<p><strong>ಬೆಂಗಳೂರು:</strong> ಹೊಸಕೋಟೆ ತಾಲ್ಲೂಕಿನ ಕಟ್ಟಿಗೇಹಳ್ಳಿಯಲ್ಲಿ ತಮ್ಮದೇ ಕೋಟೆ ಕಟ್ಟಿಕೊಂಡು ‘ರಕ್ತಚಂದನ ಮಾಫಿಯಾ’ ನಡೆಸುತ್ತಿದ್ದ ತಂದೆ–ಮಗನನ್ನು 150ಕ್ಕೂ ಹೆಚ್ಚು ಪೊಲೀಸರು ಶಸ್ತ್ರಸಜ್ಜಿತರಾಗಿ ಹೋಗಿ ಬಂಧಿಸಿದ್ದಾರೆ.</p>.<p>ಕೆಲ ದಿನಗಳ ಹಿಂದೆ ವಿಧಾನಸೌಧ, ರಾಜಭವನ, ಹೈಕೋರ್ಟ್ ಸುತ್ತಮುತ್ತಲ ಸೂಕ್ಷ್ಮ ಪ್ರದೇಶಗಳಲ್ಲೇ ರಕ್ತಚಂದನದ ಮರಗಳು ಕಳವಾಗಿದ್ದವು. ಈ ಪ್ರಕರಣ<br />ಗಳ ಬೆನ್ನುಹತ್ತಿದ ಕೇಂದ್ರ ವಿಭಾಗದ ಪೊಲೀಸರ ತಂಡ, ಕಬ್ಬನ್ಪಾರ್ಕ್ನಲ್ಲಿ ಕಾಲಿಗೆ ಗುಂಡು ಹೊಡೆದು ಆರು ಆರೋಪಿಗಳನ್ನು ಬಂಧಿಸಿತ್ತು. ಅವರ ವಿಚಾರಣೆ ನಡೆಸಿದಾಗ ಸೈಯದ್ ರಿಯಾಜ್ ಹಾಗೂ ಆತನ ಮಗ ಸೈಯದ್ ಷೇರ್ ಅಲಿಯ ಹೆಸರು ಹೊರಬಿದ್ದಿತ್ತು.</p>.<p>ರಿಯಾಜ್ ವೃತ್ತಿಪರ ಕ್ರಿಮಿನಲ್ ಆಗಿದ್ದು, ಆತನ ಕುಟುಂಬ ಎರಡು ದಶಕಗಳಿಂದಲೂ ಗಂಧದ ಮರ ಕಳವು ದಂಧೆಯಲ್ಲಿ ತೊಡಗಿದೆ. ಕಟ್ಟಿಗೇಹಳ್ಳಿ ಗ್ರಾಮದ ಬಹುತೇಕರೂ, ಈ ಮಾಫಿಯಾಗೆ ಕೈ ಜೋಡಿಸಿದ್ದಾರೆ. ಇದರಿಂದಾಗಿ ತಂದೆ–ಮಗನನ್ನು ಬಂಧಿಸಲು ಪೊಲೀಸರು ಹಳ್ಳಿಯೊಳಗೆ ಕಾಲಿಟ್ಟರೆ, ಸ್ಥಳೀಯರೇ ಗೆರಿಲ್ಲಾ ಮಾದರಿಯಲ್ಲಿ ದಾಳಿ ನಡೆಸಿ ಓಡಿಸುತ್ತಾರೆ. ವಾರದ ಹಿಂದೆ ನಾಲ್ವರು ಪಿಎಸ್ಐಗಳೂ ಗ್ರಾಮಸ್ಥರಿಂದ ಹಲ್ಲೆಗೆ ಒಳಗಾಗಿದ್ದರು.</p>.<p>ಈ ಬಗ್ಗೆ ಅರಿತಿದ್ದ ಕೇಂದ್ರ ವಿಭಾಗದ ಪೊಲೀಸರು, ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳ ಸಮೇತ 150 ಸಿಬ್ಬಂದಿಯೊಂದಿಗೆ ಏಕಾಏಕಿ ಗ್ರಾಮಕ್ಕೆ ನುಗ್ಗಿದ್ದಾರೆ. ಮನೆ ಶೋಧ ನಡೆಸಿ 9 ಕೆ.ಜಿ ಗಂಧದ ಮರದ ಚಕ್ಕೆಗಳು, ₹ 35 ಲಕ್ಷ ನಗದು ಹಾಗೂ 350 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ, ತಂದೆ–ಮಗನನ್ನೂ ಬಂಧಿಸಿ ಕರೆತಂದಿದ್ದಾರೆ.</p>.<p>* ರಿಯಾಜ್ ಮನೆಯಲ್ಲಿ ಮೂರು ಡೈರಿಗಳು ಸಿಕ್ಕಿದ್ದು, ಗಂಧದ ಮರಗಳನ್ನು ಮಾರಾಟ ಮಾಡಿರುವ ವಿವರಗಳು ಅದರಲ್ಲಿವೆ.</p>.<p><em><strong>– ಡಿ. ದೇವರಾಜ್, ಡಿಸಿಪಿ, ಕೇಂದ್ರ ವಿಭಾಗ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊಸಕೋಟೆ ತಾಲ್ಲೂಕಿನ ಕಟ್ಟಿಗೇಹಳ್ಳಿಯಲ್ಲಿ ತಮ್ಮದೇ ಕೋಟೆ ಕಟ್ಟಿಕೊಂಡು ‘ರಕ್ತಚಂದನ ಮಾಫಿಯಾ’ ನಡೆಸುತ್ತಿದ್ದ ತಂದೆ–ಮಗನನ್ನು 150ಕ್ಕೂ ಹೆಚ್ಚು ಪೊಲೀಸರು ಶಸ್ತ್ರಸಜ್ಜಿತರಾಗಿ ಹೋಗಿ ಬಂಧಿಸಿದ್ದಾರೆ.</p>.<p>ಕೆಲ ದಿನಗಳ ಹಿಂದೆ ವಿಧಾನಸೌಧ, ರಾಜಭವನ, ಹೈಕೋರ್ಟ್ ಸುತ್ತಮುತ್ತಲ ಸೂಕ್ಷ್ಮ ಪ್ರದೇಶಗಳಲ್ಲೇ ರಕ್ತಚಂದನದ ಮರಗಳು ಕಳವಾಗಿದ್ದವು. ಈ ಪ್ರಕರಣ<br />ಗಳ ಬೆನ್ನುಹತ್ತಿದ ಕೇಂದ್ರ ವಿಭಾಗದ ಪೊಲೀಸರ ತಂಡ, ಕಬ್ಬನ್ಪಾರ್ಕ್ನಲ್ಲಿ ಕಾಲಿಗೆ ಗುಂಡು ಹೊಡೆದು ಆರು ಆರೋಪಿಗಳನ್ನು ಬಂಧಿಸಿತ್ತು. ಅವರ ವಿಚಾರಣೆ ನಡೆಸಿದಾಗ ಸೈಯದ್ ರಿಯಾಜ್ ಹಾಗೂ ಆತನ ಮಗ ಸೈಯದ್ ಷೇರ್ ಅಲಿಯ ಹೆಸರು ಹೊರಬಿದ್ದಿತ್ತು.</p>.<p>ರಿಯಾಜ್ ವೃತ್ತಿಪರ ಕ್ರಿಮಿನಲ್ ಆಗಿದ್ದು, ಆತನ ಕುಟುಂಬ ಎರಡು ದಶಕಗಳಿಂದಲೂ ಗಂಧದ ಮರ ಕಳವು ದಂಧೆಯಲ್ಲಿ ತೊಡಗಿದೆ. ಕಟ್ಟಿಗೇಹಳ್ಳಿ ಗ್ರಾಮದ ಬಹುತೇಕರೂ, ಈ ಮಾಫಿಯಾಗೆ ಕೈ ಜೋಡಿಸಿದ್ದಾರೆ. ಇದರಿಂದಾಗಿ ತಂದೆ–ಮಗನನ್ನು ಬಂಧಿಸಲು ಪೊಲೀಸರು ಹಳ್ಳಿಯೊಳಗೆ ಕಾಲಿಟ್ಟರೆ, ಸ್ಥಳೀಯರೇ ಗೆರಿಲ್ಲಾ ಮಾದರಿಯಲ್ಲಿ ದಾಳಿ ನಡೆಸಿ ಓಡಿಸುತ್ತಾರೆ. ವಾರದ ಹಿಂದೆ ನಾಲ್ವರು ಪಿಎಸ್ಐಗಳೂ ಗ್ರಾಮಸ್ಥರಿಂದ ಹಲ್ಲೆಗೆ ಒಳಗಾಗಿದ್ದರು.</p>.<p>ಈ ಬಗ್ಗೆ ಅರಿತಿದ್ದ ಕೇಂದ್ರ ವಿಭಾಗದ ಪೊಲೀಸರು, ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳ ಸಮೇತ 150 ಸಿಬ್ಬಂದಿಯೊಂದಿಗೆ ಏಕಾಏಕಿ ಗ್ರಾಮಕ್ಕೆ ನುಗ್ಗಿದ್ದಾರೆ. ಮನೆ ಶೋಧ ನಡೆಸಿ 9 ಕೆ.ಜಿ ಗಂಧದ ಮರದ ಚಕ್ಕೆಗಳು, ₹ 35 ಲಕ್ಷ ನಗದು ಹಾಗೂ 350 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ, ತಂದೆ–ಮಗನನ್ನೂ ಬಂಧಿಸಿ ಕರೆತಂದಿದ್ದಾರೆ.</p>.<p>* ರಿಯಾಜ್ ಮನೆಯಲ್ಲಿ ಮೂರು ಡೈರಿಗಳು ಸಿಕ್ಕಿದ್ದು, ಗಂಧದ ಮರಗಳನ್ನು ಮಾರಾಟ ಮಾಡಿರುವ ವಿವರಗಳು ಅದರಲ್ಲಿವೆ.</p>.<p><em><strong>– ಡಿ. ದೇವರಾಜ್, ಡಿಸಿಪಿ, ಕೇಂದ್ರ ವಿಭಾಗ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>