<p><strong>ಮಂಗಳೂರು:</strong> ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಟ್ರಸ್ಟ್ ವತಿಯಿಂದ ನೀಡಲಾಗುವ ಈ ವರ್ಷದ ರಾಜ್ಯ ಪ್ರಶಸ್ತಿಗೆ ಹಿರಿಯ ನಟ ರಮೇಶ್ ಭಟ್, ಹಿರಿಯ ವೈದ್ಯ ಡಾ.ಬಿ.ಎಂ.ಹೆಗ್ಡೆ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಸಹಿತ 9 ಮಂದಿ ಆಯ್ಕೆಯಾಗಿದ್ದಾರೆ.</p>.<p>ಹಿರಿಯ ನಟಿ ಕಮನೀಧರನ್ (ರಂಗಭೂಮಿ), ವೈ.ಕೆ. ಸಂಧ್ಯಾಶರ್ಮಾ (ಸಾಹಿತ್ಯ), ಹಿರಿಯ ಯಕ್ಷಗಾನ ಕಲಾವಿದ ದಾಸಪ್ಪ ರೈ (ಯಕ್ಷಗಾನ), ಕುದ್ರೋಳಿ ಗಣೇಶ್ (ಜಾದೂ), ಕಾಂತಾಡಿಗುತ್ತು ಹರೀಶ್ ಪೆರ್ಗಡೆ (ಸಮಾಜಸೇವೆ), ಲೇಖಕ ಹಾಗೂ ಚಿತ್ರ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ (ಯುವ ಪ್ರಶಸ್ತಿ) ಇತರ ಪುರಸ್ಕೃತರು.</p>.<p>ಹಂಸಕಾವ್ಯ ರಾಷ್ಟ್ರೀಯ ಪುರಸ್ಕಾರವನ್ನು ಜ್ಯೋತಿ ಗುರುಪ್ರಸಾದ್ ಅವರ ‘ವರನಂದಿ ಪ್ರತಿಮೆ’ ಕವನಸಂಕಲನಕ್ಕೆ (₹ 15 ಸಾವಿರ ಬಹುಮಾನ) ಹಾಗೂ ಕಥಾಯಜ್ಞ ರಾಷ್ಟ್ರೀಯ ಪುರಸ್ಕಾರವನ್ನು ಪ್ರೊ.ಬಿ.ಆರ್. ಪೊಲೀಸ್ ಪಾಟೀಲ್ ಬನಹಟ್ಟಿ ಅವರ ‘ಬೂದಿ ಮತ್ತು ಕೆಂಡ’ ಕಥಾ ಸಂಕಲನಕ್ಕೆ (₹10 ಸಾವಿರ ಬಹುಮಾನ) ನೀಡಲಾಗುವುದು. ಮಾರ್ಚ್ 2ರಂದು ನಗರದ ಪುರಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಕಾ.ವಿ. ಕೃಷ್ಣದಾಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಟ್ರಸ್ಟ್ ವತಿಯಿಂದ ನೀಡಲಾಗುವ ಈ ವರ್ಷದ ರಾಜ್ಯ ಪ್ರಶಸ್ತಿಗೆ ಹಿರಿಯ ನಟ ರಮೇಶ್ ಭಟ್, ಹಿರಿಯ ವೈದ್ಯ ಡಾ.ಬಿ.ಎಂ.ಹೆಗ್ಡೆ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಸಹಿತ 9 ಮಂದಿ ಆಯ್ಕೆಯಾಗಿದ್ದಾರೆ.</p>.<p>ಹಿರಿಯ ನಟಿ ಕಮನೀಧರನ್ (ರಂಗಭೂಮಿ), ವೈ.ಕೆ. ಸಂಧ್ಯಾಶರ್ಮಾ (ಸಾಹಿತ್ಯ), ಹಿರಿಯ ಯಕ್ಷಗಾನ ಕಲಾವಿದ ದಾಸಪ್ಪ ರೈ (ಯಕ್ಷಗಾನ), ಕುದ್ರೋಳಿ ಗಣೇಶ್ (ಜಾದೂ), ಕಾಂತಾಡಿಗುತ್ತು ಹರೀಶ್ ಪೆರ್ಗಡೆ (ಸಮಾಜಸೇವೆ), ಲೇಖಕ ಹಾಗೂ ಚಿತ್ರ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ (ಯುವ ಪ್ರಶಸ್ತಿ) ಇತರ ಪುರಸ್ಕೃತರು.</p>.<p>ಹಂಸಕಾವ್ಯ ರಾಷ್ಟ್ರೀಯ ಪುರಸ್ಕಾರವನ್ನು ಜ್ಯೋತಿ ಗುರುಪ್ರಸಾದ್ ಅವರ ‘ವರನಂದಿ ಪ್ರತಿಮೆ’ ಕವನಸಂಕಲನಕ್ಕೆ (₹ 15 ಸಾವಿರ ಬಹುಮಾನ) ಹಾಗೂ ಕಥಾಯಜ್ಞ ರಾಷ್ಟ್ರೀಯ ಪುರಸ್ಕಾರವನ್ನು ಪ್ರೊ.ಬಿ.ಆರ್. ಪೊಲೀಸ್ ಪಾಟೀಲ್ ಬನಹಟ್ಟಿ ಅವರ ‘ಬೂದಿ ಮತ್ತು ಕೆಂಡ’ ಕಥಾ ಸಂಕಲನಕ್ಕೆ (₹10 ಸಾವಿರ ಬಹುಮಾನ) ನೀಡಲಾಗುವುದು. ಮಾರ್ಚ್ 2ರಂದು ನಗರದ ಪುರಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಕಾ.ವಿ. ಕೃಷ್ಣದಾಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>