ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕುರುಬ ಸಮಾಜದ ಒಬ್ಬರಿಗೂ ಬಿಜೆಪಿ ಟಿಕೆಟ್ ನೀಡಿಲ್ಲ. ಒಬ್ಬ ಮರಾಠರಿಗೂ ಹಾಗೂ ಒಬ್ಬ ಮುಸ್ಲಿಂಗೂ ಕೂಡ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಎನ್ನುವುದು ಪ್ರಧಾನಿ ಮೋದಿ ಅವರ ಬೋಗಸ್ ಘೋಷಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.