<p><strong>ಯಲ್ಲಾಪುರ (ಉತ್ತರ ಕನ್ನಡ): </strong>ಸಂಕಲ್ಪ ಸೇವಾ ಸಂಸ್ಥೆಯ 34ನೇ ‘ಸಂಕಲ್ಪ ಉತ್ಸವ’ವನ್ನು ಜನವರಿ 9 ರಂದು ಪಟ್ಟಣದ ‘ನಿಸರ್ಗ ಮನೆ’ಯಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಉತ್ಸವ ಕುರಿತು ಮಾಹಿತಿ ನೀಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಪ್ರಸಿದ್ಧ ಕಲಾವಿದರಾದ ಕೇಶವ ಹೆಗಡೆ ಕೊಳಗಿ, ಶಂಕರ ಭಟ್ಟ ಬ್ರಹ್ಮೂರು, ರಾಘವೇಂದ್ರ ಆಚಾರ್ಯ ಜನಸಾಲೆ ಇವರ ಗಾಯನ ಕಾರ್ಯಕ್ರಮ 9 ರಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಸುನೀಲ ಭಂಡಾರಿ, ಶಂಕರ ಭಾಗ್ವತ್, ಗಣಪತಿ ಭಾಗ್ವತ ಕವಾಳೆ, ಪ್ರಸನ್ನ ಹೆಗ್ಗಾರ, ಗಣೇಶ ಗಾಂವ್ಕರ್ ಇವರ ವಾದನದಲ್ಲಿ ‘ಹಿಮ್ಮೇಳ ಗಾನ ವೈಭವ' ನಡೆಯಲಿದೆ. ಶ್ರೀರಕ್ಷಾ ಹಾಗೂ ಚಿಂತನಾ ಇವರ ಭಾಗವತಿಕೆ ನಡೆಯಲಿದೆ.</p>.<p>ಸಂಜೆ 6 ಗಂಟೆಯಿಂದ ಸುಬ್ರಹ್ಮಣ್ಯ ಚಿಟ್ಟಾಣಿ, ನೀಲಕೋಡ ಶಂಕರ ಹೆಗಡೆ ತಂಡದವರಿಂದ 'ಭಾಸವತಿ' ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.</p>.<p>ಕೋವಿಡ್ ಕಾರಣದಿಂದ 7 ದಿನಗಳ ಸಂಕಲ್ಪ ಉತ್ಸವವನ್ನು ಈ ಬಾರಿ ಕೈ ಬಿಡಲಾಗಿದ್ದು, ವರ್ಷದುದ್ದಕ್ಕೂ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ 7 ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ (ಉತ್ತರ ಕನ್ನಡ): </strong>ಸಂಕಲ್ಪ ಸೇವಾ ಸಂಸ್ಥೆಯ 34ನೇ ‘ಸಂಕಲ್ಪ ಉತ್ಸವ’ವನ್ನು ಜನವರಿ 9 ರಂದು ಪಟ್ಟಣದ ‘ನಿಸರ್ಗ ಮನೆ’ಯಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಉತ್ಸವ ಕುರಿತು ಮಾಹಿತಿ ನೀಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಪ್ರಸಿದ್ಧ ಕಲಾವಿದರಾದ ಕೇಶವ ಹೆಗಡೆ ಕೊಳಗಿ, ಶಂಕರ ಭಟ್ಟ ಬ್ರಹ್ಮೂರು, ರಾಘವೇಂದ್ರ ಆಚಾರ್ಯ ಜನಸಾಲೆ ಇವರ ಗಾಯನ ಕಾರ್ಯಕ್ರಮ 9 ರಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಸುನೀಲ ಭಂಡಾರಿ, ಶಂಕರ ಭಾಗ್ವತ್, ಗಣಪತಿ ಭಾಗ್ವತ ಕವಾಳೆ, ಪ್ರಸನ್ನ ಹೆಗ್ಗಾರ, ಗಣೇಶ ಗಾಂವ್ಕರ್ ಇವರ ವಾದನದಲ್ಲಿ ‘ಹಿಮ್ಮೇಳ ಗಾನ ವೈಭವ' ನಡೆಯಲಿದೆ. ಶ್ರೀರಕ್ಷಾ ಹಾಗೂ ಚಿಂತನಾ ಇವರ ಭಾಗವತಿಕೆ ನಡೆಯಲಿದೆ.</p>.<p>ಸಂಜೆ 6 ಗಂಟೆಯಿಂದ ಸುಬ್ರಹ್ಮಣ್ಯ ಚಿಟ್ಟಾಣಿ, ನೀಲಕೋಡ ಶಂಕರ ಹೆಗಡೆ ತಂಡದವರಿಂದ 'ಭಾಸವತಿ' ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.</p>.<p>ಕೋವಿಡ್ ಕಾರಣದಿಂದ 7 ದಿನಗಳ ಸಂಕಲ್ಪ ಉತ್ಸವವನ್ನು ಈ ಬಾರಿ ಕೈ ಬಿಡಲಾಗಿದ್ದು, ವರ್ಷದುದ್ದಕ್ಕೂ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ 7 ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>