<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ಎಲ್ಲ ನೌಕರರು, ಅಧಿಕಾರಿಗಳು ವಿವಿಧ ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ‘ಸಂಬಳ ಪ್ಯಾಕೇಜ್’ ಖಾತೆ ತೆರೆಯುವುದನ್ನು ಕಡ್ಡಾಯ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.</p>.<p>ಸಂಬಳ ಪ್ಯಾಕೇಜ್ನ ಅಡಿಯಲ್ಲಿ ಖಾತೆ ಹೊಂದಿದ್ದರೆ ಅಂತಹ ನೌಕರರಿಗೆ ಬ್ಯಾಂಕ್ಗಳು ಕಡಿಮೆ ಬಡ್ಡಿ ದರದಲ್ಲಿ ವಸತಿ ಸಾಲ, ಉಚಿತ ರುಪೇ ಡೆಬಿಟ್–ಕ್ರೆಡಿಟ್ ಕಾರ್ಡ್, ಉಚಿತ ಡಿಮ್ಯಾಂಡ್ ಡ್ರಾಫ್ಟ್, ರಿಯಾಯತಿ ದರದಲ್ಲಿ ಲಾಕರ್ ಸೇವೆ ಒದಗಿಸುತ್ತಿವೆ. ಈ ಅನುಕೂಲಗಳನ್ನು ಸರ್ಕಾರಿ ನೌಕರರು ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದರೂ ಅನೇಕರು ಖಾತೆ ಆರಂಭಿಸದಿರುವುದು ಗಮನಕ್ಕೆ ಬಂದಿದೆ ಎಂದು ಇಲಾಖೆ ತಿಳಿಸಿದೆ.</p>.<p>ಜತೆಗೆ ಅತ್ಯಂತ ಕಡಿಮೆ ಮೊತ್ತಕ್ಕೆ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (ಟರ್ಮ್ ಇನ್ಸುರೆನ್ಸ್), ₹456ಕ್ಕೆ ₹2 ಲಕ್ಷ ಮೊತ್ತದ ಅಪಘಾತ ವಿಮೆ ಒದಗಿಸುತ್ತಿದೆ. ಇನ್ನಷ್ಟು ಅನುಕೂಲಗಳು ಈ ಖಾತೆಗಳಿಗೆ ಲಭ್ಯವಿದೆ. ಹೀಗಾಗಿ ಎಲ್ಲ ನೌಕರರು ಮೂರು ತಿಂಗಳ ಒಳಗೆ ಸಂಬಳ ಪ್ಯಾಕೇಜ್ ಖಾತೆ ತೆರೆಯಬೇಕು ಎಂದು ಸೂಚಿಸಿದೆ.</p>.<p>‘ಎಲ್ಲ ನೌಕರರು ಈ ಸ್ವರೂಪದ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಖಾತೆ ಆಯ್ಕೆ ಮಾಡಿಕೊಳ್ಳುವಂತೆ ಕ್ರಮವಹಿಸುವುದು ಆಯಾ ಇಲಾಖೆಯ ಮುಖ್ಯಸ್ಥರ ಹೊಣೆಗಾರಿಕೆ ಆಗಿರುತ್ತದೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಮತ್ತು ನೌಕರರನ್ನು ಪ್ರೋತ್ಸಾಹಿಸಬೇಕು’ ಎಂದು ಆರ್ಥಿಕ ಇಲಾಖೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ಎಲ್ಲ ನೌಕರರು, ಅಧಿಕಾರಿಗಳು ವಿವಿಧ ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ‘ಸಂಬಳ ಪ್ಯಾಕೇಜ್’ ಖಾತೆ ತೆರೆಯುವುದನ್ನು ಕಡ್ಡಾಯ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.</p>.<p>ಸಂಬಳ ಪ್ಯಾಕೇಜ್ನ ಅಡಿಯಲ್ಲಿ ಖಾತೆ ಹೊಂದಿದ್ದರೆ ಅಂತಹ ನೌಕರರಿಗೆ ಬ್ಯಾಂಕ್ಗಳು ಕಡಿಮೆ ಬಡ್ಡಿ ದರದಲ್ಲಿ ವಸತಿ ಸಾಲ, ಉಚಿತ ರುಪೇ ಡೆಬಿಟ್–ಕ್ರೆಡಿಟ್ ಕಾರ್ಡ್, ಉಚಿತ ಡಿಮ್ಯಾಂಡ್ ಡ್ರಾಫ್ಟ್, ರಿಯಾಯತಿ ದರದಲ್ಲಿ ಲಾಕರ್ ಸೇವೆ ಒದಗಿಸುತ್ತಿವೆ. ಈ ಅನುಕೂಲಗಳನ್ನು ಸರ್ಕಾರಿ ನೌಕರರು ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದರೂ ಅನೇಕರು ಖಾತೆ ಆರಂಭಿಸದಿರುವುದು ಗಮನಕ್ಕೆ ಬಂದಿದೆ ಎಂದು ಇಲಾಖೆ ತಿಳಿಸಿದೆ.</p>.<p>ಜತೆಗೆ ಅತ್ಯಂತ ಕಡಿಮೆ ಮೊತ್ತಕ್ಕೆ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (ಟರ್ಮ್ ಇನ್ಸುರೆನ್ಸ್), ₹456ಕ್ಕೆ ₹2 ಲಕ್ಷ ಮೊತ್ತದ ಅಪಘಾತ ವಿಮೆ ಒದಗಿಸುತ್ತಿದೆ. ಇನ್ನಷ್ಟು ಅನುಕೂಲಗಳು ಈ ಖಾತೆಗಳಿಗೆ ಲಭ್ಯವಿದೆ. ಹೀಗಾಗಿ ಎಲ್ಲ ನೌಕರರು ಮೂರು ತಿಂಗಳ ಒಳಗೆ ಸಂಬಳ ಪ್ಯಾಕೇಜ್ ಖಾತೆ ತೆರೆಯಬೇಕು ಎಂದು ಸೂಚಿಸಿದೆ.</p>.<p>‘ಎಲ್ಲ ನೌಕರರು ಈ ಸ್ವರೂಪದ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಖಾತೆ ಆಯ್ಕೆ ಮಾಡಿಕೊಳ್ಳುವಂತೆ ಕ್ರಮವಹಿಸುವುದು ಆಯಾ ಇಲಾಖೆಯ ಮುಖ್ಯಸ್ಥರ ಹೊಣೆಗಾರಿಕೆ ಆಗಿರುತ್ತದೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಮತ್ತು ನೌಕರರನ್ನು ಪ್ರೋತ್ಸಾಹಿಸಬೇಕು’ ಎಂದು ಆರ್ಥಿಕ ಇಲಾಖೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>