<p><strong>ಬೆಂಗಳೂರು:</strong>ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಎಂಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರನ್ನು ಆದಾಯ ತೆರಿಗೆ ಇಲಾಖೆ (ಐ.ಟಿ) ಅಧಿಕಾರಿಗಳು ಗುರುವಾರ ಬೆಳಿಗ್ಗೆಯಿಂದ ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ಕಳೆದ ವರ್ಷದ ನವೆಂಬರ್ನಲ್ಲಿ ಐದು ದಿನ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ ಹಾಗೂ ದೆಹಲಿಯಲ್ಲಿ ನಡೆದ ಐ.ಟಿ ದಾಳಿ ವೇಳೆ ವಶಪಡಿಸಿಕೊಳ್ಳಲಾದ ಆಸ್ತಿಪಾಸ್ತಿ ಹಾಗೂ ದಾಖಲೆಗಳ ಸಂಬಂಧ ಶಶಿಕಲಾ ಅವರನ್ನು ಪ್ರಶ್ನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಬೆಳಿಗ್ಗೆ 10.55ರ ಸುಮಾರಿಗೆ ಜೈಲಿಗೆ ಆಗಮಿಸಿದ ವೀರರಾಘವನ್ ನೇತೃತ್ವದ ಏಳು ಅಧಿಕಾರಿಗಳ ತಂಡ ರಾತ್ರಿ 8 ರವರೆಗೂ ಶಶಿಕಲಾ ಅವರನ್ನು ಪ್ರಶ್ನಿಸಿತು. ಒಬ್ಬರ ಬಳಿಕ ಮತ್ತೊಬ್ಬರು ಪ್ರಶ್ನೆಗಳನ್ನು ಕೇಳಿದರು. ಅವರು ಕೊಟ್ಟ ಉತ್ತರಗಳನ್ನು ದಾಖಲಿಸಿಕೊಂಡರು. ಈ ವೇಳೆ ಕೆಲವು ದಾಖಲೆಗಳನ್ನು ತೋರಿಸಲಾಯಿತು. ಅಧಿಕಾರಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಎಎಂಎಂಕೆ ನಾಯಕಿ ತಿಣುಕಾಡಿದರು. ಕೊಂಚ ಬಳಲಿದಂತೆ ಕಂಡುಬಂದರು ಎಂದು ಮೂಲಗಳು ವಿವರಿಸಿವೆ. ಐ.ಟಿ ಅಧಿಕಾರಿಗಳು ಜೈಲಿನೊಳಗೆ ವಿಚಾರಣೆ ನಡೆಸುತ್ತಿದ್ದರೆ, ಹೊರಗಡೆ ತಮ್ಮ ನಾಯಕಿಗೆ ಬೆಂಬಲ ಸೂಚಿಸಲು ಆ ಪಕ್ಷದ ಕೆಲವು ನಾಯಕರು ಕಾರ್ಯಕರ್ತರು ಸೇರಿದ್ದರು. ಸುಮಾರು 187 ಸ್ಥಳಗಳ ಮೇಲೆ ದಾಳಿ ನಡೆದಿತ್ತು. ಶಶಿಕಲಾ ಅವರಿಗೆ ಸೇರಿದ ಮನೆಗಳು ಮಾತ್ರವಲ್ಲ, ಅವರ ಆಪ್ತರ ಮನೆಗಳು, ಕಚೇರಿಗಳಲ್ಲೂ ಪರಿಶೀಲನೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಎಂಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರನ್ನು ಆದಾಯ ತೆರಿಗೆ ಇಲಾಖೆ (ಐ.ಟಿ) ಅಧಿಕಾರಿಗಳು ಗುರುವಾರ ಬೆಳಿಗ್ಗೆಯಿಂದ ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ಕಳೆದ ವರ್ಷದ ನವೆಂಬರ್ನಲ್ಲಿ ಐದು ದಿನ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ ಹಾಗೂ ದೆಹಲಿಯಲ್ಲಿ ನಡೆದ ಐ.ಟಿ ದಾಳಿ ವೇಳೆ ವಶಪಡಿಸಿಕೊಳ್ಳಲಾದ ಆಸ್ತಿಪಾಸ್ತಿ ಹಾಗೂ ದಾಖಲೆಗಳ ಸಂಬಂಧ ಶಶಿಕಲಾ ಅವರನ್ನು ಪ್ರಶ್ನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಬೆಳಿಗ್ಗೆ 10.55ರ ಸುಮಾರಿಗೆ ಜೈಲಿಗೆ ಆಗಮಿಸಿದ ವೀರರಾಘವನ್ ನೇತೃತ್ವದ ಏಳು ಅಧಿಕಾರಿಗಳ ತಂಡ ರಾತ್ರಿ 8 ರವರೆಗೂ ಶಶಿಕಲಾ ಅವರನ್ನು ಪ್ರಶ್ನಿಸಿತು. ಒಬ್ಬರ ಬಳಿಕ ಮತ್ತೊಬ್ಬರು ಪ್ರಶ್ನೆಗಳನ್ನು ಕೇಳಿದರು. ಅವರು ಕೊಟ್ಟ ಉತ್ತರಗಳನ್ನು ದಾಖಲಿಸಿಕೊಂಡರು. ಈ ವೇಳೆ ಕೆಲವು ದಾಖಲೆಗಳನ್ನು ತೋರಿಸಲಾಯಿತು. ಅಧಿಕಾರಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಎಎಂಎಂಕೆ ನಾಯಕಿ ತಿಣುಕಾಡಿದರು. ಕೊಂಚ ಬಳಲಿದಂತೆ ಕಂಡುಬಂದರು ಎಂದು ಮೂಲಗಳು ವಿವರಿಸಿವೆ. ಐ.ಟಿ ಅಧಿಕಾರಿಗಳು ಜೈಲಿನೊಳಗೆ ವಿಚಾರಣೆ ನಡೆಸುತ್ತಿದ್ದರೆ, ಹೊರಗಡೆ ತಮ್ಮ ನಾಯಕಿಗೆ ಬೆಂಬಲ ಸೂಚಿಸಲು ಆ ಪಕ್ಷದ ಕೆಲವು ನಾಯಕರು ಕಾರ್ಯಕರ್ತರು ಸೇರಿದ್ದರು. ಸುಮಾರು 187 ಸ್ಥಳಗಳ ಮೇಲೆ ದಾಳಿ ನಡೆದಿತ್ತು. ಶಶಿಕಲಾ ಅವರಿಗೆ ಸೇರಿದ ಮನೆಗಳು ಮಾತ್ರವಲ್ಲ, ಅವರ ಆಪ್ತರ ಮನೆಗಳು, ಕಚೇರಿಗಳಲ್ಲೂ ಪರಿಶೀಲನೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>