ಬೆಂಗಳೂರು: ‘ಭ್ರಷ್ಟರಿಗೆ ಶಿಕ್ಷೆಯ ಭಯವೇ ಇಲ್ಲದಂತಾಗಿದೆ. ಹೀಗಾಗಿ ಅವರು ಅವ್ಯಾಹತವಾಗಿ ಹಗರಣಗಳನ್ನು ಮಾಡುತ್ತಿದ್ದಾರೆ. ಸ್ವಾರ್ಥ ಮತ್ತು ದುರಾಸೆಯೂ ಇದಕ್ಕೆ ಕಾರಣ. ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬರುವವರಿಗೆ ಭವ್ಯ ಸ್ವಾಗತ ನೀಡುವ ಪರಿಪಾಠ ಹೆಚ್ಚುತ್ತಿರುವುದು ವಿಷಾದನೀಯ. ಜನರ ಈ ಮನೋಧೋರಣೆ ಬದಲಾಗಬೇಕು’ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ತಿಳಿಸಿದರು.