ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 4ರಿಂದ 'ಸಂವೇದ ಪಾಠ' ಮರು ಪ್ರಸಾರ: ಸಚಿವ ಸುರೇಶ್ ಕುಮಾರ್

Last Updated 30 ಡಿಸೆಂಬರ್ 2020, 13:07 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಸೋಂಕು ಕಾರಣ ಶಾಲೆಗಳಲ್ಲಿ ತರಗತಿಗಳು ಆರಂಭ ಆಗದೇ ಇರುವುದರಿಂದ ದೂರದರ್ಶನ ಚಂದನಾ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಯ ಸಂವೇದ ಪಾಠಗಳನ್ನು ಜ. 4ರಿಂದ ಮರು ಪ್ರಸಾರ ಮಾಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಈ ತರಗತಿಗಳಿಗೆ ಚಂದನಾ ವಾಹಿನಿಯಲ್ಲಿ ಕಳೆದ ಜುಲೈ 20ರಿಂದ ಪ್ರಸಾರವಾದ ಪಾಠಗಳು 2021ರ ಜ. 1ಕ್ಕೆ ಪೂರ್ಣಗೊಳ್ಳಲಿವೆ. ಜ. 1ರಿಂದ 10ನೇ ತರಗತಿಗೆ ಶಾಲಾ ತರಗತಿಗಳು ಮತ್ತು 6ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ತರಗತಿಗಳು ಆರಂಭವಾಗುತ್ತಿವೆ. ಇದರ ಜೊತೆಗೆ, ಮಕ್ಕಳ ಕಲಿಕೆ ಹಿತದೃಷ್ಟಿಯಿಂದ ಚಂದನಾ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಗಳಿಗೆ ಪ್ರಸಾರವಾಗುತ್ತಿದ್ದ ಪಾಠಗಳನ್ನು ಜ. 4ರಿಂದ ಮರು ಪ್ರಸಾರ ಮಾಡಲಾಗುವುದು’ ಎಂದೂ ಅವರು ಹೇಳಿದ್ದಾರೆ.

‘ಚಂದನಾ ವಾಹಿನಿಯಲ್ಲಿ ಪಾಠಗಳು ಪ್ರಸಾರವಾಗುತ್ತಿರುವುದರಿಂದ ಉತ್ತೇಜಿತವಾಗಿರುವ ಜಿಯೋ ವಾಹಿನಿಯವರು 5ರಿಂದ 10ನೇ ತರಗತಿಯ ವಿಡಿಯೊ ಪಾಠಗಳನ್ನು ಉಚಿತವಾಗಿ ಪ್ರಸಾರ ಮಾಡಲು ಮುಂದೆ ಬಂದಿದ್ದು ಈ ಕುರಿತು ಕ್ರಮ ವಹಿಸಲಾಗುತ್ತಿದೆ. ಸದ್ಯದಲ್ಲೆ ಜಿಯೊ ವಾಹಿನಿ ಮೂಲಕ ಪ್ರಸಾರವಾಗುವ ತರಗತಿಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದು ಸಚಿವರು ತಿಳಿಸಿದ್ದಾರೆ.

‘1ರಿಂದ 4ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಹಿತದೃಷ್ಟಿಯಿಂದ ರೇಡಿಯೊ ಪಾಠಗಳನ್ನು ಸಿದ್ಧಪಡಿಸಲಾಗುತ್ತಿದೆ. ಜನವರಿ ಎರಡನೇ ವಾರದಿಂದ ಆಕಾಶವಾಣಿಯ 13 ಕೇಂದ್ರಗಳ ಮೂಲಕ ಈ ರೇಡಿಯೊ ಪಾಠಗಳನ್ನು ಪ್ರಸಾರ ಮಾಡಲಾಗುವುದು’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT