<p><strong>ಬೆಂಗಳೂರು: </strong>‘ಕಾವೇರಿ ಕೂಗು ಅಭಿಯಾನದ ಭಾಗವಾಗಿ ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ಕೊಳ್ಳದ ಪ್ರದೇಶದಲ್ಲಿ ನವೆಂಬರ್ ವೇಳೆಗೆ 1.10 ಕೋಟಿ ಸಸಿಯನ್ನು ರೈತರಿಗೆ ವಿತರಿಸುವ ಗುರಿ ಹೊಂದಲಾಗಿದೆ’ ಎಂದು ಈಶ ಫೌಂಡೇಷನ್ನಸದ್ಗುರು ಜಗ್ಗಿ ವಾಸುದೇವ್ ತಿಳಿಸಿದರು.</p>.<p>ವೆಬಿನಾರ್ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕರ್ನಾಟಕದಲ್ಲಿ 50 ಲಕ್ಷ ಮತ್ತು ತಮಿಳುನಾಡಿನಲ್ಲಿ 11 ಲಕ್ಷ ಸಸಿಗಳನ್ನು ಈಗಾಗಲೇ ವಿತರಿಸಲಾಗಿದೆ. ಕರ್ನಾಟಕದಲ್ಲೇ ಈ ವರ್ಷ 72 ಲಕ್ಷ ಸಸಿಗಳನ್ನು ವಿತರಿಸುವ ಗುರಿ ಇದೆ’ ಎಂದು ಹೇಳಿದರು.</p>.<p>‘2 ಕೋಟಿಗೂ ಹೆಚ್ಚು ಸಸಿ ವಿತರಣೆ ಮಾಡುವ ಗುರಿ ಇತ್ತು. ಆದರೆ, ಲಾಕ್ಡೌನ್ ಕಾರಣದಿಂದ ಬೇಡಿಕೆ ಕಡಿಮೆಯಾಗಲಿದೆ ಎಂದು ಭಾವಿಸಿಕೊಂಡೆವು. ಆದರೆ, ಬೇಡಿಕೆ ಕಡಿಮೆಯಾಗಿಲ್ಲ. ರೈತರು ಸಲ್ಲಿಸಿರುವ ಬೇಡಿಕೆಗೆ ತಕ್ಕಂತೆ ಸಸಿ ವಿತರಣೆ ಮಾಡಲು ಈ ವರ್ಷ ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ರೈತರ ಬೇಡಿಕೆ ಪೂರೈಸಲಾಗುವುದು’ ಎಂದರು.</p>.<p>‘ಮರ ವ್ಯವಸಾಯ ಪದ್ಧತಿ ಅನುಸರಿಸುವವರಿಗೆ ಮೂರು ವರ್ಷದ ತನಕ ಆದಾಯ ಇರುವುದಿಲ್ಲ. ನಾಲ್ಕನೇ ವರ್ಷದಿಂದ ಆದಾಯ ಶುರುವಾಗುತ್ತದೆ. ಮರ ಕಟಾವು ಮಾಡಲು ಅನುಮತಿ ಪಡೆಯಲು ರೈತರು ವಿವಿಧ ಇಲಾಖೆಗಳಿಗೆ ಸುತ್ತಬೇಕಿದೆ. ಈ ಪ್ರಕ್ರಿಯೆ ಸುಲಭಗೊಳಿಸಲು ಕೇಂದ್ರ ಸರ್ಕಾರ ಆನ್ಲೈನ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದೆ. ಇದು ಜಾರಿಯಾದರೆ ಮರ ವ್ಯವಸಾಯ ಪದ್ಧತಿ ಇನ್ನಷ್ಟು ಹೆಚ್ಚಳವಾಗಲಿದೆ’ ಎಂದು ಹೇಳಿದರು.</p>.<p>‘ಕಾವೇರಿ ಕೂಗು ಯೋಜನೆಯು ಕಾವೇರಿ ಜಲಾನಯನ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶ ಕೂಡ ಇದರಲ್ಲಿ ಸೇರಿದೆ. ಇದಕ್ಕೆ ಧರ್ಮಸ್ಥಳ, ಸುತ್ತೂರು ಮಠ, ಅರಣ್ಯ ಇಲಾಖೆಯ ಪ್ರೋತ್ಸಾಹ ಸಾಕಷ್ಟು ದೊರೆತಿದೆ’ ಎಂದರು.</p>.<p>‘ಕೋವಿಡ್ ಕಾರಣದಿಂದ ನಗರಗಳಿಂದ ಹಳ್ಳಿಗಳತ್ತ ಯುವಕರು ಮರು ವಲಸೆ ಆರಂಭಿಸಿದ್ದಾರೆ. ಕೃಷಿ ಜತೆಗೆ ಮರ ವ್ಯವಸಾಯದಲ್ಲಿ ತೊಡಗಿಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಅತಿಯಾದ ಮಳೆಯಿಂದ ನೆರೆ ಹಾವಳಿ ಸಂಭವಿಸುತ್ತಿಲ್ಲ. ಈ ಹಿಂದೆ ವರ್ಷಕ್ಕೆ 80ರಿಂದ 100 ದಿನ ಮಳೆಯಾಗುತ್ತಿತ್ತು. ಈಗ 40ರಿಂದ 80 ದಿನಗಳಿಗೆ ಇಳಿದಿದೆ. ಒಂದು ಅಥವಾ ಎರಡು ದಿನಗಳಲ್ಲೇ ಹೆಚ್ಚು ಮಳೆ ಸುರಿಯುತ್ತಿದೆ. ಅದನ್ನು ನಿರ್ವಹಿಸಲು ಸಾಧ್ಯವಾಗುವಷ್ಟು ಕೆರೆ, ಕಟ್ಟೆ, ಜಲಾಶಯ ಇಲ್ಲದ ಕಾರಣ ನೆರೆ ಎಂದು ಭಾಸವಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕಾವೇರಿ ಕೂಗು ಅಭಿಯಾನದ ಭಾಗವಾಗಿ ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ಕೊಳ್ಳದ ಪ್ರದೇಶದಲ್ಲಿ ನವೆಂಬರ್ ವೇಳೆಗೆ 1.10 ಕೋಟಿ ಸಸಿಯನ್ನು ರೈತರಿಗೆ ವಿತರಿಸುವ ಗುರಿ ಹೊಂದಲಾಗಿದೆ’ ಎಂದು ಈಶ ಫೌಂಡೇಷನ್ನಸದ್ಗುರು ಜಗ್ಗಿ ವಾಸುದೇವ್ ತಿಳಿಸಿದರು.</p>.<p>ವೆಬಿನಾರ್ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕರ್ನಾಟಕದಲ್ಲಿ 50 ಲಕ್ಷ ಮತ್ತು ತಮಿಳುನಾಡಿನಲ್ಲಿ 11 ಲಕ್ಷ ಸಸಿಗಳನ್ನು ಈಗಾಗಲೇ ವಿತರಿಸಲಾಗಿದೆ. ಕರ್ನಾಟಕದಲ್ಲೇ ಈ ವರ್ಷ 72 ಲಕ್ಷ ಸಸಿಗಳನ್ನು ವಿತರಿಸುವ ಗುರಿ ಇದೆ’ ಎಂದು ಹೇಳಿದರು.</p>.<p>‘2 ಕೋಟಿಗೂ ಹೆಚ್ಚು ಸಸಿ ವಿತರಣೆ ಮಾಡುವ ಗುರಿ ಇತ್ತು. ಆದರೆ, ಲಾಕ್ಡೌನ್ ಕಾರಣದಿಂದ ಬೇಡಿಕೆ ಕಡಿಮೆಯಾಗಲಿದೆ ಎಂದು ಭಾವಿಸಿಕೊಂಡೆವು. ಆದರೆ, ಬೇಡಿಕೆ ಕಡಿಮೆಯಾಗಿಲ್ಲ. ರೈತರು ಸಲ್ಲಿಸಿರುವ ಬೇಡಿಕೆಗೆ ತಕ್ಕಂತೆ ಸಸಿ ವಿತರಣೆ ಮಾಡಲು ಈ ವರ್ಷ ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ರೈತರ ಬೇಡಿಕೆ ಪೂರೈಸಲಾಗುವುದು’ ಎಂದರು.</p>.<p>‘ಮರ ವ್ಯವಸಾಯ ಪದ್ಧತಿ ಅನುಸರಿಸುವವರಿಗೆ ಮೂರು ವರ್ಷದ ತನಕ ಆದಾಯ ಇರುವುದಿಲ್ಲ. ನಾಲ್ಕನೇ ವರ್ಷದಿಂದ ಆದಾಯ ಶುರುವಾಗುತ್ತದೆ. ಮರ ಕಟಾವು ಮಾಡಲು ಅನುಮತಿ ಪಡೆಯಲು ರೈತರು ವಿವಿಧ ಇಲಾಖೆಗಳಿಗೆ ಸುತ್ತಬೇಕಿದೆ. ಈ ಪ್ರಕ್ರಿಯೆ ಸುಲಭಗೊಳಿಸಲು ಕೇಂದ್ರ ಸರ್ಕಾರ ಆನ್ಲೈನ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದೆ. ಇದು ಜಾರಿಯಾದರೆ ಮರ ವ್ಯವಸಾಯ ಪದ್ಧತಿ ಇನ್ನಷ್ಟು ಹೆಚ್ಚಳವಾಗಲಿದೆ’ ಎಂದು ಹೇಳಿದರು.</p>.<p>‘ಕಾವೇರಿ ಕೂಗು ಯೋಜನೆಯು ಕಾವೇರಿ ಜಲಾನಯನ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶ ಕೂಡ ಇದರಲ್ಲಿ ಸೇರಿದೆ. ಇದಕ್ಕೆ ಧರ್ಮಸ್ಥಳ, ಸುತ್ತೂರು ಮಠ, ಅರಣ್ಯ ಇಲಾಖೆಯ ಪ್ರೋತ್ಸಾಹ ಸಾಕಷ್ಟು ದೊರೆತಿದೆ’ ಎಂದರು.</p>.<p>‘ಕೋವಿಡ್ ಕಾರಣದಿಂದ ನಗರಗಳಿಂದ ಹಳ್ಳಿಗಳತ್ತ ಯುವಕರು ಮರು ವಲಸೆ ಆರಂಭಿಸಿದ್ದಾರೆ. ಕೃಷಿ ಜತೆಗೆ ಮರ ವ್ಯವಸಾಯದಲ್ಲಿ ತೊಡಗಿಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಅತಿಯಾದ ಮಳೆಯಿಂದ ನೆರೆ ಹಾವಳಿ ಸಂಭವಿಸುತ್ತಿಲ್ಲ. ಈ ಹಿಂದೆ ವರ್ಷಕ್ಕೆ 80ರಿಂದ 100 ದಿನ ಮಳೆಯಾಗುತ್ತಿತ್ತು. ಈಗ 40ರಿಂದ 80 ದಿನಗಳಿಗೆ ಇಳಿದಿದೆ. ಒಂದು ಅಥವಾ ಎರಡು ದಿನಗಳಲ್ಲೇ ಹೆಚ್ಚು ಮಳೆ ಸುರಿಯುತ್ತಿದೆ. ಅದನ್ನು ನಿರ್ವಹಿಸಲು ಸಾಧ್ಯವಾಗುವಷ್ಟು ಕೆರೆ, ಕಟ್ಟೆ, ಜಲಾಶಯ ಇಲ್ಲದ ಕಾರಣ ನೆರೆ ಎಂದು ಭಾಸವಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>