<p><strong>ಮಂಗಳೂರು:</strong> ಕನ್ನಡದ ಹೆಸರಾಂತ ಸಾಹಿತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಿಧನರಾದರು.</p>.<p>ಆರು ತಿಂಗಳ ಹಿಂದೆ ಬಾಯಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರೋಗ್ಯ ಏರುಪೇರಾಗಿದ್ದರಿಂದ ನಗರದ ಯುನಿಟಿ ಆಸ್ಪತ್ರೆಗೆ ಮಂಗಳ ವಾರ ಬೆಳಿಗ್ಗೆ ಅವರನ್ನು ದಾಖಲಿಸಲಾಗಿತ್ತು. ಸ್ವಲ್ಪ ಹೊತ್ತಿನಲ್ಲೇ ಅವರು ಕೊನೆಯುಸಿರೆಳೆದರು.</p>.<p>ಸಾರಾ ಅವರಿಗೆ ನಾಲ್ವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆಯು ನಗರದ ಬಂದರ್ನ ಜೀನತ್ ಬಕ್ಷ್ ಜುಮ್ಮಾ ಮಸೀದಿ ಪ್ರದೇಶದಲ್ಲಿ ನೆರವೇರಿತು.</p>.<p>ಕಾಸರಗೋಡು ಜಿಲ್ಲೆಯ ‘ಪುದಿಯಾ ಪುರ್ (ಹೊಸಮನೆ) ತರವಾಡು ಮನೆಯಲ್ಲಿ ಜನಿಸಿದ್ದ ಸಾರಾ, 1984ರಲ್ಲಿ ರಚಿಸಿದ ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿ ಮೂಲಕ ಖ್ಯಾತರಾಗಿದ್ದರು. ಇದು ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಒಡಿಯಾ ಭಾಷೆಗೆ ಅನುವಾದವಾಗಿದೆ.</p>.<p>ಅನೇಕ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿತ್ತು. ‘ಹೊತ್ತು ಕಂತುವ ಮುನ್ನ’ ಅವರ ಆತ್ಮಕತೆ. ಹಲವು ಕಾದಂಬರಿ, ಐದು ಕಥಾ ಸಂಕಲನ, ನಾಟಕ, ಪ್ರವಾಸ ಕೃತಿಗಳು, ಪ್ರಬಂಧ ಸಂಕಲನಗಳನ್ನು ಹೊರತಂದಿದ್ದಾರೆ. ಮಲಯಾಳ ಭಾಷೆಯಿಂದ ಕನ್ನಡಕ್ಕೆ ಅನೇಕ ಕೃತಿಗಳನ್ನು ಅನುವಾದಿಸಿದ್ದರು.</p>.<p>ಸಾಂಪ್ರದಾಯಿಕ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಅವರು 10ನೇ ತರಗತಿವರೆಗೆ ಶಿಕ್ಷಣ ಪಡೆದಿದ್ದರು. ವಕೀಲರಾಗಿದ್ದ ಅವರ ತಂದೆ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿದ್ದರು. ಕಾಸರಗೋಡು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿವರೆಗೆ ಶಿಕ್ಷಣ ಪಡೆದ ಮೊದಲ ಮುಸ್ಲಿಂ ಬಾಲಕಿ ಅವರು.</p>.<p>ಸದಾ ಧಾರ್ಮಿಕ ಮೂಲಭೂತವಾದದ ವಿರುದ್ಧ ಧ್ವನಿ ಎತ್ತುತ್ತಿದ್ದ ಸಾರಾ, ಸ್ತ್ರೀ ಸಬಲೀಕರಣ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆದು ಸಬಲರಾಗಬೇಕು ಎಂಬ ಆಶಯ ಹೊಂದಿದ್ದ ಅವರು, ತಮ್ಮ ಕೃತಿಗಳಲ್ಲೂ ಇದನ್ನು ಬಲವಾಗಿ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕನ್ನಡದ ಹೆಸರಾಂತ ಸಾಹಿತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಿಧನರಾದರು.</p>.<p>ಆರು ತಿಂಗಳ ಹಿಂದೆ ಬಾಯಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರೋಗ್ಯ ಏರುಪೇರಾಗಿದ್ದರಿಂದ ನಗರದ ಯುನಿಟಿ ಆಸ್ಪತ್ರೆಗೆ ಮಂಗಳ ವಾರ ಬೆಳಿಗ್ಗೆ ಅವರನ್ನು ದಾಖಲಿಸಲಾಗಿತ್ತು. ಸ್ವಲ್ಪ ಹೊತ್ತಿನಲ್ಲೇ ಅವರು ಕೊನೆಯುಸಿರೆಳೆದರು.</p>.<p>ಸಾರಾ ಅವರಿಗೆ ನಾಲ್ವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆಯು ನಗರದ ಬಂದರ್ನ ಜೀನತ್ ಬಕ್ಷ್ ಜುಮ್ಮಾ ಮಸೀದಿ ಪ್ರದೇಶದಲ್ಲಿ ನೆರವೇರಿತು.</p>.<p>ಕಾಸರಗೋಡು ಜಿಲ್ಲೆಯ ‘ಪುದಿಯಾ ಪುರ್ (ಹೊಸಮನೆ) ತರವಾಡು ಮನೆಯಲ್ಲಿ ಜನಿಸಿದ್ದ ಸಾರಾ, 1984ರಲ್ಲಿ ರಚಿಸಿದ ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿ ಮೂಲಕ ಖ್ಯಾತರಾಗಿದ್ದರು. ಇದು ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಒಡಿಯಾ ಭಾಷೆಗೆ ಅನುವಾದವಾಗಿದೆ.</p>.<p>ಅನೇಕ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿತ್ತು. ‘ಹೊತ್ತು ಕಂತುವ ಮುನ್ನ’ ಅವರ ಆತ್ಮಕತೆ. ಹಲವು ಕಾದಂಬರಿ, ಐದು ಕಥಾ ಸಂಕಲನ, ನಾಟಕ, ಪ್ರವಾಸ ಕೃತಿಗಳು, ಪ್ರಬಂಧ ಸಂಕಲನಗಳನ್ನು ಹೊರತಂದಿದ್ದಾರೆ. ಮಲಯಾಳ ಭಾಷೆಯಿಂದ ಕನ್ನಡಕ್ಕೆ ಅನೇಕ ಕೃತಿಗಳನ್ನು ಅನುವಾದಿಸಿದ್ದರು.</p>.<p>ಸಾಂಪ್ರದಾಯಿಕ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಅವರು 10ನೇ ತರಗತಿವರೆಗೆ ಶಿಕ್ಷಣ ಪಡೆದಿದ್ದರು. ವಕೀಲರಾಗಿದ್ದ ಅವರ ತಂದೆ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿದ್ದರು. ಕಾಸರಗೋಡು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿವರೆಗೆ ಶಿಕ್ಷಣ ಪಡೆದ ಮೊದಲ ಮುಸ್ಲಿಂ ಬಾಲಕಿ ಅವರು.</p>.<p>ಸದಾ ಧಾರ್ಮಿಕ ಮೂಲಭೂತವಾದದ ವಿರುದ್ಧ ಧ್ವನಿ ಎತ್ತುತ್ತಿದ್ದ ಸಾರಾ, ಸ್ತ್ರೀ ಸಬಲೀಕರಣ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆದು ಸಬಲರಾಗಬೇಕು ಎಂಬ ಆಶಯ ಹೊಂದಿದ್ದ ಅವರು, ತಮ್ಮ ಕೃತಿಗಳಲ್ಲೂ ಇದನ್ನು ಬಲವಾಗಿ ಪ್ರತಿಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>