ಬೆಂಗಳೂರು: ‘ಕನ್ನಡಕ್ಕಾಗಿ ನಾನು’ ವಿಶೇಷ ಅಭಿಯಾನಕ್ಕೆ ಆಟೋ ಚಾಲಕರ ಸಂಘ, ಗಾರ್ಮೆಂಟ್ಸ್ ಕಾರ್ಮಿಕರು, ಐಟಿ–ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆದರೆ, ಕನ್ನಡ ಚಲನಚಿತ್ರ ನಟ– ನಟಿಯರು ಮತ್ತು ಚಿತ್ರೋದ್ಯಮದ ಮಂದಿ ಈ ಅಭಿಯಾನದಿಂದ ದೂರ ಉಳಿದಿರುವುದು ಚರ್ಚೆಗೆ ಕಾರಣವಾಗಿದೆ.