವರು ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ನೇತೃತ್ವದಲ್ಲಿ ಗುರುವಾರ ತಂಡವನ್ನು ರಚಿಸಲಾಗಿದೆ.</p>.<p>ಭೂದಾಖಲೆಗಳ ಉಪನಿರ್ದೇಶಕರಾದ ಜಿ.ಸೀಮಂತಿನಿ, ಸಹಾಯಕ ನಿರ್ದೇಶಕ ಎಚ್.ಮಂಜುನಾಥ್ ಸೇರಿದಂತೆ 7 ಮಂದಿ ತಂಡದಲ್ಲಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ರಾಜಕಾಲುವೆ ಒತ್ತುವರಿ ಆಗಿದೆಯೇ ಇಲ್ಲವೇ ಎಂಬುದರ ಕುರಿತು ಜೂನ್ 13ರ ಒಳಗೆ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ ಆದೇಶಿಸಿದ್ದಾರೆ.</p>.<p><strong>ರೋಹಿಣಿ ತನಿಖಾಧಿಕಾರಿಯಾದರೂ ಅಭ್ಯಂತರ ಇಲ್ಲ- ಸಾ.ರಾ.ಮಹೇಶ್: </strong>ಗುರುವಾರ ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ, ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ ಶಾಸಕ ಸಾ.ರಾ.ಮಹೇಶ್, ಕಲ್ಯಾಣಮಂಟಪ ನಿರ್ಮಾಣದ ವೇಳೆ ರಾಜಕಾಲುವೆ ಒತ್ತುವರಿಯಾಗಿರುವುದು ಸಾಬೀತಾದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯುವುದಾಗಿ ಪುನರುಚ್ಚರಿಸಿದರು.</p>.<p>ಈ ಪ್ರಕರಣ ಕುರಿತು ತನಿಖಾಧಿಕಾರಿಯನ್ನಾಗಿ ರೋಹಿಣಿ ಸಿಂಧೂರಿ ಅವರನ್ನೇ ನೇಮಕ ಮಾಡಿದರೂ ತಮ್ಮ ಅಭ್ಯಂತರ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಈ ಬಗ್ಗೆ ತನಿಖೆ ನಡೆಸಿ, ವರದಿ ನೀಡುವುದಾಗಿ ಭರವಸೆ ನೀಡುವ ಮೂಲಕ ಸಾ.ರಾ.ಮಹೇಶ್ ಅವರ ಮನವೊಲಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/mysore/sa-ra-mahesh-rohini-sindhuri-land-mafia-karmataka-politics-jds-mysore-837358.html" itemprop="url">ರಾಜಕಾಲುವೆ ಮೇಲೆ ಸಾ.ರಾ.ಚೌಲ್ಟ್ರಿ: ರೋಹಿಣಿ ಸಿಂಧೂರಿ ಭೂ ಮಾಫಿಯಾ ಆರೋಪ</a></p>.<p><strong>ಸಮಗ್ರ ತನಿಖೆ ಆಗಬೇಕು: ಸಿಂಧೂರಿ ಒತ್ತಾಯ</strong></p>.<p>ಶಾಸಕ ಸಾ.ರಾ.ಮಹೇಶ್ ಅವರ ಸಾ.ರಾ.ಚೌಲ್ಟ್ರಿ ಕುರಿತ ಕೇವಲ ಒಂದೇ ಒಂದು ಅಂಶವನ್ನಿಟ್ಟುಕೊಂಡು ತನಿಖೆ ನಡೆಸುವುದು ಸೂಕ್ತವಲ್ಲ. ಸಮಗ್ರ ತನಿಖೆ ನಡೆಸಬೇಕು ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಾದೇಶಿಕ ಆಯುಕ್ತರನ್ನು ಒತ್ತಾಯಿಸಿದ್ದಾರೆ.</p>.<p>ಗೋಮಾಳದ ಭೂಮಿ ಹೇಗೆ ಖಾಸಗಿ ಸ್ವತ್ತಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಲಿಂಗಾಂಬುದಿ ಕೆರೆ ಸಮೀಪ ಇರುವ ಭೂಮಿಯ ಕುರಿತೂ ತನಿಖೆ ಕೈಗೊಳ್ಳಬೇಕು ಎಂದು ಅವರು ಇದೇ ವೇಳೆ ಹೇಳಿದ್ದಾರೆ.</p>.<p>‘ಭೂಪರಿವರ್ತನೆಯಾಗಿರುವುದೇ ಸರಿಯಲ್ಲ. ಮಾಸ್ಟರ್ಪ್ಲಾನ್ಗೆ ವಿರುದ್ಧವಾಗಿ ಕಟ್ಟಡವನ್ನು ನಿರ್ಮಿಸಲಾಗಿದೆ. ಆದರೆ, ತನಿಖೆ ಸಾ.ರಾ.ಮಹೇಶ್ ಅವರು ಹೇಳಿದಂತೆ ಕೇವಲ ಒಂದು ಅಂಶಕ್ಕೆ ಮಾತ್ರವೇ ಸೀಮಿತಗೊಂಡಿದೆ’ ಎಂದಿದ್ದಾರೆ.</p>.<p><strong>‘ತನಿಖಾಧಿಕಾರಿಯಾಗಿ ಸಿಂಧೂರಿ ನೇಮಿಸಲಿ’</strong></p>.<p>ಮೈಸೂರು ನಗರ ಹಾಗೂ ಸುತ್ತಮುತ್ತ ಆಗಿರುವ ಭೂ ಹಗರಣಗಳನ್ನು ಬಯಲಿಗೆಳೆಯಲು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವಿಶೇಷ ತನಿಖಾಧಿಕಾರಿಯನ್ನಾಗಿ ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಜಿಲ್ಲೆಯಲ್ಲಿ ಎಲ್ಲೆಲ್ಲಿ ಒತ್ತುವರಿ ಆಗಿದೆ ಎಂಬ ನಿಖರ ಮಾಹಿತಿ ಅವರಲ್ಲಿದೆ. ಆದ್ದರಿಂದ ಆರು ತಿಂಗಳ ಅವಧಿಗೆ ಅವರನ್ನೇ ವಿಶೇಷಾಧಿಕಾರಿಯನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ’ಸಿಂಧೂರಿ ಅವರನ್ನೇ ನೇಮಿಸಲಿ. ಅದು ಸಂತೋಷದ ವಿಚಾರ. ವಿಶ್ವನಾಥ್ ಹಿರಿಯ ನಾಯಕ. ಅವರ ಸಲಹೆ ಸ್ವೀಕಾರವಾಗುವಂಥದ್ದು‘ ಎಂದರು.</p>.<p>* ಜಿಲ್ಲೆಯಲ್ಲಿನ ಭೂ ಮಾಫಿಯಾ ವಿಚಾರವಾಗಿ ಜಿಲ್ಲಾಧಿಕಾರಿ ತನಿಖೆ ನಡೆಸಿ, ಕ್ರಮ ಕೈಗೊಳ್ಳುತ್ತಾರೆ. ತನಿಖೆಗೆ ನಾವು ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ.</p>.<p><em><strong>–ಎಸ್.ಟಿ.ಸೋಮಶೇಖರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>