ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕಿನ ರಾಧಾಕೃಷ್ಣ ನಾಯಕ್ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ‘ದಿನಸಿ, ಕೃಷಿ ಚಟುವಟಿಕೆ, ವೈದ್ಯಕೀಯ ಸೌಲಭ್ಯಕ್ಕೆ ಮೂರು ಗ್ರಾಮಗಳ ಜನರು 15 ಕಿಲೋ ಮೀಟರ್ ದೂರದಲ್ಲಿರುವ ಪೆರ್ಲ ಪಟ್ಟಣವನ್ನೇ ಆಶ್ರಯಿಸಿದ್ದಾರೆ. ಪೆರ್ಲ ಪಟ್ಟಣಕ್ಕೆ ಹೋಗಬೇಕೆಂದರೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಸಾರಡ್ಕಪೊಲೀಸ್ ಚೆಕ್ ಪೋಸ್ಟ್ ದಾಟಲೇಬೇಕು. ಕೋವಿಡ್ ಕಾರಣಕ್ಕೆ ಚೆಕ್ ಪೋಸ್ಟ್ನಲ್ಲಿ ಜನರು ಮತ್ತು ವಾಹನಗಳ ಸಂಚಾರ ಬಂದ್ ಮಾಡಲಾಗಿದೆ’ ಎಂದು ದೂರಿದ್ದರು.