<p><strong>ಬೆಂಗಳೂರು</strong>: ಭಯೋತ್ಪಾದಕ ದಾಳಿ ನಡೆದ ಜಮ್ಮು ಕಾಶ್ಮೀರದ ಪಹಲ್ಗಾಮ್ಗೆ ರಾಜ್ಯದಿಂದ ಸಚಿವ ಸಂತೋಷ್ ಲಾಡ್ ತೆರಳಿದ್ದು, ಉಗ್ರರ ದಾಳಿಯಲ್ಲಿ ಮೃತಪಟ್ಟ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.</p><p>ಅಲ್ಲದೆ, ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕೆಲಸದಲ್ಲಿ ನಿರತರಾಗಿದ್ದು, ಸಂತ್ರಸ್ತರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ.</p><p>ಮೃತಪಟ್ಟ ಕನ್ನಡಿಗರ ಮೃತದೇಹಗಳನ್ನು ರಾಜ್ಯಕ್ಕೆ ತರುವ ಕಾರ್ಯಾಚರಣೆಯಲ್ಲಿಯೂ ಸಚಿವರು ತೊಡಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಯೋತ್ಪಾದಕ ದಾಳಿ ನಡೆದ ಜಮ್ಮು ಕಾಶ್ಮೀರದ ಪಹಲ್ಗಾಮ್ಗೆ ರಾಜ್ಯದಿಂದ ಸಚಿವ ಸಂತೋಷ್ ಲಾಡ್ ತೆರಳಿದ್ದು, ಉಗ್ರರ ದಾಳಿಯಲ್ಲಿ ಮೃತಪಟ್ಟ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.</p><p>ಅಲ್ಲದೆ, ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕೆಲಸದಲ್ಲಿ ನಿರತರಾಗಿದ್ದು, ಸಂತ್ರಸ್ತರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ.</p><p>ಮೃತಪಟ್ಟ ಕನ್ನಡಿಗರ ಮೃತದೇಹಗಳನ್ನು ರಾಜ್ಯಕ್ಕೆ ತರುವ ಕಾರ್ಯಾಚರಣೆಯಲ್ಲಿಯೂ ಸಚಿವರು ತೊಡಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>