<p><strong>ರಾಮನಗರ</strong>: ‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಯೋಸಹಜ ಅನಾರೋಗ್ಯದಿಂದಾಗಿ ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.</p><p>ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ.</p><p>ಸದ್ಯ ಬೆಂಗಳೂರಿನಲ್ಲಿ ಪುತ್ರನೊಂದಿಗೆ ನೆಲಸಿದ್ದ ಅವರ ಆರೋಗ್ಯದಲ್ಲಿ ಆಗಾಗ ಏರುಪೇರಾಗುತ್ತಿತ್ತು. ಎರಡು ದಿನಗಳ ಹಿಂದೆ ಉಸಿರಾಟದ ತೀವ್ರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿ ರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. </p>.ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಸಾಲು ಮರದ ತಿಮ್ಮಕ್ಕ ದಾಖಲು.ಸಿಎಂ ಸಿದ್ದರಾಮಯ್ಯಗೆ ಸಾಲು ಮರದ ತಿಮ್ಮಕ್ಕ ಶುಭ ಹಾರೈಕೆ .<p>ಎರಡು ವರ್ಷದ ಹಿಂದೆಯೇ ಅವರಿಗೆ ಲಘು ಹೃದಯಾಘಾತವಾಗಿತ್ತು. ನಂತರ ಚಿಕಿತ್ಸೆ ಕೊಡಿಸಲಾಗಿತ್ತು. ಎರಡು ತಿಂಗಳ ಹಿಂದೆಯೂ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಚೇತರಿಸಿಕೊಂಡಿದ್ದರು.</p><p>ತಿಮ್ಮಕ್ಕ ಮತ್ತು ಚಿಕ್ಕಯ್ಯ ದಂಪತಿಗೆ ಮಕ್ಕಳಿರಲಿಲ್ಲ. ಆ ಕೊರಗು ಮರೆಯಲು ತಮ್ಮೂರಿನ ರಸ್ತೆ ಬದಿ ಗಿಡಗಳನ್ನು ನೆಟ್ಟರು. ಅವುಗಳನ್ನೇ ತಮ್ಮ ಮಕ್ಕಳೆಂದು ನಿತ್ಯ ನೀರು ಹಾಕಿ, ದನಕರು ತಿನ್ನದಂತೆ ನೋಡಿಕೊಂಡು ಪೋಷಿಸಿದರು. ಆ ಗಿಡಗಳೀಗ ದೊಡ್ಡ ಮರಗಳಾಗಿ ಬೆಳೆದು ನಿಂತಿವೆ.</p><p>ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡೋಜ ಪ್ರಶಸ್ತಿಗೂ ಭಾಜನರಾಗಿದ್ದಾರೆ.</p><p><strong>ಇಂದು ಅಂತಿಮ ದರ್ಶನ:</strong> ತಿಮ್ಮಕ್ಕ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಹುಲಿಕಲ್ ಗ್ರಾಮಕ್ಕೆ ಶುಕ್ರವಾರ ಸಂಜೆ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಗ್ರಾಮಸ್ಥರು, ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆದರು. ಅಲ್ಲಿಂದ ತಿಮ್ಮಕ್ಕ ಅವರ ಸಾಕುಮಗ ಉಮೇಶ್ ಹುಟ್ಟೂರು ಹಾಸನ ಜಿಲ್ಲೆ ಬೇಲೂರಿನ ಬಳ್ಳೂರು ಗ್ರಾಮಕ್ಕೆ ಕೊಂಡೊಯ್ದು, ರಾತ್ರಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಶನಿವಾರ ಬೆಳಿಗ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. </p>.Bihar Election Results 2025 LIVE: NDAಗೆ ಭರ್ಜರಿ ಜಯ: 'ಇಂಡಿಯಾ'ಗೆ ಹಿನ್ನಡೆ.Bihar Election Results | ಜನರು ಮೋದಿ ಜೊತೆಗಿದ್ದಾರೆ: ಚಂದ್ರಬಾಬು ನಾಯ್ಡು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಯೋಸಹಜ ಅನಾರೋಗ್ಯದಿಂದಾಗಿ ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.</p><p>ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ.</p><p>ಸದ್ಯ ಬೆಂಗಳೂರಿನಲ್ಲಿ ಪುತ್ರನೊಂದಿಗೆ ನೆಲಸಿದ್ದ ಅವರ ಆರೋಗ್ಯದಲ್ಲಿ ಆಗಾಗ ಏರುಪೇರಾಗುತ್ತಿತ್ತು. ಎರಡು ದಿನಗಳ ಹಿಂದೆ ಉಸಿರಾಟದ ತೀವ್ರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿ ರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. </p>.ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಸಾಲು ಮರದ ತಿಮ್ಮಕ್ಕ ದಾಖಲು.ಸಿಎಂ ಸಿದ್ದರಾಮಯ್ಯಗೆ ಸಾಲು ಮರದ ತಿಮ್ಮಕ್ಕ ಶುಭ ಹಾರೈಕೆ .<p>ಎರಡು ವರ್ಷದ ಹಿಂದೆಯೇ ಅವರಿಗೆ ಲಘು ಹೃದಯಾಘಾತವಾಗಿತ್ತು. ನಂತರ ಚಿಕಿತ್ಸೆ ಕೊಡಿಸಲಾಗಿತ್ತು. ಎರಡು ತಿಂಗಳ ಹಿಂದೆಯೂ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಚೇತರಿಸಿಕೊಂಡಿದ್ದರು.</p><p>ತಿಮ್ಮಕ್ಕ ಮತ್ತು ಚಿಕ್ಕಯ್ಯ ದಂಪತಿಗೆ ಮಕ್ಕಳಿರಲಿಲ್ಲ. ಆ ಕೊರಗು ಮರೆಯಲು ತಮ್ಮೂರಿನ ರಸ್ತೆ ಬದಿ ಗಿಡಗಳನ್ನು ನೆಟ್ಟರು. ಅವುಗಳನ್ನೇ ತಮ್ಮ ಮಕ್ಕಳೆಂದು ನಿತ್ಯ ನೀರು ಹಾಕಿ, ದನಕರು ತಿನ್ನದಂತೆ ನೋಡಿಕೊಂಡು ಪೋಷಿಸಿದರು. ಆ ಗಿಡಗಳೀಗ ದೊಡ್ಡ ಮರಗಳಾಗಿ ಬೆಳೆದು ನಿಂತಿವೆ.</p><p>ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡೋಜ ಪ್ರಶಸ್ತಿಗೂ ಭಾಜನರಾಗಿದ್ದಾರೆ.</p><p><strong>ಇಂದು ಅಂತಿಮ ದರ್ಶನ:</strong> ತಿಮ್ಮಕ್ಕ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಹುಲಿಕಲ್ ಗ್ರಾಮಕ್ಕೆ ಶುಕ್ರವಾರ ಸಂಜೆ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಗ್ರಾಮಸ್ಥರು, ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆದರು. ಅಲ್ಲಿಂದ ತಿಮ್ಮಕ್ಕ ಅವರ ಸಾಕುಮಗ ಉಮೇಶ್ ಹುಟ್ಟೂರು ಹಾಸನ ಜಿಲ್ಲೆ ಬೇಲೂರಿನ ಬಳ್ಳೂರು ಗ್ರಾಮಕ್ಕೆ ಕೊಂಡೊಯ್ದು, ರಾತ್ರಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಶನಿವಾರ ಬೆಳಿಗ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. </p>.Bihar Election Results 2025 LIVE: NDAಗೆ ಭರ್ಜರಿ ಜಯ: 'ಇಂಡಿಯಾ'ಗೆ ಹಿನ್ನಡೆ.Bihar Election Results | ಜನರು ಮೋದಿ ಜೊತೆಗಿದ್ದಾರೆ: ಚಂದ್ರಬಾಬು ನಾಯ್ಡು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>