<p><strong>ಬೆಂಗಳೂರು:</strong> ಜಲಮೂಲಗಳ ಸಮಗ್ರ ನಿರ್ವಹಣೆಗೆ ಉಪಗ್ರಹ ಹಾಗೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧರಿತ ‘ಡಿಜಿಟಲ್ ವಾಟರ್ ಸ್ಟಾಕ್’ ಯೋಜನೆಯನ್ನು ದೇಶದಲ್ಲಿ ಪ್ರಥಮ ಬಾರಿಗೆ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.</p>.<p>ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿತಗೊಂಡಿದ್ದು, ವಿವಿಧ ಇಲಾಖೆಗಳಲ್ಲಿ ಹಂಚಿಹೋಗಿರುವ ಜಲಮೂಲಗಳನ್ನು ಒಂದೇ ವೇದಿಕೆಯಡಿ ನಿರ್ವಹಿಸಿ, ನೀರಿನ ನಿರ್ವಹಣೆ ಮಾಡುವುದು ಈ ಯೋಜನೆಯ ಮೂಲ ಉದ್ದೇಶ ಎಂದು ಹೇಳಿದರು.</p>.<p>ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಟಿಸಿಡಿಎ) ಈ ಯೋಜನೆಯ ನಿರ್ವಹಣೆ ಮಾಡಲಿದೆ. ಕೆರೆಗಳು ಮತ್ತು ಇನ್ನಿತರ ಜಲಮೂಲಗಳ ಸರ್ವೆ ಸೇರಿದಂತೆ ಮೇಲ್ವಿಚಾರಣೆ ಹಾಗೂ ಸಮರ್ಪಕವಾಗಿ ನಿರ್ವಹಣೆಯನ್ನು ‘ಡಿಜಿಟಲ್ ವಾಟರ್ ಸ್ಟಾಕ್’ (ಡಿಡಬ್ಲ್ಯುಎಸ್) ಖಚಿತಪಡಿಸಲಿದೆ ಎಂದರು.</p>.<p>ಉಪಗ್ರಹ ಸೆನ್ಸರ್, ಇಮೇಜಿಂಗ್ ಮತ್ತು ಎಐ ತಂತ್ರಜ್ಞಾನಗಳ ಮೂಲಕ ಕೆರೆಗಳು ಮತ್ತು ಭೂಗರ್ಭದ ಜಲಧಾರೆಗಳ ಸಮಗ್ರ ನಿರ್ವಹಣೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.</p>.<p>41 ತಾಲ್ಲೂಕುಗಳಲ್ಲಿ ಡಿಡಬ್ಲ್ಯುಎಸ್: ಮೊದಲ ಹಂತದಲ್ಲಿ ಅಂತರ್ಜಲವನ್ನು ಅತಿಯಾಗಿ ಬಳಕೆ ಮಾಡುತ್ತಿರುವ 41 ತಾಲ್ಲೂಕುಗಳಲ್ಲಿ ಡಿಡಬ್ಲ್ಯುಎಸ್ ಯೋಜನೆಯನ್ನು ಜಾರಿಗೆ ತರಲಾಗುವುದು. ಜಲಮೂಲಗಳನ್ನು ‘ನೈಸರ್ಗಿಕ ಉಳಿತಾಯ ಖಾತೆ’ಗಳಂತೆ ಪರಿವರ್ತಿಸಿ, ಅವುಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ. ಇದಕ್ಕೆ ಡಿಡಬ್ಲ್ಯುಎಸ್ ಯೋಜನೆ ಸಹಕಾರಿಯಾಗಲಿದೆ ಎಂದು ಬೋಸರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಲಮೂಲಗಳ ಸಮಗ್ರ ನಿರ್ವಹಣೆಗೆ ಉಪಗ್ರಹ ಹಾಗೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧರಿತ ‘ಡಿಜಿಟಲ್ ವಾಟರ್ ಸ್ಟಾಕ್’ ಯೋಜನೆಯನ್ನು ದೇಶದಲ್ಲಿ ಪ್ರಥಮ ಬಾರಿಗೆ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.</p>.<p>ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿತಗೊಂಡಿದ್ದು, ವಿವಿಧ ಇಲಾಖೆಗಳಲ್ಲಿ ಹಂಚಿಹೋಗಿರುವ ಜಲಮೂಲಗಳನ್ನು ಒಂದೇ ವೇದಿಕೆಯಡಿ ನಿರ್ವಹಿಸಿ, ನೀರಿನ ನಿರ್ವಹಣೆ ಮಾಡುವುದು ಈ ಯೋಜನೆಯ ಮೂಲ ಉದ್ದೇಶ ಎಂದು ಹೇಳಿದರು.</p>.<p>ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಟಿಸಿಡಿಎ) ಈ ಯೋಜನೆಯ ನಿರ್ವಹಣೆ ಮಾಡಲಿದೆ. ಕೆರೆಗಳು ಮತ್ತು ಇನ್ನಿತರ ಜಲಮೂಲಗಳ ಸರ್ವೆ ಸೇರಿದಂತೆ ಮೇಲ್ವಿಚಾರಣೆ ಹಾಗೂ ಸಮರ್ಪಕವಾಗಿ ನಿರ್ವಹಣೆಯನ್ನು ‘ಡಿಜಿಟಲ್ ವಾಟರ್ ಸ್ಟಾಕ್’ (ಡಿಡಬ್ಲ್ಯುಎಸ್) ಖಚಿತಪಡಿಸಲಿದೆ ಎಂದರು.</p>.<p>ಉಪಗ್ರಹ ಸೆನ್ಸರ್, ಇಮೇಜಿಂಗ್ ಮತ್ತು ಎಐ ತಂತ್ರಜ್ಞಾನಗಳ ಮೂಲಕ ಕೆರೆಗಳು ಮತ್ತು ಭೂಗರ್ಭದ ಜಲಧಾರೆಗಳ ಸಮಗ್ರ ನಿರ್ವಹಣೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.</p>.<p>41 ತಾಲ್ಲೂಕುಗಳಲ್ಲಿ ಡಿಡಬ್ಲ್ಯುಎಸ್: ಮೊದಲ ಹಂತದಲ್ಲಿ ಅಂತರ್ಜಲವನ್ನು ಅತಿಯಾಗಿ ಬಳಕೆ ಮಾಡುತ್ತಿರುವ 41 ತಾಲ್ಲೂಕುಗಳಲ್ಲಿ ಡಿಡಬ್ಲ್ಯುಎಸ್ ಯೋಜನೆಯನ್ನು ಜಾರಿಗೆ ತರಲಾಗುವುದು. ಜಲಮೂಲಗಳನ್ನು ‘ನೈಸರ್ಗಿಕ ಉಳಿತಾಯ ಖಾತೆ’ಗಳಂತೆ ಪರಿವರ್ತಿಸಿ, ಅವುಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ. ಇದಕ್ಕೆ ಡಿಡಬ್ಲ್ಯುಎಸ್ ಯೋಜನೆ ಸಹಕಾರಿಯಾಗಲಿದೆ ಎಂದು ಬೋಸರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>