<p><strong>ಚಿತ್ರದುರ್ಗ:</strong> ‘ಕೊಡಗು ಜಿಲ್ಲೆ ನೆಲಸಮವಾಗುವುದಾಗಿ ಭವಿಷ್ಯ ನುಡಿಯುವ ಬ್ರಹ್ಮಾಂಡ ಗುರೂಜಿ, ಕೊರೊನಾ ವೈರಸ್ ಬಗ್ಗೆ ಏಕೆ ಮುನ್ಸೂಚನೆ ನೀಡಲಿಲ್ಲ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಶ್ನಿಸಿದ್ದಾರೆ.</p>.<p>‘ಕೊರೊನಾ ಕಾರಣಕ್ಕೆ ಮೂಲೆಗುಂಪಾಗಿದ್ದ ಮೌಢ್ಯಪ್ರಚಾರಕರು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ಜನರ ಮನೋದೌರ್ಬಲ್ಯಗಳನ್ನು ಗುರುಗಳು, ಬಾಬಾಗಳು, ಶಾಸ್ತ್ರಕಾರರು, ಪಂಚಾಂಗದವರು, ಹಸ್ತಸಾಮುದ್ರಿಕೆ ಹೇಳುವವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬ್ರಹ್ಮಾಂಡ ಸುಳ್ಳನ್ನು ಸೃಷ್ಟಿಸುವ ಭವಿಷ್ಯಕಾರರ ದೊಡ್ಡ ದಂಡೇ ಹುಟ್ಟಿಕೊಂಡಿದೆ’ ಎಂದು ಹೇಳಿದ್ದಾರೆ.</p>.<p>‘ಭಾರಿ ಭೂಕಂಪದಿಂದ ಕೊಡಗು ಜಿಲ್ಲೆ ನೆಲಸಮವಾಗಲಿದೆ’ ಎಂದು ಅದಾವ ಮುಖ ಇಟ್ಟುಕೊಂಡು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದರೋ ಗೊತ್ತಿಲ್ಲ. ಇವರು ಹೇಳುವ ಭವಿಷ್ಯ ಸತ್ಯವಾಗುವುದಾದಲ್ಲಿ ಕಳೆದ ಎರಡು ವರ್ಷ ನೆರೆ ಹಾವಳಿ ವಿಚಾರವನ್ನು ಮೊದಲೇ ಏಕೆ ಹೇಳಲಿಲ್ಲ. ಜನರು ದಡ್ಡರಾದಾಗ ಇವರು ಬೇಳೆ ಬೇಯಿಸಿಕೊಳ್ಳುತ್ತಾರೆ. ಇಂಥವರನ್ನು ಮೈಬಗ್ಗಿಸಿ ದುಡಿಯುವಂತೆ ಮಾಡುವ ಹೊಣೆಗಾರಿಕೆ ಜನರ ಮೇಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಕೊಡಗು ಜಿಲ್ಲೆ ನೆಲಸಮವಾಗುವುದಾಗಿ ಭವಿಷ್ಯ ನುಡಿಯುವ ಬ್ರಹ್ಮಾಂಡ ಗುರೂಜಿ, ಕೊರೊನಾ ವೈರಸ್ ಬಗ್ಗೆ ಏಕೆ ಮುನ್ಸೂಚನೆ ನೀಡಲಿಲ್ಲ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಶ್ನಿಸಿದ್ದಾರೆ.</p>.<p>‘ಕೊರೊನಾ ಕಾರಣಕ್ಕೆ ಮೂಲೆಗುಂಪಾಗಿದ್ದ ಮೌಢ್ಯಪ್ರಚಾರಕರು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ಜನರ ಮನೋದೌರ್ಬಲ್ಯಗಳನ್ನು ಗುರುಗಳು, ಬಾಬಾಗಳು, ಶಾಸ್ತ್ರಕಾರರು, ಪಂಚಾಂಗದವರು, ಹಸ್ತಸಾಮುದ್ರಿಕೆ ಹೇಳುವವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬ್ರಹ್ಮಾಂಡ ಸುಳ್ಳನ್ನು ಸೃಷ್ಟಿಸುವ ಭವಿಷ್ಯಕಾರರ ದೊಡ್ಡ ದಂಡೇ ಹುಟ್ಟಿಕೊಂಡಿದೆ’ ಎಂದು ಹೇಳಿದ್ದಾರೆ.</p>.<p>‘ಭಾರಿ ಭೂಕಂಪದಿಂದ ಕೊಡಗು ಜಿಲ್ಲೆ ನೆಲಸಮವಾಗಲಿದೆ’ ಎಂದು ಅದಾವ ಮುಖ ಇಟ್ಟುಕೊಂಡು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದರೋ ಗೊತ್ತಿಲ್ಲ. ಇವರು ಹೇಳುವ ಭವಿಷ್ಯ ಸತ್ಯವಾಗುವುದಾದಲ್ಲಿ ಕಳೆದ ಎರಡು ವರ್ಷ ನೆರೆ ಹಾವಳಿ ವಿಚಾರವನ್ನು ಮೊದಲೇ ಏಕೆ ಹೇಳಲಿಲ್ಲ. ಜನರು ದಡ್ಡರಾದಾಗ ಇವರು ಬೇಳೆ ಬೇಯಿಸಿಕೊಳ್ಳುತ್ತಾರೆ. ಇಂಥವರನ್ನು ಮೈಬಗ್ಗಿಸಿ ದುಡಿಯುವಂತೆ ಮಾಡುವ ಹೊಣೆಗಾರಿಕೆ ಜನರ ಮೇಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>