<p><strong>ಬೆಳಗಾವಿ: </strong>ಬೆಳಗಾವಿ-ಕಿತ್ತೂರು–ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಈ ಭಾಗದ ಜನರ ಹಲವು ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ₹ 988.30 ಕೋಟಿ ಮೊತ್ತದಲ್ಲಿ ಹೊಸದಾಗಿ ಮಾರ್ಗ ನಿರ್ಮಿಸುವ ಯೋಜನೆಗೆ ಸೋಮವಾರ ಮಂಡನೆಯಾದ ಕೇಂದ್ರ ಬಜೆಟ್ನಲ್ಲಿ ಮಂಜೂರಾತಿ ನೀಡಲಾಗಿದೆ.</p>.<p><strong>73 ಕಿ.ಮೀ. ಉದ್ದದ ಮಾರ್ಗ ಇದಾಗಿದೆ.</strong></p>.<p>ತಿಂಗಳ ಹಿಂದಷ್ಟೇ ನೈರುತ್ಯ ರೈಲ್ವೆಯಿಂದ ಯೋಜನಾ ವರದಿ ತಯಾರಿಸಿ ಸಲ್ಲಿಸಿತ್ತು. ಅದಕ್ಕೆ ಮಂಜೂರಾತಿ ಕೊಡಿಸುವಲ್ಲಿ ಇಲ್ಲಿನ ಸಂಸದರೂ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಯಶಸ್ವಿಯಾಗಿದ್ದಾರೆ. ತವರಿಗೆ ದೊಡ್ಡ ಕೊಡುಗೆಯನ್ನೇ ಕೊಡಿಸಿದ್ದಾರೆ. ಇದು, ಇಲ್ಲಿನ ಜನರ ಸಂತಸಕ್ಕೆ ಕಾರಣವಾಗಿದೆ.</p>.<p>ಮಾರ್ಗ ನಿರ್ಮಾಣವಾದಲ್ಲಿ, ಈ ರೈಲು ಧಾರವಾಡದಿಂದ ಕ್ಯಾರಕೊಪ್ಪ, ಕಿತ್ತೂರು, ಹಿರೆಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಕೆ.ಕೆ. ಕೊಪ್ಪ, ಯಳ್ಳೂರು ಮಾರ್ಗವಾಗಿ ಬೆಳಗಾವಿ ತಲುಪಲಿದೆ. 11 ನಿಲ್ದಾಣಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಮಾರ್ಗದಲ್ಲಿ 15 ಮೇಲ್ಸೇತುವೆ ಸೇರಿದಂತೆ 140 ಸೇತುವೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಬೆಳಗಾವಿ-ಕಿತ್ತೂರು–ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಈ ಭಾಗದ ಜನರ ಹಲವು ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ₹ 988.30 ಕೋಟಿ ಮೊತ್ತದಲ್ಲಿ ಹೊಸದಾಗಿ ಮಾರ್ಗ ನಿರ್ಮಿಸುವ ಯೋಜನೆಗೆ ಸೋಮವಾರ ಮಂಡನೆಯಾದ ಕೇಂದ್ರ ಬಜೆಟ್ನಲ್ಲಿ ಮಂಜೂರಾತಿ ನೀಡಲಾಗಿದೆ.</p>.<p><strong>73 ಕಿ.ಮೀ. ಉದ್ದದ ಮಾರ್ಗ ಇದಾಗಿದೆ.</strong></p>.<p>ತಿಂಗಳ ಹಿಂದಷ್ಟೇ ನೈರುತ್ಯ ರೈಲ್ವೆಯಿಂದ ಯೋಜನಾ ವರದಿ ತಯಾರಿಸಿ ಸಲ್ಲಿಸಿತ್ತು. ಅದಕ್ಕೆ ಮಂಜೂರಾತಿ ಕೊಡಿಸುವಲ್ಲಿ ಇಲ್ಲಿನ ಸಂಸದರೂ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಯಶಸ್ವಿಯಾಗಿದ್ದಾರೆ. ತವರಿಗೆ ದೊಡ್ಡ ಕೊಡುಗೆಯನ್ನೇ ಕೊಡಿಸಿದ್ದಾರೆ. ಇದು, ಇಲ್ಲಿನ ಜನರ ಸಂತಸಕ್ಕೆ ಕಾರಣವಾಗಿದೆ.</p>.<p>ಮಾರ್ಗ ನಿರ್ಮಾಣವಾದಲ್ಲಿ, ಈ ರೈಲು ಧಾರವಾಡದಿಂದ ಕ್ಯಾರಕೊಪ್ಪ, ಕಿತ್ತೂರು, ಹಿರೆಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಕೆ.ಕೆ. ಕೊಪ್ಪ, ಯಳ್ಳೂರು ಮಾರ್ಗವಾಗಿ ಬೆಳಗಾವಿ ತಲುಪಲಿದೆ. 11 ನಿಲ್ದಾಣಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಮಾರ್ಗದಲ್ಲಿ 15 ಮೇಲ್ಸೇತುವೆ ಸೇರಿದಂತೆ 140 ಸೇತುವೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>