<p><strong>ಬೆಂಗಳೂರು</strong>: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ ನಡೆಸಿತು.</p>.<p>‘ಮರಳು ತೆಗೆಯಲು ಅನುಮತಿ ನೀಡುವುದರಿಂದ ಪರಿಸರದ ಮೇಲೆ ಆಗುವ ಹಾನಿ ಮತ್ತು ಗ್ರಾಮಸ್ಥರ ಸಾಂಪ್ರದಾಯಿಕ ಉದ್ಯೋಗದ ಮೇಲೆ ಬೀರುವ ಪರಿಣಾಮದ ಬಗ್ಗೆ ತಜ್ಞ ಸಂಸ್ಥೆಯಿಂದ ಅಧ್ಯಯನ ನಡೆಸಲು ಸರ್ಕಾರ ತಯಾರಿದೆಯೇ ಎಂಬುದು ಪ್ರಶ್ನೆ. ಅಧ್ಯಯನ ನಡೆಸಲು ಸಿದ್ಧವಿರುವ ಬಗ್ಗೆ ಮತ್ತು ಆ ಅಧ್ಯಯನ ಪೂರ್ಣಗೊಳ್ಳುವ ತನಕ ಪರವಾನಗಿ ನೀಡದಿರುವ ಬಗ್ಗೆ ಸರ್ಕಾರ ಹೇಳಿಕೆ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಮಾ.12ಕ್ಕೆ ನಿಗದಿ ಮಾಡಿತು.</p>.<p>ಕರ್ನಾಟಕ ಸಣ್ಣ ಖನಿಜ ನಿಯಮಗಳಿಗೆ(1994) ವಿರುದ್ಧವಾಗಿ ಯಾವುದೇ ತಾತ್ಕಾಲಿಕ ಪರವಾನಗಿ ನೀಡಬಾರದು ಎಂದು ಈ ಹಿಂದಿನ ವಿಚಾರಣೆ ವೇಳೆ ಪೀಠ ತಿಳಿಸಿತ್ತು. 2011ರ ನವೆಂಬರ್ 8ರ ಕಚೇರಿ ಜ್ಞಾಪನ ಪತ್ರದ ಪ್ರಕಾರ, ಕರಾವಳಿ ನಿಯಂತ್ರಣಾ ವಲಯದಲ್ಲಿ ಮರಳು ತೆಗೆಯಲು ಅನುಮತಿ ನೀಡಬಹುದು ಎಂದು ಫೆಬ್ರುವರಿ 25ರಂದು ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ ನಡೆಸಿತು.</p>.<p>‘ಮರಳು ತೆಗೆಯಲು ಅನುಮತಿ ನೀಡುವುದರಿಂದ ಪರಿಸರದ ಮೇಲೆ ಆಗುವ ಹಾನಿ ಮತ್ತು ಗ್ರಾಮಸ್ಥರ ಸಾಂಪ್ರದಾಯಿಕ ಉದ್ಯೋಗದ ಮೇಲೆ ಬೀರುವ ಪರಿಣಾಮದ ಬಗ್ಗೆ ತಜ್ಞ ಸಂಸ್ಥೆಯಿಂದ ಅಧ್ಯಯನ ನಡೆಸಲು ಸರ್ಕಾರ ತಯಾರಿದೆಯೇ ಎಂಬುದು ಪ್ರಶ್ನೆ. ಅಧ್ಯಯನ ನಡೆಸಲು ಸಿದ್ಧವಿರುವ ಬಗ್ಗೆ ಮತ್ತು ಆ ಅಧ್ಯಯನ ಪೂರ್ಣಗೊಳ್ಳುವ ತನಕ ಪರವಾನಗಿ ನೀಡದಿರುವ ಬಗ್ಗೆ ಸರ್ಕಾರ ಹೇಳಿಕೆ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಮಾ.12ಕ್ಕೆ ನಿಗದಿ ಮಾಡಿತು.</p>.<p>ಕರ್ನಾಟಕ ಸಣ್ಣ ಖನಿಜ ನಿಯಮಗಳಿಗೆ(1994) ವಿರುದ್ಧವಾಗಿ ಯಾವುದೇ ತಾತ್ಕಾಲಿಕ ಪರವಾನಗಿ ನೀಡಬಾರದು ಎಂದು ಈ ಹಿಂದಿನ ವಿಚಾರಣೆ ವೇಳೆ ಪೀಠ ತಿಳಿಸಿತ್ತು. 2011ರ ನವೆಂಬರ್ 8ರ ಕಚೇರಿ ಜ್ಞಾಪನ ಪತ್ರದ ಪ್ರಕಾರ, ಕರಾವಳಿ ನಿಯಂತ್ರಣಾ ವಲಯದಲ್ಲಿ ಮರಳು ತೆಗೆಯಲು ಅನುಮತಿ ನೀಡಬಹುದು ಎಂದು ಫೆಬ್ರುವರಿ 25ರಂದು ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>