<p><strong>ಬೆಂಗಳೂರು:</strong> ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಶುಕ್ರವಾರ (ಜ.22) ನಡೆಯಲಿದೆ.</p>.<p>ಈ ಸಂಬಂಧ ಪರಿಷತ್ತು ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ. ಮುಂಬರುವ ಫೆ.26ರಿಂದ 28ರವರೆಗೆ ಸಮ್ಮೇಳನ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳು ನಡೆದಿವೆ.</p>.<p>ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ದೊಡ್ಡರಂಗೇಗೌಡ, ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ ಹಾಗೂ ಕೆ.ಎಸ್. ಭಗವಾನ್ ಅವರ ಹೆಸರು ಪರಿಷತ್ತಿನ ಮುಂದಿದೆ. ಈ ನಾಲ್ವರ ಹೆಸರನ್ನು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಸಾಹಿತ್ಯ ವಲಯದ ಪ್ರಮುಖರು ಶಿಫಾರಸು ಮಾಡಿದ್ದಾರೆ.</p>.<p>‘ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶಿಫಾರಸು ಬಂದಿರುವ ನಾಲ್ಕೂ ಹೆಸರುಗಳನ್ನು ಶುಕ್ರವಾರ ನಡೆಯಲಿರುವ ಸಭೆಯ ಮುಂದಿಟ್ಟು, ಚರ್ಚಿಸಲಾಗುತ್ತದೆ. ಈ ಹೆಸರುಗಳೇ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಅಂತಿಮವಲ್ಲ. ಆ ವೇಳೆ ಬೇರೆಯವರ ಹೆಸರು ಕೂಡ ಪ್ರಸ್ತಾಪವಾಗಬಹುದು. ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗುತ್ತದೆ. ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮಾನತೆಯನ್ನೂ ಪರಿಗಣಿಸಲಾಗುತ್ತದೆ’ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಶುಕ್ರವಾರ (ಜ.22) ನಡೆಯಲಿದೆ.</p>.<p>ಈ ಸಂಬಂಧ ಪರಿಷತ್ತು ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ. ಮುಂಬರುವ ಫೆ.26ರಿಂದ 28ರವರೆಗೆ ಸಮ್ಮೇಳನ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳು ನಡೆದಿವೆ.</p>.<p>ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ದೊಡ್ಡರಂಗೇಗೌಡ, ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ ಹಾಗೂ ಕೆ.ಎಸ್. ಭಗವಾನ್ ಅವರ ಹೆಸರು ಪರಿಷತ್ತಿನ ಮುಂದಿದೆ. ಈ ನಾಲ್ವರ ಹೆಸರನ್ನು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಸಾಹಿತ್ಯ ವಲಯದ ಪ್ರಮುಖರು ಶಿಫಾರಸು ಮಾಡಿದ್ದಾರೆ.</p>.<p>‘ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶಿಫಾರಸು ಬಂದಿರುವ ನಾಲ್ಕೂ ಹೆಸರುಗಳನ್ನು ಶುಕ್ರವಾರ ನಡೆಯಲಿರುವ ಸಭೆಯ ಮುಂದಿಟ್ಟು, ಚರ್ಚಿಸಲಾಗುತ್ತದೆ. ಈ ಹೆಸರುಗಳೇ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಅಂತಿಮವಲ್ಲ. ಆ ವೇಳೆ ಬೇರೆಯವರ ಹೆಸರು ಕೂಡ ಪ್ರಸ್ತಾಪವಾಗಬಹುದು. ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗುತ್ತದೆ. ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮಾನತೆಯನ್ನೂ ಪರಿಗಣಿಸಲಾಗುತ್ತದೆ’ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>