ಸಕಲೇಶಪುರ: ಸಕಲೇಶಪುರ– ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ಉರುಳಿದ್ದ ಬಂಡೆಯನ್ನು ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತೆರವುಗೊಳಿಸಲಾಗಿದ್ದು, ರೈಲು ಸಂಚಾರ ಸುಗಮವಾಗಿದೆ.
ರೈಲ್ವೆ ಸಿಬ್ಬಂದಿ 8 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ರೈಲು ಹಳಿ ಮೇಲೆ ಬಿದ್ದಿದ್ದ ಬಂಡೆಯನ್ನು ತೆರವುಗೊಳಿಸಿದರು. ನಂತರ ರಾತ್ರಿ ಕಾರವಾರದಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ಕಾರವಾರ ರೈಲು ಸಂಚರಿಸಿತು.