<p><strong>ಚಿಕ್ಕಮಗಳೂರು</strong>: ರೈತರು, ಬಾಣಂತಿಯರು ಮತ್ತು ಪ್ರಾಮಾಣಿಕ ಅಧಿಕಾರಿಗಳ ಸಮಾಧಿಗಳ ಮೇಲೆ ರಾಜ್ಯ ಸರ್ಕಾರ ಸಾಧನಾ ಸಮಾವೇಶ ನಡೆಸಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದರು.</p><p>ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ. ಮೂರನೇ ಬಾರಿಗೆ ಬಿಯರ್ ದರ ಹೆಚ್ಚಾಗಿದೆ. ಖಜಾನೆ ಖಾಲಿಯಾಗಿದ್ದು, ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ. ಮದ್ಯದ ದರ ಹೆಚ್ಚಳ ಆಗಿರುವುದರಿಂದ ಕಳ್ಳತನ ಹೆಚ್ಚಾಗಲಿದೆ.</p><p>ಜನೌಷಧಿ ಯೋಜನೆಗೆ ಎಳ್ಳು ನೀರು ಹಾಕಿದೆ. ಎರಡು ವರ್ಷ ತುಂಬುತ್ತಿರುವ ಬೇಜವಬ್ದಾರಿ ಸರ್ಕಾರ ಇದು ಎಂದು ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>'ಎರಡು ವರ್ಷಗಳ ಸರ್ಕಾರದ ಸಾಧನೆ ಏನು, ಯಾವುದಾದರೂ ಅಣೆಕಟ್ಟೆ ಕಟ್ಟಿದ್ದಾರಾ, ಕಟ್ಟಿರುವ ಅಣೆಕಟ್ಟೆಯ ಎತ್ತರ ಜಾಸ್ತಿ ಮಾಡಿದ್ದಾರಾ, ಗೇಟ್ ರಿಪೇರಿ ಸಾಧ್ಯವಾಗಿಲ್ಲ. ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ' ಎಂದು ಪ್ರಶ್ನಿಸಿದರು.</p><p>ಗುತ್ತಿಗೆದಾರರಿಗೆ ಬಿಲ್ ಪಾವತಿಯಗಿಲ್ಲ. ಕಮಿಷನ್ ಮೊತ್ತ ಶೇ 60ಕ್ಕೆ ಏರಿಕೆಯಾಗಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿ ಮಾಡಿದರು. ಪ್ರಾಮಾಣಿಕ ಅಧಿಕಾರಿಗಳು ಬಲಿಯಾದರು, 2 ಸಾವಿರ ರೈತರ ಆತ್ಮಹತ್ಯೆಯಾಗಿದೆ. ಎಲ್ಲರ ಸಮಾಧಿ ಮೇಲೆ ಸಾಧನಾ ಸಮಾವೇಶ ನಡೆಸಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>ದೇಶ ಯುದ್ಧದ ಸಂದರ್ಭ ಎದುರಿಸುತ್ತಿದೆ. ಈ ವೇಳೆ ಸಮಾವೇಶ ಬೇಕೆ? ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದೆ. ಸಾಧನಾ ಸಮಾವೇಶ ಮುಗಿದ ಬಳಿಕ ಸರ್ಕಾರ ಉಳಿಯುವುದು ಅನುಮಾನ ಎಂದರು.</p><p>ಗ್ರೇಟರ್ ಬೆಂಗಳೂರು ಅಲ್ಲ, ಕ್ವಾರ್ಟರ್ ಬೆಂಗಳೂರು ಆಗಿದೆ. ಮಳೆಯಿಂದ ಇಡೀ ನಗರ ಮುಳುಗಿದೆ. ರಸ್ತೆ ಗುಂಡಿಗಳ ನಗರವಾಗಿದೆ. ಕಸಗಳ ರಾಶಿಯ ನಗರವಾಗಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ರೈತರು, ಬಾಣಂತಿಯರು ಮತ್ತು ಪ್ರಾಮಾಣಿಕ ಅಧಿಕಾರಿಗಳ ಸಮಾಧಿಗಳ ಮೇಲೆ ರಾಜ್ಯ ಸರ್ಕಾರ ಸಾಧನಾ ಸಮಾವೇಶ ನಡೆಸಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದರು.</p><p>ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ. ಮೂರನೇ ಬಾರಿಗೆ ಬಿಯರ್ ದರ ಹೆಚ್ಚಾಗಿದೆ. ಖಜಾನೆ ಖಾಲಿಯಾಗಿದ್ದು, ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ. ಮದ್ಯದ ದರ ಹೆಚ್ಚಳ ಆಗಿರುವುದರಿಂದ ಕಳ್ಳತನ ಹೆಚ್ಚಾಗಲಿದೆ.</p><p>ಜನೌಷಧಿ ಯೋಜನೆಗೆ ಎಳ್ಳು ನೀರು ಹಾಕಿದೆ. ಎರಡು ವರ್ಷ ತುಂಬುತ್ತಿರುವ ಬೇಜವಬ್ದಾರಿ ಸರ್ಕಾರ ಇದು ಎಂದು ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>'ಎರಡು ವರ್ಷಗಳ ಸರ್ಕಾರದ ಸಾಧನೆ ಏನು, ಯಾವುದಾದರೂ ಅಣೆಕಟ್ಟೆ ಕಟ್ಟಿದ್ದಾರಾ, ಕಟ್ಟಿರುವ ಅಣೆಕಟ್ಟೆಯ ಎತ್ತರ ಜಾಸ್ತಿ ಮಾಡಿದ್ದಾರಾ, ಗೇಟ್ ರಿಪೇರಿ ಸಾಧ್ಯವಾಗಿಲ್ಲ. ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ' ಎಂದು ಪ್ರಶ್ನಿಸಿದರು.</p><p>ಗುತ್ತಿಗೆದಾರರಿಗೆ ಬಿಲ್ ಪಾವತಿಯಗಿಲ್ಲ. ಕಮಿಷನ್ ಮೊತ್ತ ಶೇ 60ಕ್ಕೆ ಏರಿಕೆಯಾಗಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿ ಮಾಡಿದರು. ಪ್ರಾಮಾಣಿಕ ಅಧಿಕಾರಿಗಳು ಬಲಿಯಾದರು, 2 ಸಾವಿರ ರೈತರ ಆತ್ಮಹತ್ಯೆಯಾಗಿದೆ. ಎಲ್ಲರ ಸಮಾಧಿ ಮೇಲೆ ಸಾಧನಾ ಸಮಾವೇಶ ನಡೆಸಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>ದೇಶ ಯುದ್ಧದ ಸಂದರ್ಭ ಎದುರಿಸುತ್ತಿದೆ. ಈ ವೇಳೆ ಸಮಾವೇಶ ಬೇಕೆ? ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದೆ. ಸಾಧನಾ ಸಮಾವೇಶ ಮುಗಿದ ಬಳಿಕ ಸರ್ಕಾರ ಉಳಿಯುವುದು ಅನುಮಾನ ಎಂದರು.</p><p>ಗ್ರೇಟರ್ ಬೆಂಗಳೂರು ಅಲ್ಲ, ಕ್ವಾರ್ಟರ್ ಬೆಂಗಳೂರು ಆಗಿದೆ. ಮಳೆಯಿಂದ ಇಡೀ ನಗರ ಮುಳುಗಿದೆ. ರಸ್ತೆ ಗುಂಡಿಗಳ ನಗರವಾಗಿದೆ. ಕಸಗಳ ರಾಶಿಯ ನಗರವಾಗಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>