ಹಾವೇರಿ ನಗರದಲ್ಲಿ ನವೆಂಬರ್ 11, 12,13ರಂದು ಸಮ್ಮೇಳನದ ದಿನಾಂಕ ನಿಗದಿಯಾಗಿತ್ತು. ಆದರೆ, ಈ ದಿನಾಂಕಕ್ಕೆ ಸಮ್ಮೇಳನ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.ಸಾಹಿತ್ಯ ಸಮ್ಮೇಳನದ ಬಗ್ಗೆ ಜಿಜ್ಞಾಸೆ ಮೂಡುತ್ತಿದೆ. ಮೊನ್ನೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು "ಪೂರ್ವ ಸಿದ್ಧತೆ ಆಗಿಲ್ಲ, ಸಮ್ಮೇಳನ ಮುಂದಕ್ಕೆ ಹೋಗಬಹುದು" ಎಂದು ಹೇಳಿದ್ದಾರೆ.