<p><strong>ಬೆಂಗಳೂರು</strong>: ವಲಸೆ ಕಾರ್ಮಿಕರ ಮಾಹಿತಿಯನ್ನು ಉದ್ಯೋಗದಾತರು ಸಂಗ್ರಹಿಸಬೇಕು ಮತ್ತು ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.</p>.<p>ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ವಿವಿಧ ಕೈಗಾರಿಕೆಗಳ ಪ್ರತಿನಿಧಿಗಳ ಜತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಹತ್ಯೆ ಪ್ರಕರಣ ಪ್ರಸ್ತಾಪ ಮಾಡಿದ ಅವರು, ‘ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಾಹಿತಿ ಸಂಗ್ರಹಿಸುವುದು ತುಂಬಾ ಕಷ್ಟ. ಅದು ನಮಗೆ ಸವಾಲು ಆಗಿದ್ದರೂ, ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಹುಬ್ಬಳಿಯಲ್ಲಿ ನಡೆದ ಘಟನೆ ಅತ್ಯಂತ ನೋವಿನದು. ಇಂತಹ ಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾವಾಗ ಬೇಕಾದರೂ ನಡೆಯಬಹುದು. ಅಂತಹ ಸಂದರ್ಭದಲ್ಲಿ ಕಾರ್ಮಿಕರ ಮಾಹಿತಿ ಇದ್ದರೆ ಆರೋಪಿಗಳನ್ನು ಪತ್ತೆ ಮಾಡುವುದು ಸುಲಭವಾಗಲಿದೆ. ಈ ಬಗ್ಗೆ ಗುತ್ತಿಗೆದಾರರು ಮಾಹಿತಿ ನೀಡಬೇಕು. ಜನರಲ್ಲಿ ಅರಿವು ಮೂಡಿಸಬೇಕು. ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು’ ಎಂದರು.</p>.<p>‘ಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರ ಎಲ್ಲಾ ಮಾಹಿತಿ ಸಿಗಲಿದೆ. ಆದರೆ, ಅಸಂಘಟಿತ ವಲಯದ ಕಾರ್ಮಿಕರ ವಿವರ ಸಿಗುವುದಿಲ್ಲ. ವಿಶೇಷವಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಯಾವುದಾದರೂ ಮಾರ್ಗೋಪಾಯಗಳಿದ್ದರೆ ತಿಳಿಸಿ’ ಎಂದು ಲಾಡ್ ಮನವಿ ಮಾಡಿದರು.</p>.<p>‘ಗುತ್ತಿಗೆದಾರರು ನೋಂದಣಿ ಮಾಡಬೇಕು ಎಂಬ ನಿಯಮ ಇದೆ. ಆದರೆ ಮಾಡುವುದಿಲ್ಲ. ಯಾರು ಎಲ್ಲಿ ಏನು ಕೆಲಸ ಮಾಡುತ್ತಾ ಇದ್ದಾರೆ ಎಂಬುದರ ಮಾಹಿತಿ ತಿಳಿಯುವುದಿಲ್ಲ. ಕಾರ್ಮಿಕ ಇಲಾಖೆ ಮಾತ್ರವಲ್ಲ; ಎಲ್ಲಾ ಇಲಾಖೆಯ ಕಾರ್ಮಿಕರ ವಿವರ ಸಿಗುವಂತಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಲಸೆ ಕಾರ್ಮಿಕರ ಮಾಹಿತಿಯನ್ನು ಉದ್ಯೋಗದಾತರು ಸಂಗ್ರಹಿಸಬೇಕು ಮತ್ತು ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.</p>.<p>ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ವಿವಿಧ ಕೈಗಾರಿಕೆಗಳ ಪ್ರತಿನಿಧಿಗಳ ಜತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಹತ್ಯೆ ಪ್ರಕರಣ ಪ್ರಸ್ತಾಪ ಮಾಡಿದ ಅವರು, ‘ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಾಹಿತಿ ಸಂಗ್ರಹಿಸುವುದು ತುಂಬಾ ಕಷ್ಟ. ಅದು ನಮಗೆ ಸವಾಲು ಆಗಿದ್ದರೂ, ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಹುಬ್ಬಳಿಯಲ್ಲಿ ನಡೆದ ಘಟನೆ ಅತ್ಯಂತ ನೋವಿನದು. ಇಂತಹ ಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾವಾಗ ಬೇಕಾದರೂ ನಡೆಯಬಹುದು. ಅಂತಹ ಸಂದರ್ಭದಲ್ಲಿ ಕಾರ್ಮಿಕರ ಮಾಹಿತಿ ಇದ್ದರೆ ಆರೋಪಿಗಳನ್ನು ಪತ್ತೆ ಮಾಡುವುದು ಸುಲಭವಾಗಲಿದೆ. ಈ ಬಗ್ಗೆ ಗುತ್ತಿಗೆದಾರರು ಮಾಹಿತಿ ನೀಡಬೇಕು. ಜನರಲ್ಲಿ ಅರಿವು ಮೂಡಿಸಬೇಕು. ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು’ ಎಂದರು.</p>.<p>‘ಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರ ಎಲ್ಲಾ ಮಾಹಿತಿ ಸಿಗಲಿದೆ. ಆದರೆ, ಅಸಂಘಟಿತ ವಲಯದ ಕಾರ್ಮಿಕರ ವಿವರ ಸಿಗುವುದಿಲ್ಲ. ವಿಶೇಷವಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಯಾವುದಾದರೂ ಮಾರ್ಗೋಪಾಯಗಳಿದ್ದರೆ ತಿಳಿಸಿ’ ಎಂದು ಲಾಡ್ ಮನವಿ ಮಾಡಿದರು.</p>.<p>‘ಗುತ್ತಿಗೆದಾರರು ನೋಂದಣಿ ಮಾಡಬೇಕು ಎಂಬ ನಿಯಮ ಇದೆ. ಆದರೆ ಮಾಡುವುದಿಲ್ಲ. ಯಾರು ಎಲ್ಲಿ ಏನು ಕೆಲಸ ಮಾಡುತ್ತಾ ಇದ್ದಾರೆ ಎಂಬುದರ ಮಾಹಿತಿ ತಿಳಿಯುವುದಿಲ್ಲ. ಕಾರ್ಮಿಕ ಇಲಾಖೆ ಮಾತ್ರವಲ್ಲ; ಎಲ್ಲಾ ಇಲಾಖೆಯ ಕಾರ್ಮಿಕರ ವಿವರ ಸಿಗುವಂತಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>