<p><strong>ಬೆಳಗಾವಿ:</strong> ಅನಗೋಳದ ಕನಕದಾಸ ಕಾಲೊನಿಯಲ್ಲಿ ಕಿಡಿಗೇಡಿಗಳು ಭಗ್ನಗೊಳಿಸಿದ್ದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ದುರಸ್ತಿಗೊಳಿಸಿ ಭಾನುವಾರ ಮರಳಿ ಅಲ್ಲಿಯೇ ಸ್ಥಾಪಿಸಲಾಯಿತು.</p>.<p>ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ರಾಯಣ್ಣ ಸೇನೆ ಕಾರ್ಯಕರ್ತರು ಪ್ರತಿಮೆ ಸ್ಥಾಪಿಸಿ ಪೂಜೆ ಸಲ್ಲಿಸಿದರು. ಬಡಾವಣೆ ಮುಖ್ಯ ದ್ವಾರದಿಂದ ಮಹಿಳೆಯರು ಕುಂಭಮೇಳದೊಂದಿಗೆ ಮೆರವಣಿಗೆ ನಡೆಸಿದರು. ಕಿತ್ತೂರು ಚನ್ನಮ್ಮ ಹಾಗೂ ರಾಯಣ್ಣನ ಪರ ಘೋಷಣೆಗಳನ್ನು ಕೂಗಿದರು.</p>.<p>ಶನಿವಾರ ನಸುಕಿನಲ್ಲಿ ಪ್ರತಿಮೆ ವಿರೂಪಗೊಳಿಸಿದ ಘಟನೆ ಬಳಿಕ ಪೊಲೀಸರು ಅದನ್ನು ತಮ್ಮ ವಶಕ್ಕೆ ಪಡೆದಿದ್ದರು.</p>.<p><strong>ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ:</strong> ಪ್ರತಿಮೆ ಭಗ್ನಗೊಳಿಸಿದ ಘಟನೆ ವಿರೋಧಿಸಿ ತಾಲ್ಲೂಕಿನ ಪೀರನವಾಡಿ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p><strong>22ರವರೆಗೆ ನಿಷೇಧಾಜ್ಞೆ ವಿಸ್ತರಣೆ:</strong> ಬೆಳಗಾವಿ ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಇದೇ 22ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಭಾನುವಾರ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಅನಗೋಳದ ಕನಕದಾಸ ಕಾಲೊನಿಯಲ್ಲಿ ಕಿಡಿಗೇಡಿಗಳು ಭಗ್ನಗೊಳಿಸಿದ್ದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ದುರಸ್ತಿಗೊಳಿಸಿ ಭಾನುವಾರ ಮರಳಿ ಅಲ್ಲಿಯೇ ಸ್ಥಾಪಿಸಲಾಯಿತು.</p>.<p>ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ರಾಯಣ್ಣ ಸೇನೆ ಕಾರ್ಯಕರ್ತರು ಪ್ರತಿಮೆ ಸ್ಥಾಪಿಸಿ ಪೂಜೆ ಸಲ್ಲಿಸಿದರು. ಬಡಾವಣೆ ಮುಖ್ಯ ದ್ವಾರದಿಂದ ಮಹಿಳೆಯರು ಕುಂಭಮೇಳದೊಂದಿಗೆ ಮೆರವಣಿಗೆ ನಡೆಸಿದರು. ಕಿತ್ತೂರು ಚನ್ನಮ್ಮ ಹಾಗೂ ರಾಯಣ್ಣನ ಪರ ಘೋಷಣೆಗಳನ್ನು ಕೂಗಿದರು.</p>.<p>ಶನಿವಾರ ನಸುಕಿನಲ್ಲಿ ಪ್ರತಿಮೆ ವಿರೂಪಗೊಳಿಸಿದ ಘಟನೆ ಬಳಿಕ ಪೊಲೀಸರು ಅದನ್ನು ತಮ್ಮ ವಶಕ್ಕೆ ಪಡೆದಿದ್ದರು.</p>.<p><strong>ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ:</strong> ಪ್ರತಿಮೆ ಭಗ್ನಗೊಳಿಸಿದ ಘಟನೆ ವಿರೋಧಿಸಿ ತಾಲ್ಲೂಕಿನ ಪೀರನವಾಡಿ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p><strong>22ರವರೆಗೆ ನಿಷೇಧಾಜ್ಞೆ ವಿಸ್ತರಣೆ:</strong> ಬೆಳಗಾವಿ ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಇದೇ 22ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಭಾನುವಾರ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>