<p><strong>ಬೆಂಗಳೂರು:</strong> ‘ಹೆದ್ದಾರಿ ಬದಿಯ ಡಾಬಾ, ಹೋಟೆಲ್, ಗ್ಯಾರೇಜ್ಗಳಲ್ಲಿ ಮಕ್ಕಳಿಂದ ಕೆಲಸ ಮಾಡಿಸುತ್ತಿರುತ್ತಾರೆ. ಅಂತಹದ್ದು ಯಾರ ಗಮನಕ್ಕೆ ಬಂದರೂ, 1098 ಸಹಾಯವಾಣಿಗೆ ಕರೆ ಮಾಡಿ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕರೆ ನೀಡಿದರು.</p>.<p>ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆಯು ನಗರದ ಎಂ.ಜಿ.ರಸ್ತೆಯ ಗಾಂಧಿ ವೃತ್ತದಿಂದ ಕೆ.ಆರ್.ವೃತ್ತದವರೆಗೆ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ ಹಲವು ಮಕ್ಕಳು ಓದುವುದನ್ನು ಬಿಟ್ಟು, ದುಡಿಮೆಯಲ್ಲಿ ತೊಡಗಿದ್ದಾರೆ. ಅವರೆಲ್ಲಾ ಮತ್ತೆ ಶಾಲೆಗೆ ಹೋಗುವಂತಾಗಬೇಕು. ಈ ಗುರಿ ಸಾಧನೆಯಲ್ಲಿ ಸಾರ್ವಜನಿಕರೂ ಸರ್ಕಾರದೊಂದಿಗೆ ಕೈ ಜೋಡಿಸಬೇಕು’ ಎಂದು ಕೋರಿದರು.</p>.<p>ನಟಿ ಅದಿತಿ ಪ್ರಭುದೇವ, ‘ಮಕ್ಕಳು ಕಾರ್ಮಿಕರಾಗುವುದನ್ನು ತಡೆಯುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೂ ಇದೆ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ಸಂಬಂಧವಿದೆ. ಬಡತನ ಹೋಗಲಾಡಿಸಿದರೆ, ಈ ಸಮಸ್ಯೆಯೂ ನಿವಾರಣೆಯಾಗಲಿದೆ. ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಇಲಾಖೆ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಭಾರತಿ ಜಾಥಾದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೆದ್ದಾರಿ ಬದಿಯ ಡಾಬಾ, ಹೋಟೆಲ್, ಗ್ಯಾರೇಜ್ಗಳಲ್ಲಿ ಮಕ್ಕಳಿಂದ ಕೆಲಸ ಮಾಡಿಸುತ್ತಿರುತ್ತಾರೆ. ಅಂತಹದ್ದು ಯಾರ ಗಮನಕ್ಕೆ ಬಂದರೂ, 1098 ಸಹಾಯವಾಣಿಗೆ ಕರೆ ಮಾಡಿ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕರೆ ನೀಡಿದರು.</p>.<p>ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆಯು ನಗರದ ಎಂ.ಜಿ.ರಸ್ತೆಯ ಗಾಂಧಿ ವೃತ್ತದಿಂದ ಕೆ.ಆರ್.ವೃತ್ತದವರೆಗೆ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ ಹಲವು ಮಕ್ಕಳು ಓದುವುದನ್ನು ಬಿಟ್ಟು, ದುಡಿಮೆಯಲ್ಲಿ ತೊಡಗಿದ್ದಾರೆ. ಅವರೆಲ್ಲಾ ಮತ್ತೆ ಶಾಲೆಗೆ ಹೋಗುವಂತಾಗಬೇಕು. ಈ ಗುರಿ ಸಾಧನೆಯಲ್ಲಿ ಸಾರ್ವಜನಿಕರೂ ಸರ್ಕಾರದೊಂದಿಗೆ ಕೈ ಜೋಡಿಸಬೇಕು’ ಎಂದು ಕೋರಿದರು.</p>.<p>ನಟಿ ಅದಿತಿ ಪ್ರಭುದೇವ, ‘ಮಕ್ಕಳು ಕಾರ್ಮಿಕರಾಗುವುದನ್ನು ತಡೆಯುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೂ ಇದೆ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ಸಂಬಂಧವಿದೆ. ಬಡತನ ಹೋಗಲಾಡಿಸಿದರೆ, ಈ ಸಮಸ್ಯೆಯೂ ನಿವಾರಣೆಯಾಗಲಿದೆ. ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಇಲಾಖೆ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಭಾರತಿ ಜಾಥಾದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>