ಪ್ರತಿಷ್ಠಾನದ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಾಹಿತಿ, ಆಯ್ಕೆ ಸಮಿತಿ ಅಧ್ಯಕ್ಷ ನಾ. ಡಿಸೋಜ, ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ ‘ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿ’, ವಲ್ಲಿ ವಗ್ಗ (ವಲೇರಿಯನ್ ಡಿಸೋಜ) ಅವರಿಗೆ ‘ಸಂದೇಶ ಕೊಂಕಣಿ ಸಾಹಿತ್ಯ ಪ್ರಶಸ್ತಿ’, ‘ಅಪರಂಜಿ’ ಮಾಸಪತ್ರಿಕೆಯ ಸಂಪಾದಕ ಶಿವಕುಮಾರ್ ಅವರಿಗೆ ‘ಸಂದೇಶ ಮಾಧ್ಯಮ ಪ್ರಶಸ್ತಿ’, ಗಾಯಕಿ ಹೆಲೆನ್ ಡಿ ಕ್ರೂಜ್ ಅವರಿಗೆ ‘ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ’, ಮನೋವೈದ್ಯೆ, ನೃತ್ಯ ಸಂಯೋಜಕಿ ಡಾ.ಕೆ.ಎಸ್.ಪವಿತ್ರ ಅವರಿಗೆ ‘ಸಂದೇಶ ಕಲಾ ಪ್ರಶಸ್ತಿ’, ದಾವಣಗೆರೆಯ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ಜಸ್ಟಿನ್ ಡಿಸೋಜ ಅವರಿಗೆ ‘ಸಂದೇಶ ಶಿಕ್ಷಣ ಪ್ರಶಸ್ತಿ’, ದೇಹದಾರ್ಢ್ಯ ಪಟು ವಿನ್ಸೆಂಟ್ ಪ್ರಕಾಶ್ ಕಾರ್ಲೊ ಅವರಿಗೆ ‘ಸಂದೇಶ ವಿಶೇಷ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದರು.