<p><strong>ಬೀದರ್:</strong> ಸಚಿನ್ ಮಾನಪ್ಪ ಪಾಂಚಾಳ್ (26) ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಎರಡನೇ ದಿನವಾದ ಶನಿವಾರವೂ ಮುಂದುವರೆಸಿದ್ದಾರೆ.</p><p>ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ನೇತೃತ್ವದ ತನಿಖಾ ತಂಡದ ಕೆಲ ಅಧಿಕಾರಿಗಳು ಶನಿವಾರ ಬೀದರ್ ರೈಲ್ವೆ ಪೊಲೀಸರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೊಂದು ತಂಡ ಸಚಿನ್ ಪಾಂಚಾಳ್ ಅವರು ಡಿ. 24ರಂದು ಕೊನೆಯ ಸಲ ಕಾಣಿಸಿಕೊಂಡಿದ್ದ ನಗರದ ನೌಬಾದ್ ಸಮೀಪದ ರಾಯಲ್ ಹೆರಿಟೇಜ್ ಬಾರ್ಗೆ ಭೇಟಿ ಕೊಟ್ಟು ಅಲ್ಲಿನ ಸಿಬ್ಬಂದಿ, ವೇಟರ್ಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.</p><p>ಸಿಐಡಿ ಅಧಿಕಾರಿಗಳು ಶುಕ್ರವಾರ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದರು. ಬಳಿಕ ಬೀದರ್ ರೈಲ್ವೆ ಪೊಲೀಸ್ ಠಾಣೆ ಹಾಗೂ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳಕ್ಕೆ ಭೇಟಿ ಕೊಟ್ಟು ಮಹಜರು ಮಾಡಿದ್ದರು. ಆನಂತರ ಸಚಿನ್ ಹುಟ್ಟೂರು ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮಕ್ಕೆ ಸಂಜೆ ಭೇಟಿ ಕೊಟ್ಟು, ರಾತ್ರಿ ವರೆಗೆ ಸಚಿನ್ ಕುಟುಂಬ ಸದಸ್ಯರ ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದರು.</p>.ಪ್ರಿಯಾಂಕ್ ಮನೆಗೆ ಮುತ್ತಿಗೆ; ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು.ಸಚಿನ್ ಆತ್ಮಹತ್ಯೆ ಪ್ರಕರಣ:2ಗಂಟೆಗೂ ಹೆಚ್ಚು ಕಾಲ ಕುಟುಂಬದವರ ವಿಚಾರಣೆ ನಡೆಸಿದ CID.<p>ಇಂದು ಬೆಳಿಗ್ಗೆ ಬೀದರ್ ರೈಲ್ವೆ ಪೊಲೀಸರು ಹಾಗೂ ರಾಯಲ್ ಹೆರಿಟೇಜ್ ಬಾರ್ನ ಸಿಬ್ಬಂದಿಯನ್ನು ಏಕಕಾಲಕ್ಕೆ ಎರಡು ಪ್ರತ್ಯೇಕ ತಂಡಗಳು ವಿಚಾರಣೆ ನಡೆಸಿವೆ. ಪುನಃ ಕಟ್ಟಿ ತೂಗಾಂವ್ ಗ್ರಾಮಕ್ಕೆ ಭೇಟಿ ಕೊಟ್ಟು, ಸಚಿನ್ ಕುಟುಂಬ ಸದಸ್ಯರಿಂದ ಇನ್ನಷ್ಟು ಮಾಹಿತಿ ಕಲೆ ಹಾಕಿ, ಬಳಿಕ ಕಲಬುರಗಿಗೆ ತೆರಳಲಿದ್ದಾರೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. </p><p>ಯುವ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರು ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 26ರಂದು ರೈಲಿನಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಲಬುರಗಿ ಕಾಂಗ್ರೆಸ್ ಮುಖಂಡ ರಾಜು ಕಪನೂರ ಸೇರಿದಂತೆ ಒಂಬತ್ತು ಜನರ ವಿರುದ್ಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜು ಕಪನೂರ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಸಚಿನ್ ಮಾನಪ್ಪ ಪಾಂಚಾಳ್ (26) ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಎರಡನೇ ದಿನವಾದ ಶನಿವಾರವೂ ಮುಂದುವರೆಸಿದ್ದಾರೆ.</p><p>ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ನೇತೃತ್ವದ ತನಿಖಾ ತಂಡದ ಕೆಲ ಅಧಿಕಾರಿಗಳು ಶನಿವಾರ ಬೀದರ್ ರೈಲ್ವೆ ಪೊಲೀಸರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೊಂದು ತಂಡ ಸಚಿನ್ ಪಾಂಚಾಳ್ ಅವರು ಡಿ. 24ರಂದು ಕೊನೆಯ ಸಲ ಕಾಣಿಸಿಕೊಂಡಿದ್ದ ನಗರದ ನೌಬಾದ್ ಸಮೀಪದ ರಾಯಲ್ ಹೆರಿಟೇಜ್ ಬಾರ್ಗೆ ಭೇಟಿ ಕೊಟ್ಟು ಅಲ್ಲಿನ ಸಿಬ್ಬಂದಿ, ವೇಟರ್ಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.</p><p>ಸಿಐಡಿ ಅಧಿಕಾರಿಗಳು ಶುಕ್ರವಾರ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದರು. ಬಳಿಕ ಬೀದರ್ ರೈಲ್ವೆ ಪೊಲೀಸ್ ಠಾಣೆ ಹಾಗೂ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳಕ್ಕೆ ಭೇಟಿ ಕೊಟ್ಟು ಮಹಜರು ಮಾಡಿದ್ದರು. ಆನಂತರ ಸಚಿನ್ ಹುಟ್ಟೂರು ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮಕ್ಕೆ ಸಂಜೆ ಭೇಟಿ ಕೊಟ್ಟು, ರಾತ್ರಿ ವರೆಗೆ ಸಚಿನ್ ಕುಟುಂಬ ಸದಸ್ಯರ ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದರು.</p>.ಪ್ರಿಯಾಂಕ್ ಮನೆಗೆ ಮುತ್ತಿಗೆ; ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು.ಸಚಿನ್ ಆತ್ಮಹತ್ಯೆ ಪ್ರಕರಣ:2ಗಂಟೆಗೂ ಹೆಚ್ಚು ಕಾಲ ಕುಟುಂಬದವರ ವಿಚಾರಣೆ ನಡೆಸಿದ CID.<p>ಇಂದು ಬೆಳಿಗ್ಗೆ ಬೀದರ್ ರೈಲ್ವೆ ಪೊಲೀಸರು ಹಾಗೂ ರಾಯಲ್ ಹೆರಿಟೇಜ್ ಬಾರ್ನ ಸಿಬ್ಬಂದಿಯನ್ನು ಏಕಕಾಲಕ್ಕೆ ಎರಡು ಪ್ರತ್ಯೇಕ ತಂಡಗಳು ವಿಚಾರಣೆ ನಡೆಸಿವೆ. ಪುನಃ ಕಟ್ಟಿ ತೂಗಾಂವ್ ಗ್ರಾಮಕ್ಕೆ ಭೇಟಿ ಕೊಟ್ಟು, ಸಚಿನ್ ಕುಟುಂಬ ಸದಸ್ಯರಿಂದ ಇನ್ನಷ್ಟು ಮಾಹಿತಿ ಕಲೆ ಹಾಕಿ, ಬಳಿಕ ಕಲಬುರಗಿಗೆ ತೆರಳಲಿದ್ದಾರೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. </p><p>ಯುವ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರು ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 26ರಂದು ರೈಲಿನಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಲಬುರಗಿ ಕಾಂಗ್ರೆಸ್ ಮುಖಂಡ ರಾಜು ಕಪನೂರ ಸೇರಿದಂತೆ ಒಂಬತ್ತು ಜನರ ವಿರುದ್ಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜು ಕಪನೂರ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>