<p><strong>ಬೆಂಗಳೂರು:</strong>‘ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಏಪ್ರಿಲ್ ತಿಂಗಳ ವೇತನ ಬಟವಾಡೆಗೆ ಅಗತ್ಯವಾದ ₹ 326 ಕೋಟಿ ಹಣವನ್ನು ಸರ್ಕಾರದಿಂದ ನೇರವಾಗಿ ಪಡೆದು 3-4 ದಿನಗಳಲ್ಲಿ ನೌಕರರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು’ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ನಾನು ಮುಖ್ಯಮಂತ್ರಿ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಸಾರಿಗೆ ಇಲಾಖೆ ಸಿಬ್ಬಂದಿ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ಎಂದರು.</p>.<p>ನಾಲ್ಕು ದಿನಗಳಿಂದ 3,500 ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲಾಗಿದೆ. ಸಾರಿಗೆ ಸಿಬ್ಬಂದಿ ಭಯಪಡದೇ ಕಾರ್ಯನಿ ರ್ವಹಿಸುತ್ತಿದ್ದಾರೆಎಂದರು.</p>.<p>ಗುರುವಾರ ಕೊನೆಯದಾಗಿ ಉಚಿತವಾಗಿ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸುವ ಕೆಲಸ ಮಾಡುತ್ತೇವೆ. ಕಾರ್ಮಿಕರಿಗೆ ಹಲವು ಸಂಘ ಸಂಸ್ಥೆಗಳು ಬ್ರೆಡ್ ಹಾಗೂ ಆಹಾರಗಳನ್ನು ಸಾಕಷ್ಟು ಕೊಟ್ಟಿದ್ದಾರೆಎಂದೂ ಸವದಿ ಹೇಳಿದರು.</p>.<p>ಮಾಧ್ಯಮ ಮಿತ್ರರು ಕೂಡ ನಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಸರ್ಕಾರದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆಎಂದರು.</p>.<p><strong>ಕೊರೊನಾ ವಾರಿಯರ್ಸ್ಗೆ ಪುಷ್ಪವೃಷ್ಟಿ</strong></p>.<p>ಸಾರಿಗೆ ಸಚಿವ ಲಕ್ಷಣ ಸವದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ ಕೆಎಸ್ಆರ್ಟಿಸಿ ಮತ್ತು ಇತರ ಸಾರಿಗೆ ನಿಗಮಗಳ ಚಾಲಕರು, ನಿರ್ವಾಹಕರು,ವೈದ್ಯರು, ಪೋಲಿಸ್ ಸಿಬ್ಬಂದಿ,ಬಿಬಿಎಂಪಿಯ ಪೌರ ಕಾರ್ಮಿಕರು, ಸಿವಿಲ್ ಡಿಪೆನ್ಸ್ ಸಿಬ್ಬಂದಿಯ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವಿಸಿದರು.</p>.<p>ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಏಪ್ರಿಲ್ ತಿಂಗಳ ವೇತನ ಬಟವಾಡೆಗೆ ಅಗತ್ಯವಾದ ₹ 326 ಕೋಟಿ ಹಣವನ್ನು ಸರ್ಕಾರದಿಂದ ನೇರವಾಗಿ ಪಡೆದು 3-4 ದಿನಗಳಲ್ಲಿ ನೌಕರರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು’ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ನಾನು ಮುಖ್ಯಮಂತ್ರಿ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಸಾರಿಗೆ ಇಲಾಖೆ ಸಿಬ್ಬಂದಿ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ಎಂದರು.</p>.<p>ನಾಲ್ಕು ದಿನಗಳಿಂದ 3,500 ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲಾಗಿದೆ. ಸಾರಿಗೆ ಸಿಬ್ಬಂದಿ ಭಯಪಡದೇ ಕಾರ್ಯನಿ ರ್ವಹಿಸುತ್ತಿದ್ದಾರೆಎಂದರು.</p>.<p>ಗುರುವಾರ ಕೊನೆಯದಾಗಿ ಉಚಿತವಾಗಿ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸುವ ಕೆಲಸ ಮಾಡುತ್ತೇವೆ. ಕಾರ್ಮಿಕರಿಗೆ ಹಲವು ಸಂಘ ಸಂಸ್ಥೆಗಳು ಬ್ರೆಡ್ ಹಾಗೂ ಆಹಾರಗಳನ್ನು ಸಾಕಷ್ಟು ಕೊಟ್ಟಿದ್ದಾರೆಎಂದೂ ಸವದಿ ಹೇಳಿದರು.</p>.<p>ಮಾಧ್ಯಮ ಮಿತ್ರರು ಕೂಡ ನಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಸರ್ಕಾರದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆಎಂದರು.</p>.<p><strong>ಕೊರೊನಾ ವಾರಿಯರ್ಸ್ಗೆ ಪುಷ್ಪವೃಷ್ಟಿ</strong></p>.<p>ಸಾರಿಗೆ ಸಚಿವ ಲಕ್ಷಣ ಸವದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ ಕೆಎಸ್ಆರ್ಟಿಸಿ ಮತ್ತು ಇತರ ಸಾರಿಗೆ ನಿಗಮಗಳ ಚಾಲಕರು, ನಿರ್ವಾಹಕರು,ವೈದ್ಯರು, ಪೋಲಿಸ್ ಸಿಬ್ಬಂದಿ,ಬಿಬಿಎಂಪಿಯ ಪೌರ ಕಾರ್ಮಿಕರು, ಸಿವಿಲ್ ಡಿಪೆನ್ಸ್ ಸಿಬ್ಬಂದಿಯ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವಿಸಿದರು.</p>.<p>ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>