ಇದಕ್ಕೂ ಮುಂಚೆ ಪೀರನವಾಡಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು. ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಪಸ್ಥಿತರಿದ್ದರು.
‘ಶಿವಾಜಿ– ರಾಯಣ್ಣ ಇಬ್ಬರೂ ರಾಷ್ಟ್ರ ಪುರುಷರು’
ಬೆಳಗಾವಿ: ‘ಶಿವಾಜಿ– ರಾಯಣ್ಣ ಇಬ್ಬರೂ ರಾಷ್ಟ್ರಪುರುಷರಾಗಿದ್ದು ಅವರನ್ನು ಜಾತಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ. ನಾವು ಇಬ್ಬರಿಗೂ ಗೌರವ ಕೊಡುತ್ತೇವೆ. ಅವರ ಅಭಿಮಾನಿಗಳು ಶಾಂತಿ ಕಾಪಾಡಲು ಸಂಪೂರ್ಣವಾಗಿ ಸಹಕಾರ ನೀಡಿದ್ದರಿಂದ ಸಮಸ್ಯೆ ಇತ್ಯರ್ಥಗೊಳಿಸಲು ಸಾಧ್ಯವಾಯಿತು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಇಲ್ಲಿ ಶನಿವಾರ ಹೇಳಿದರು.