ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹ್ಯಾದ್ರಿ ವಿಜ್ಞಾನ ಕಾಲೇಜು: ಸಹಪಾಠಿಗಳಿಂದಲೇ ವಿದ್ಯಾರ್ಥಿಗೆ ಚೂರಿ ಇರಿತ

Last Updated 6 ಸೆಪ್ಟೆಂಬರ್ 2018, 13:02 IST
ಅಕ್ಷರ ಗಾತ್ರ

ಶಿವಮೊಗ್ಗ: ಯುವತಿಯರನ್ನು ಚುಡಾಯಿಸಬಾರದು ಎಂಬಬುದ್ಧಿಮಾತಿಗೆ ಕುಪಿತಗೊಂಡ ಇಲ್ಲಿನ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಇಬ್ಬರುವಿದ್ಯಾರ್ಥಿಗಳು ಗುರುವಾರ ಸಹಪಾಠಿಗೇ ಚೂರಿಯಿಂದ ಇರಿದಿದ್ದಾರೆ.

ಅಂತಿಮ ವರ್ಷದ ಬಿ.ಎಸ್ಸಿ ವಿದ್ಯಾರ್ಥಿ ಅವಿನಾಶ್ (21) ಇರಿತಕ್ಕೆ ಒಳಗಾದವರು. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿಗಳಾದ ಗೋಕುಲ್ ಮತ್ತು ಅಮಿತ್‌ ಸಿಂಗ್‌ ಆರೋಪಿಗಳು.

ಗೋಕುಲ್ ನಿತ್ಯವೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ. ಅವಿನಾಶ್‌ಹಾಗೂ ಅವರ ಸ್ನೇಹಿತರು ಆತನಿಗೆ ಬುದ್ಧಿ ಮಾತು ಹೇಳಿದ್ದಾರೆ. ಮತ್ತೆ ಅದೇ ಚಾಳಿ ಮುಂದುವರಿಸಿದಾಗ ಪ್ರಾಧ್ಯಾಪಕರ ಗಮನಕ್ಕೆ ತಂದಿದ್ದಾರೆ. ಮೂರು ದಿನಗಳ ಹಿಂದೆ ಪ್ರಾಧ್ಯಾಕರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇದರಿಂದ ಕುಪಿತಗೊಂಡಿದ್ದ ಗೋಕುಲ್ ತನ್ನ ಸ್ನೇಹಿತ ಅಮಿತ್‌ಸಿಂಗ್ ಜತೆ ಸೇರಿ ಗುರುವಾರ ಕಾಲೇಜಿಗೆ ಬಂದ ಅವಿನಾಶ್‌ ಹೊಟ್ಟೆಯ ಎಡಭಾಗಕ್ಕೆಚೂರಿಯಿಂದ ಇರಿದು, ಪರಾರಿಯಾಗಿದ್ದಾರೆ.ಸ್ಥಳದಲ್ಲಿದ್ದ ಸ್ನೇಹಿತರು ತಕ್ಷಣವೇ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ವಲ್ಪ ರಕ್ತಸ್ರಾವವಾಗಿದೆ. ಎಲ್ಲ ರೀತಿಯ ತಪಾಸಣೆ ನಡೆಸಲಾಗಿದೆ. ಯಾವುದೇ ಅಪಾಯ ಇಲ್ಲ. ವಿದ್ಯಾರ್ಥಿ ಚೇತರಿಸಿಕೊಳ್ಳುತ್ತಿದ್ದಾನೆ’ ಎಂದು ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ರಘುನಂದನ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT