ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಯ ಕಾರ್ಯಕರ್ತರಿಗೆ ‘ಮತಗಟ್ಟೆ ಹಂತದ ಅಧಿಕಾರಿ’ ಎಂಬ ಹೆಸರಿನಡಿ ಗುರುತಿನ ಚೀಟಿ ನೀಡಿದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಬಿಬಿಎಂಪಿ ವಿಶೇಷ ಆಯುಕ್ತ ಎಸ್. ರಂಗಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ಈ ಎರಡೂ ಹುದ್ದೆಗಳ ಹೆಚ್ಚುವರಿ ಹೊಣೆಯನ್ನು ಸಂಗಪ್ಪ ಮತ್ತು ಹರೀಶ್ ಕುಮಾರ್ ಅವರಿಗೆ ನೀಡಲಾಗಿದೆ.